Get Updates
Get notified of breaking news, exclusive insights, and must-see stories!

"ಗುಂಡಿ ಮುಚ್ಚೋದಕ್ಕೆ ಯೋಗ್ಯತೆ ಇಲ್ಲ, ಇನ್ನು ಟನಲ್ ರೋಡ್ 50 ತಿಂಗಳಲ್ಲಿ ಮಾಡ್ತಾರಾ?"

ಬೆಂಗಳೂರು, ನವೆಂಬರ್‌ 06: GBA ಚುನಾವಣೆಯಿಂದ ಬೆಂಗಳೂರು ನಗರದಲ್ಲಿ ಇಲ್ಲಿವರೆಗೆ 70% ಆದಾಯ ರೆವಿನ್ಯೂ ಕಲೆಕ್ಟ್ ಆಗ್ತಿದೆ. ಆದರೆ, ಬೆಂಗಳೂರು ನಗರಕ್ಕೆ ವಾಪಸ್ ಏನ್ ಕೊಟ್ಟಿದ್ದೀರಾ.? ರಸ್ತೆ ಗುಂಡಿಗಳಿಂದ ಹಲವಾರು ಸಾವು ನೋವಾಗಿದೆ. ಆದರೆ ಎಷ್ಟು ಗುಂಡಿಗಳನ್ನ ಮುಚ್ಚಿದ್ದಿರಾ.? ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಇಲ್ಲ, ಇನ್ನೂ ಟನಲ್‌ ರೋಡ್‌ 50 ತಿಂಗಳಲ್ಲಿ ಮಾಡ್ತಾರಾ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು

ಜೆಡಿಎಸ್‌ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಸ್ತುವಾರಿ ಸಮಿತಿ ಸಭೆಯ ನಂತರ ಮಾಧ್ಯಮಗಳ ಜತೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಕೊಟ್ಟಿದ್ದ ಗಡುವು ಮುಗಿದಿದೆ. ಬಿಬಿಎಂಪಿನೇ ಬೆಂಗಳೂರಿನಲ್ಲಿ ಹದಿನೈದು ಸಾವಿರ ರಸ್ತೆ ಗುಂಡಿ ಇದೆ ಅಂತ. ಈಗ ಟನಲ್ ಅಂತ ಕುತ್ತಿದ್ದೀರಾ? ಟನಲ್ ರೋಡ್ ಗೆ ಎಷ್ಟು ಬಜೆಟ್ ಬೇಕು, ಅಲ್ಲಿ ಓಡಾಡೋರು ಯಾರು.? ಬರೀ ಕಾರಿನಲ್ಲಿ ಹೋಗೊಕೆ ಬರೋಕೆ 300 ಕೊಡಬೇಕು. ಸಾರ್ವಜನಿಕ ಸಾರಿಗೆಗೆ ಮನ್ನಣೆ ಕೊಡಿ ಎಂದು ವಾಗ್ದಾಳಿ ನಡೆಸಿದರು.

The state government is not qualified to close the pothole Nikhil Kumaraswamy

ಮೆಟ್ರೊದ ದರವನ್ನ ಹೆಚ್ಚಿಗೆ ಮಾಡಿದ್ದಿರಾ.? ಪ್ರತಿದಿನ ವಿದ್ಯಾರ್ಥಿಗಳು, ದಿನಗೂಲಿ ಕೆಲಸ ಮಾಡುವವರು ಸಂಚಾರ ಮಾಡ್ತಾರೆ. ಎಲ್ಲಾತರದ ವರ್ಗದ ಜನರು ಸಂಚಾರ ಮಾಡ್ತಾರೆ.ಮೊದಲು ಆದ್ರ ದರ ಕಡಿಮೆ ಮಾಡಿ. ಸಾರ್ವಜನಿಕರಿಗೆ ಅನುಕೂಲ ಮಾಡಿ. ಯಾವ ಪುರುಷಾರ್ಥಕ್ಕೆ ಟನಲ್ ರೋಡ್ ಮಾಡ್ತಿದ್ದೀರಿ ಎಂದು ತೀವ್ರ ವಾಗ್ದಾಳಿ ನಡೆಸಿದರು. ಈ ಟನಲ್ ರಸ್ತೆ ಯಾರಿಗಾಗಿ ಮಾಡಲಾಗುತ್ತಿದೆ, ಟನಲ್ ನಿರ್ಮಾಣ ಅವೈಜ್ಞಾನಿಕ ಯೋಜನೆ, ಮೊದಲು ಸಾರ್ವಜನಿಕರಿಗೆ ಉತ್ತಮ ರಸ್ತೆಗಳನ್ನು ಕಲ್ಪಿಸಿ. ಈ ಟನಲ್ ರೋಡ್ ನನ್ನು ನಮ್ಮ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತೇನೆ. ಮೊದಲು ರಸ್ತೆ ಗುಂಡಿ ಮುಚ್ಚಿ ಎಂದು ಸರ್ಕಾರ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಅನ್ನ ನೀಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಇದ್ದು ಏನು ಪ್ರಯೋಜನ ?ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ರೈತರು ಏಳು ದಿನದಿಂದ ಹೋರಾಟ ಮಾಡ್ತಿದ್ದಾರೆ, ಸಿಎಂ, ಉಸ್ತುವಾರಿ ಸಚಿವರು ಇದರ ಬಗ್ಗೆ ಚಕಾರ ಎತ್ತಿಲ್ಲಾ. ಅನ್ನ ಕೊಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಇದ್ದು ಪ್ರಯೋಜನ ಏನು.? ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳೇ ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಬ್ಬು ಬೆಳೆಯುವ ರೈತರನ್ನು ಬಲಿಪಶು ಮಾಡಬೇಡಿ. ಕಬ್ಬು ಬೆಳೆಗಾರರು ವಿಚಾರದಲ್ಲಿ ರಾಜಕಾರಣ ಮಾಡದೇ, ರೈತರ ಬೆನ್ನೆಲುಬಾಗಿ ನಿಲ್ಲುವ ಕೆಲಸ ಮಾಡಬೇಕು.ನಾವು ಕೂಡ ಶೀಘ್ರವಾಗಿ ಕಬ್ಬು ಬೆಳೆಗಾರನ್ನು ಭೇಟಿಯಾಗಿ, ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಇನ್ನೂ ಬಿಜೆಪಿ ಜೊತೆ ಜೆಡಿಎಸ್ ವೀಲಿನ ಆಗಿದೆ ಎಂಬ ವಿಚಾರಕ್ಕೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ನಿಖಿಲ್‌ ಕುಮಾರಸ್ವಾಮಿ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ನಮಗೆ ಸಿಕ್ಕಿದ ಬೆಂಬಲ ನೋಡಿ ಕಾಂಗ್ರೆಸ್ ನವರು ಬೆಚ್ಚಿಬಿದ್ದಿದ್ದಾರೆ. ಆಗಾಗಿ ಈ ರೀತಿ ಮಾತಾಡ್ತಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಿಡಿ ಕಾರಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+