ನೇಹಾ ಕನ್ವರ್ಟ್ ಗೆ ಯತ್ನ; ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ: ಪ್ರಹ್ಲಾದ ಜೋಶಿ ಆಕ್ರೋಶ
ಹುಬ್ಬಳ್ಳಿ, ಏಪ್ರಿಲ್ 21: ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಮಾದ್ಯಮದವರೊಂದಿಗೆ ಮಾತನಾಡಿ ಪ್ರಹ್ಲಾದ್ ಜೋಶಿ ಅವರು, ಸರ್ಕಾರ ಮತ್ತು ಸಮಾಜ ಇಚ್ಛೆತ್ತುಕೊಳ್ಳಬೇಕು, ಬಹಳ ಜಾಗ್ರತೆಯಿಂದ ಇರಬೇಕು ಎಂದು ಸಲಹೆ ಮಾಡಿದರು. ಸಿಎಂ, ಡಿಸಿಎಂ, ಗೃಹ ಸಚಿವರು ತುಷ್ಟಿಕರಣದ ನೀತಿಯಿಂದಾಗಿ ಹೇಗೆಲ್ಲ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ನೇಹಾಳನ್ನು ಕನ್ವರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ ಆಕೆ ಒಪ್ಪಿರಲಿಲ್ಲ ಎಂಬುದನ್ನು ಆಕೆ ತಂದೆಯೇ ಹೇಳಿದ್ದಾರೆ. ಆರೋಪಿ ಫಯಾಜ್ ನೇಹಾಳನ್ನು ಕನ್ವರ್ಟ್ ಮಾಡಿ ಮದುವೆ ಮಾಡಿಕೊಳ್ಳಲು ನೋಡಿದ್ದಾನೆ. ಇದಕ್ಕೆ ನೇಹಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಒಪ್ಪದಿದ್ದಾಗ ಅಂತಿಮವಾಗಿ ಹತ್ಯೆ ಕೃತ್ಯ ವೆಸಗಿದ್ದಾನೆ ಎಂದು ನೇಹಾಳ ತಂದೆ ನಿರಂಜನ್ ಹಿರೇಮಠ್ ಅವರೇ ನನ್ನೆದುರು ಮಾತ್ರವಲ್ಲಾ ಬಹಿರಂಗವಾಗೇ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಕಾಂಗ್ರೆಸ್ ಕಾರ್ಪೋರೇಟರ್ ಆದ ನನ್ನ ಮಗಳ ಘಟನೆಯಲ್ಲೇ ಹೀಗೆ ವರ್ತಿಸುತ್ತಿದ್ದೀರಿ. ಇನ್ನು ಜನ ಸಾಮಾನ್ಯರ ಗತಿ ಏನು? ನಿರಂಜನ್ ಅವರೇ ಸಿಎಂ, ಗೃಹ ಸಚಿವರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಅಂಥ ದುಸ್ಥಿತಿಗೆ ತಂದಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹರಿಹಾಯ್ದರು. ನೇಹಾಳನ್ನು ಹಾಡಹಗಲೇ ಒಂಬತ್ತು-ಹತ್ತು ಬಾರಿ ಚೂರಿ ಇರಿದು ಹತ್ಯೆಗೈದ ದೃಶ್ಯ ನೋಡಿದರೂ ಈ ಕಾಂಗ್ರೆಸ್ಸಿಗರಿಗೆ ಕರುಣೆಯೇ ಇಲ್ಲ. ನೇಹಾಳ ಕುಟುಂಬಕ್ಕೆ ನ್ಯಾಯ ಕೊಡಬೇಕು ಎಂಬ ಕಿಂಚಿತ್ತೂ ಜವಾಬ್ದಾರಿ ಇಲ್ಲ ಎಂದು ಸರ್ಕಾರದ ವಿರುದ್ಧ ಜೋಶಿ ಕಿಡಿ ಕಾರಿದರು.
ಡಿಜೆ ಹಳ್ಳಿ-ಕೆಜೆ ಹಳ್ಳಿ, ರಾಮೇಶ್ವರ್ ಕೆಫೇ ಬಾಂಬ್ ಸ್ಫೋಟ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ಉಡುಪಿಯ ಟಾಯ್ಲೆಟ್ ಒಳಗೆ ಕ್ಯಾಮರಾ ಇಟ್ಟ ಪ್ರಕರಣ ಹೀಗೆ ಎಲ್ಲಾ ಘಟನೆಗಳಲ್ಲೂ ಇವರ ತುಷ್ಟಿಕರಣ ನೀತಿ ಮಿತಿಮೀರಿದೆ. ಇದರಿಂದಾಗಿ ಜನರ ಆಕ್ರೋಶ ಮುಗಿಲು ಮುಟ್ಟಿದೆ ಎಂದು ಪ್ರಹ್ಲಾದ ಜೋಶಿ ಎಚ್ಚರಿಸಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications