ಕಾಂಗ್ರೆಸ್ಸಿಗರ ಕುರ್ಚಿ ಕಾದಾಟ; ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಕಚ್ಚಾಟದಿಂದ ಅಭಿವೃದ್ಧಿಯೇ ಇಲ್ಲ: ವಿಜಯೇಂದ್ರ ಹೇಳಿದ್ದೇನು?
ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ನಿನ್ನೆ ಜರ್ಮನಿಯ ಚಾನ್ಸೆಲರ್ ಕರ್ನಾಟಕಕ್ಕೆ ಬಂದಿದ್ದರು. ಜರ್ಮನಿಯು ಉತ್ಪಾದನಾ ಹಬ್ ಆಗಿರುವ ತಂತ್ರಜ್ಞಾನದ ದೇಶ. ಅಂಥ ದೇಶದ ಚಾನ್ಸೆಲರ್ ಕರ್ನಾಟಕಕ್ಕೆ ಬಂದರೆ, ಇವರಲ್ಲಿ ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಅದೇ ಕುರ್ಚಿ ಕಸಿದುಕೊಳ್ಳಲು ಹೋಗಿ ರಾಹುಲ್ ಗಾಂಧಿ ಜೊತೆ ನಿಂತುಕೊಂಡಿದ್ದಾರೆ. ಇದರಂದ ರಾಜ್ಯದ ಪರಿಸ್ಥಿತಿ ಏನಾಗಬೇಕು ಎಂದು ಕೇಳಿದರು.

ಇದೆಲ್ಲವನ್ನೂ ರಾಜ್ಯದ ಜನರು ಗಮನಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಉತ್ತರ ನೀಡುತ್ತಾರೆ ಎಂದು ತಿಳಿಸಿದರು. ಕಾಂಗ್ರೆಸ್ಸಿನಲ್ಲಿ ಆಂತರಿಕ ಕಚ್ಚಾಟ ಇದೆ. ಒಬ್ಬರು ಕುರ್ಚಿ ಉಳಿಸಿಕೊಳ್ಳಲು ಕಾತುರದಲ್ಲಿದ್ದಾರೆ. ನನ್ನ ತಾಳ್ಮೆ ಕೆಣಕಬೇಡಿ; ನಾನು ಸಿಎಂ ಆಗಬೇಕೆಂದು ಉಳಿದವರು ರೆಡಿ ಆಗಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ಇನ್ನೂ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಷ್ಟೇ ಅಲ್ಲ; ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದಾಗ ನಾವೆಲ್ಲರೂ ಬಳ್ಳಾರಿ ಪಾದಯಾತ್ರೆ ಮಾಡುವುದು ಒಳ್ಳೆಯದು ಎಂಬ ಅಭಿಪ್ರಾಯ ಬಹುತೇಕ ಎಲ್ಲರದೂ ಆಗಿದೆ. ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನಿಸಬೇಕಾಗಿದೆ ಎಂದು ನುಡಿದರು. ನಾನು ಈಗಾಗಲೇ ಈ ಕುರಿತು ಪಕ್ಷದ ದೆಹಲಿ ವರಿಷ್ಠರಿಗೆ ಮಾತನಾಡಿದ್ದೇನೆ. ಇವತ್ತು, ನಾಳೆಯೊಳಗೆ ಅದರ ಬಗ್ಗೆ ಸಂದೇಶವುಳ್ಳ ಮಾಹಿತಿ ಬರಲಿದೆ ಎಂದು ತಿಳಿಸಿದರು.
17ರಂದು ಬೃಹತ್ ಹೋರಾಟಕ್ಕೆ ಜನಾರ್ದನ ರೆಡ್ಡಿ, ಶ್ರೀರಾಮುಲು, ಪಕ್ಷದ ಹಿರಿಯ ನಾಯಕರು ಬರಲಿದ್ದಾರೆ. ಕಾಂಗ್ರೆಸ್ ಸರಕಾರದ ವೈಫಲ್ಯಗಳು, ಭ್ರಷ್ಟಾಚಾರ, ರಾಜ್ಯದಲ್ಲಿನ ಅರಾಜಕತೆ ಸೃಷ್ಟಿ, ರಾಜ್ಯದ ರೈತರ ಸಮಸ್ಯೆ, ಡ್ರಗ್ಸ್ ಹಾವಳಿ- ಇವೆಲ್ಲ ವಿಚಾರಗಳನ್ನು ತೆಗೆದುಕೊಂಡು ರಾಜ್ಯದಲ್ಲಿ ವಿವಿಧ ಹಂತದ ಹೋರಾಟ ಮಾಡಲು ಪಕ್ಷ ಈಗಾಗಲೇ ನಿರ್ಧರಿಸಿದೆ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಸಂದರ್ಭದಲ್ಲಿ ಬಳ್ಳಾರಿಯಲ್ಲಿ ಬೃಹತ್ ಹೋರಾಟವನ್ನು ಇದೇ 17ರಂದು ನಾವು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ಮನ್ ರೇಗಾ ಬದಲು ವಿಕಸಿತ ಭಾರತ ಜಿ ರಾಮ್ ಜಿ ಎಂದು ಕೇವಲ ಹೆಸರು ಬದಲಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಅಥವಾ ಗ್ರಾಮಗಳ ಅಭಿವೃದ್ಧಿ ಆದಾಗ ದೇಶ ಅಭಿವೃದ್ಧಿ ಆಗುತ್ತದೆ ಎಂಬ ಕನಸು ನನಸು ಮಾಡುವ ನಿಟ್ಟಿನಲ್ಲಿ ಹೊರಟಿದ್ದಾರೆ. 2006ರಲ್ಲಿ ಆರಂಭವಾದ ಮನ್ರೇಗಾ ಯೋಜನೆಯಡಿ ಹಗರಣಗಳು, ಭ್ರಷ್ಟಾಚಾರ, ಕೂಲಿಕಾರರಿಗೆ ಹಣ ತಲುಪದೇ ಇರುವುದು ನಡೆದಿತ್ತು ಎಂದು ಹೇಳಿದರು.
ವಿಬಿ ಜಿ ರಾಮ್ ಜಿ ಅಡಿಯಲ್ಲಿ ಗ್ರಾಮೀಣ ಭಾಗದಲ್ಲಿ ಆಸ್ತಿ ನಿರ್ಮಾಣ, ಅಭಿವೃದ್ಧಿ ಆಗಬೇಕು. ರೈತರ ಅನಾನುಕೂಲ ತಪ್ಪಿಸಲು ಕೃಷಿ ಚಟುವಟಿಕೆ ಸಂದರ್ಭದಲ್ಲಿ 60 ದಿನಗಳ ಕಾಲ ಕೂಲಿಗೆ ಅವಕಾಶ ನೀಡದೇ ರಜೆ ಕೊಟ್ಟಿದ್ದಾರೆ. ಹಿಂದೆಯೂ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ತೀರ್ಮಾನ ಆಗುತ್ತಿತ್ತು. ಮುಂದಿನ ದಿನಗಳಲ್ಲೂ ಅದೇ ಆಗಲಿದೆ.
ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯನವರು, ರಾಹುಲ್ ಗಾಂಧಿಯವರು ಜಿ ರಾಮ್ ಜಿ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಬಗ್ಗೆ ಜನರ ವಿಶ್ವಾಸ ಹೊರಟುಹೋಗಿದೆ. ಹಾಗಾಗಿ, ಮಹಾತ್ಮ ಗಾಂಧೀಜಿ ಅವರನ್ನು ಎರಡನೇ ಬಾರಿಗೆ ಕೊಲೆ ಮಾಡುತ್ತಿದ್ದಾರೆಂದು ಅಪಪ್ರಚಾರ ಮಾಡಲು ಹೊರಟಿದ್ದಾರೆ. ಇದಕ್ಕೆ ಬಿಜೆಪಿ, ರಾಜ್ಯದ ಎಲ್ಲ ತಾಲ್ಲೂಕು ಕೇಂದ್ರಗಳು, ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದೆ ಎಂದು ಹೇಳಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications