ಸಿಎಂ ಕುರ್ಚಿ ಕದನ: 'ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು'
ಬೆಂಗಳೂರು: ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಅದು ಸಿದ್ದರಾಮಯ್ಯನವರು ಅಂತ ಭಾವಿಸಿದ್ದೆವು. ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು ಒಬ್ಬರು ದೆಹಲಿಯಲ್ಲಿ ಇದ್ದಾರೆ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯನವರು ಅವರ ಆದೇಶವನ್ನು ಪಾಲಿಸಲಿಕ್ಕೆ ಕರ್ನಾಟಕದಲ್ಲಿ ಸಿಎಂ ಸ್ಥಾನದಲ್ಲಿದ್ದಾರೆ ಎಂಬುದು ಈ ಮೂರು ದಿನದೊಳಗೆ ನಮಗೆ ಗೊತ್ತಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.
ಇಂದು ಮಹತ್ವದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇರಳ ಸರಕಾರದ ಆದೇಶಗಳು ಜಾರಿ ಆಗುತ್ತಿವೆ ಎಂದು ಸುದ್ದಿಯಾಗುತ್ತಿದೆ ಎಂಬುದಾಗಿ ಆಕ್ಷೇಪಿಸಿದರು. ನಾನು ಬಡವರ ಬಗ್ಗೆ ವಿರೋಧ ಅಲ್ಲ. ಯಾರು ನಿಜವಾಗಿಯೂ ನಮ್ಮ ನಾಡಿನವರು ಬಡವರಿದ್ದಾರೋ ಅಂತವರಿಗೆ ಸೂರು ಕಟ್ಟಿಕೊಡಲಿಕ್ಕೆ ನಮ್ಮ್ದ ವಿರೋಧ ಇಲ್ಲ. ಆದರೆ ಸಿದ್ದರಾಮಯ್ಯನವರ ಸರ್ಕಾರ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಹಿಂದುಳಿದವರ ಹೆಸರು ಮೇಲೆ ಅಧಿಕಾರಕ್ಕೆ ಬಂದಂತ ಒಬ್ಬ ಅಹಿಂದ ನಾಯಕ ಸ್ವಂತ ವಿವೇಚನೆಯಿಂದ ಅಧಿಕಾರ ನಡೆಸುತ್ತಿಲ್ಲವೆಂದರೆ, ಅವರು ಯಾವ ಸೀಮೆ ಮುಖ್ಯಮಂತ್ರಿಗಳು ಎಂದು ಕೇಳಿದರು.

ದೆಹಲಿಯಲ್ಲಿ ಕೂತವರು ಟಮ್ರ್ಸ್ ಡಿಕ್ಟೇಟ್ ಮಾಡುತ್ತಾರೆ. ಅವರು ಹೇಳಿದಂತೆ ಅವರ ಅಣತಿಯಂತೆ ನಡೆಯುತ್ತದೆ. ಬೆಂಗಳೂರಿನವರು, ನಮ್ಮವರೇ ಕಲ್ಯಾಣ ನಗರ ಕಮ್ಮನಹಳ್ಳಿ ಒಳಗೆ ಎಸ್ಸಿ ಜನಾಂಗದವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಅನೇಕ ವರ್ಷಗಳಿಂದ ಇದ್ದರು. ಅವರನ್ನು ಬುಲ್ಡೋಜರ್ ಬಳಸಿ ಸಿದ್ದರಾಮಯ್ಯನವರ ಸರ್ಕಾರ ಖಾಲಿ ಮಾಡಿಸಿತು. ಅವರ ಬಗ್ಗೆ ಯಾರೂ ಸಹಾನುಭೂತಿ ವ್ಯಕ್ತ ಮಾಡಲಿಲ್ಲ. ಅವರಿಗೊಂದು ಮನೆ ಕೊಡುವುದಾಗಿ ಹೇಳಲಿಲ್ಲ. ಆದರೆ ಇವತ್ತು ಕೋಗಿಲು ಕ್ರಾಸ್ನಲ್ಲಿ ಇರುವವರಲ್ಲಿ ಹೊರಗಿನವರು ಎಷ್ಟು, ಹೊರಗಿನ ದೇಶದವರು ಎಷ್ಟು ಎಂಬ ಬಗ್ಗೆ ನಗರದಲ್ಲಿ ಬಹಳ ದೊಡ್ಡ ಸುದ್ದಿಯಾಗಿ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಅವರ ಬಗ್ಗೆ ಕೇರಳದ ಮುಖ್ಯಮಂತ್ರಿ ಮತ್ತು ವೇಣುಗೋಪಾಲ್ ಅವರ ಅಣತಿಯಂತೆ ಸ್ವತಃ ಮುಖ್ಯಮಂತ್ರಿಗಳು, ಡಿಸಿಎಂ ಮೀಟಿಂಗ್ ಮಾಡಿ ಮನೆ ಕಟ್ಟಿ ಕೊಡುವ ಕುರಿತು 24 ಗಂಟೆ ಒಳಗೆ ಒಂದು ಯೋಜನೆ ಸಿದ್ಧಪಡಿಸಿ ಆದೇಶ ಮಾಡುತ್ತಾರೆ. ನಮ್ಮವರು, ದಲಿತರು ಅದರಲ್ಲೂ ಅಸ್ಪøಶ್ಯ ಜನಾಂಗದವರು ಕಮ್ಮನಹಳ್ಳಿಯಲ್ಲಿ ಇರುವವರಿಗೆ ಒಂದೇ ಒಂದು ಗುಂಟೆ ಜಾಗ ಕೊಟ್ಟಿಲ್ಲ. ಒಂದು ಮನೆ ಕೊಟ್ಟಿಲ್ಲ. ಸಿದ್ದರಾಮಯ್ಯನವರದು ದಲಿತ ವಿರೋಧಿ ಸರ್ಕಾರ ಅಂತ ನಾವು ಹೇಳಬೇಕಾಗುತ್ತದೆ ಎಂದರು.
ಸಿದ್ದರಾಮಯ್ಯನವರು ಕೆಲವು ತಿಂಗಳುಗಳ ಹಿಂದೆ ಡಿಜೆಹಳ್ಳಿ ಕೆಜೆಹಳ್ಳಿ ಪ್ರಕರಣದ ಆರೋಪಿಗಳ ವಿರುದ್ಧ ಇದ್ದ ಕೇಸನ್ನು ವಾಪಸ್ ಪಡೆಯಲಿದ್ದಾರೆಂದು ಮಾಧ್ಯಮಗಳಲ್ಲಿ ಬಹಳ ಜೋರಾಗಿ ಸುದ್ದಿ ಆಯಿತು. ಕಾಂಗ್ರೆಸ್ ಶಾಸಕ, ಇಡೀ ರಾಜ್ಯದಲ್ಲಿ ಹೆಚ್ಚು ಮತಗಳನ್ನು ಪಡೆದು ಬಂದಂತ ಒಬ್ಬ ಗೌರವಾನ್ವಿತ ವ್ಯಕ್ತಿ ಅಖಂಡ ಶ್ರೀನಿವಾಸಮೂರ್ತಿ. ಅವರನ್ನು ರಾಜಕೀಯವಾಗಿ ಮುಗಿಸಿದರು. ಮನೆ ಸುಟ್ಟರು; ಮನೆನು ಕೆಡವಿ ಹಾಕಿದ್ದರು. ಆದರೆ, ಅದರ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಒಬ್ಬರಿಗೂ ಕಳಕಳಿ ಹುಟ್ಟಲಿಲ್ಲ; ರಾಹುಲ್ ಗಾಂಧಿಗೂ ಹುಟ್ಟಲಿಲ್ಲ, ಸೋನಿಯಾ ಗಾಂಧಿಗೂ ಹುಟ್ಟಲಿಲ್ಲ. ಸಿದ್ದರಾಮಯ್ಯಗೂ ಇಲ್ಲ, ಡಿಕೆ ಶಿವಕುಮಾರ್ ಅವರಿಗೂ ಇಲ್ಲ. ಇದು ದಲಿತರ ಬಗ್ಗೆ ಕಾಂಗ್ರೆಸ್ಸಿನ ನೀತಿ ಎಂದು ದೂರಿದರು.
ಕೋಗಿಲು ಕ್ರಾಸ್ನ ಮಾದರಿಯಲ್ಲೇ ಕಲ್ಯಾಣ ನಗರದಲ್ಲಿ ಇರುವ, ಕಮ್ಮನಹಳ್ಳಿಯಲ್ಲಿ ಇರುವ ಎಸ್ಸಿ ಎಸ್ಟಿ ಜನಾಂಗದವರಿಗೂ ಮನೆ ಕಟ್ಟಿಕೊಡುದಂತ ಕೆಲಸ ನೀವುÀ ಮಾಡಬೇಕಲ್ಲವೇ ಸಿದ್ದರಾಮಯ್ಯನವರೇ ಎಂದು ಕೇಳಿದರು. ನಿಮ್ಮ ಕುರ್ಚಿ ಕಾದಾಟದಲ್ಲಿ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ನಿಷ್ಕ್ರಿಯ ಆಗಿದೆ; ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಎಂದು ಅರೋಪಿಸಿದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications