ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸಚಿವರ ಭರವಸೆ: ಸಿಎಂ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 06: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದ ಕೂಡಲೇ ಸಚಿವ ಸಂಪುಟದಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸರ್ವ ಪ್ರಯತ್ನಗಳನ್ನು ಮಾಡುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಇಂದು ಕೇಂದ್ರ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ಇಂಧನ ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕೇಂದ್ರ ಸಚಿವರೊಂದಿಗೆ ನಾಲ್ಕೈದು ಯೋಜನೆಗಳ ಬಗ್ಗೆ ವಿವರವಾಗಿ ಚರ್ಚೆಯಾಗಿದೆ. ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಕುರಿತು ಚರ್ಚೆಯಾಗಿದೆ. ಈ ಯೋಜನೆಗಳ ಕುರಿತು ರಾಜ್ಯದ ನಿಲುವು ಹಾಗೂ ವಿಧಾನಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಮೇಕೆದಾಟು ಯೋಜನೆಯ ಡಿಪಿಆರ್ ಅನುಮೋದಿಸುವುದು ಹಾಗೂ ಮಹದಾಯಿ ಯೋಜನೆಯ ಸಾಧ್ಯತಾ ವರದಿಗೆ ಒಪ್ಪಿಗೆ ನೀಡುವುದನ್ನು ಆದಷ್ಟು ಬೇಗನೆ ಮಾಡಲಾಗುವುದು ಎಂದು ಹೇಳಿದ್ದಾರೆ ಎಂದರು. ನಾಳೆ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಲಿದ್ದು ಅವರೊಂದಿಗೂ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.
ಮೇಕೆದಾಟು ಯೋಜನೆ:
ಮೇಕೆದಾಟು ಯೋಜನೆಯಿಂದ ನಮಗೆ ನ್ಯಾಯಸಮ್ಮತವಾಗಿ ದೊರೆಯಬೇಕಾದ ನೀರು ನಮಗೆ ದೊರೆಯುತ್ತದೆ. ಇದರಿಂದ ತಮಿಳುನಾಡಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ಪ್ರತಿ ವರ್ಷ ತಮಿಳುನಾಡಿಗೆ ಅವರ ಪಾಲಿನ ನೀರಿಗಿಂತಲೂ ಹೆಚ್ಚುವರಿ ನೀರು ಹೋಗುತ್ತಿದೆ. ಅದು ಎಲ್ಲಿ ಕಡಿಮೆಯಾಗುತ್ತದೆ ಎನ್ನುವ ಆತಂಕ ಅವರದ್ದು. ನ್ಯಾಯಾಧಿಕರಣದ ತೀರ್ಮಾನದಂತೆ ಅವರ ಪಾಲನ್ನು ಒದಗಿಸಲಾಗುವುದು ಎಂದರು.

ಕೃಷ್ಣಾ ಮೇಲ್ದಂಡೆ:
ಯು.ಕೆ.ಪಿ 3ನೇ ಹಂತದ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಬೇಕಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ನಮ್ಮ ವಕೀಲರು ಸಹ ನ್ಯಾಯಾಲಯ ದಲ್ಲಿ ವಾದ ಮಾಡಿದ್ದಾರೆ. ಜೊತೆಗೆ ನ್ಯಾಯಮೂರ್ತಿಗಳ ನೇಮಕಾತಿ ಆದಷ್ಟು ಶೀಘ್ರವಾಗಿ ಮಾಡಲು ಪ್ರಯತ್ನ ಗಳು ನಡೆದಿದೆ ಎಂದು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications