ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್‌

ಬೆಳಗಾವಿ, ಡಿಸೆಂಬರ್‌ 09: ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್‌ ನ್ಯೂಸ್‌ ನೀಡಲಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ ಪ್ರತಿ ಕುಟುಂಬದ ಮಹಿಳೆಗೆ 2000 ರೂಪಾಯಿ ನೀಡಲಾಗುತ್ತಿದ್ದು, ಇದೀಗ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದೆ.

ಹಿರೇ ಬಾಗೇವಾಡಿ ಗ್ರಾಮದಲ್ಲಿ‌ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕಳೆದ ಹಲವು ವರ್ಷಗಳಿಂದ ಅತ್ಯಂತ ಕ್ರಿಯಾಶೀಲ ಕೆಲಸಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು, ಅವರಲ್ಲಿ ಅರ್ಥಿಕ ಬಲ ತುಂಬಲು ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ.

The women of the state the establishment of grihalaxmi sangh soon

ಮಹಿಳೆ ಮೂಲತಃ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ ಕಾಲ ಮೇಲೆ ತಾನು ನಿಲ್ಲಬೇಕು, ತಾನೂ ದುಡಿದು ಕುಟುಂಬದ ನೊಗ ಹೊರಬೇಕೆನ್ನುವ ತುಡಿತ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ. ನಮ್ಮ ಸರಕಾರ ಮಹಿಳೆಯರ ಸ್ವಾವಲಂಬನೆಗಾಗಿ, ಸ್ವಾಭಿಮಾನ ಕಾಪಾಡುವುದಕ್ಕಾಗಿ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದೆ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸೇರಿಸಿ ಸ್ವಯಂ ಉದ್ಯೋಗ ಶುರುಮಾಡಿ ಆರ್ಥಿಕವಾಗಿ ಸಬಲರಾಗಬೇಕು ಎಂಬುದೇ ನನ್ನ ಬಯಕೆ. ಜೀವನ ಅಭಿವೃದ್ಧಿ ಆಗಬೇಕು, ಮಕ್ಕಳಿಗೆ ಶಿಕ್ಷಣ ಸಿಗಬೇಕು, ಎಲ್ಲರಿಗೂ ಆರೋಗ್ಯ ಸಿಗಬೇಕು ಎಂಬುದೇ ಗೃಹಲಕ್ಷ್ಮೀ ಯೋಜನೆಯ ಮೂಲ ಉದ್ದೇಶ ಎಂದು ತಿಳಿಸಿದರು.

ಮಹಿಳೆಯರು ತಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು, ಆರ್ಥಿಕ ಸಬಲೀಕರಣದ ಜೊತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು, ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರುತ್ತಿದ್ದಾಳೆ, ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ, 25 ವರ್ಷದ ಹಿಂದೆ ಮಹಿಳೆಯನ್ನು ನೋಡುವ ದೃಷ್ಟಿ ಬೇರೆ ಇತ್ತು, ಇಂದು ಅದು ಬದಲಾಗಿದೆ. ಜಗತ್ತನ್ನೇ ಗೆಲ್ಲುವ ಛಲ ಮಹಿಳೆಗಿದೆ ಎಂದು ಹೇಳಿದರು.

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವುದೇ ರ್ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ. ಈಗ ಕಬ್ಬಿನ ಸೀಸನ್‌ ಆಗಿರುವುದರಿಂದ ಟ್ರ್ಯಾಕ್ಟರ್ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದು ಸಚಿವರು ಹೇಳಿದರು.

ನಾನು ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರ ಜೊತೆ ಮಾತನಾಡಿದ್ದೇನೆ. ಇಂದು ಸಂಜೆ 4 ಗಂಟೆಗೆ ನಾನು ಸ್ವಾಮೀಜಿಗಳು, ಸಿ.ಸಿ.ಪಾಟೀಲ್, ಅರವಿಂದ್ ಬೆಲ್ಲದ ಸೇರಿದಂತೆ ಎಲ್ಲರೂ ಸಭೆ ನಡೆಸುತ್ತಿದ್ದೇವೆ. ಈ ಸಭೆಯಲ್ಲಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದರು.

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ನಡೆಯಲಿರುವ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ಸಚಿವರು ತಿಳಿಸಿದರು.

ನಾನು ಸಚಿವೆ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರುವೆ. ನಾನೂ ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರ್ತೀವಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+