ಮತ್ತೆ ಅಧಿಕಾರಕ್ಕೆ ಬರಲು ತಂತ್ರ, ಒಗ್ಗಟ್ಟು, ಯೋಜನೆಗಳನ್ನ ಬಿಚ್ಚಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ನವೆಂಬರ್‌ 20: ರಾಜ್ಯದ ಜನರಿಗೆ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಹೊಸ ಯೋಜನೆಗಳನ್ನು ನೀಡುತ್ತದೆ. ಮತ್ತೆ ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಮ್ಮ ಬಳಿ ತಂತ್ರ, ಮಂತ್ರ, ಒಗ್ಗಟ್ಟು, ನಾಯಕತ್ವ ಹಾಗೂ ಶಕ್ತಿಯಿದೆ. ಕಾರ್ಯಕರ್ತರು ಆಶಾಭಾವನೆ ಮತ್ತು ಒಗ್ಗಟ್ಟಿನಿಂದ ನಮ್ಮ ಜೊತೆ ಇದ್ದರೆ ಸಾಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿ, ಭಾರತ್ ಜೋಡೋ ಯಾತ್ರೆ ಸಂದರ್ಭ ಮೊಣಕಾಲ್ಮೂರು ಬಳಿ ಟೀ ಕುಡಿಯಲು ಬಿಡುವು ತೆಗೆದುಕೊಂಡಾಗ ಅಜ್ಜಿಯೊಬ್ಬರು ಕೈಯಲ್ಲಿ ಸೌತೆಕಾಯಿ ಹಿಡಿದುಕೊಂಡು ನಿಂತಿದ್ದರು. ಆಗ ರಾಹುಲ್ ಗಾಂಧಿ ಅವರು ಗಮನಿಸಿ ಕೇಳಿದಾಗ, ʼನಿಮ್ಮ ಅಜ್ಜಿ ಇಂದಿರಮ್ಮ ಕೊಟ್ಟ ಭೂಮಿಯಲ್ಲಿ ಇದನ್ನು ಬೆಳೆದಿದ್ದೇವೆ ಎಂದು ಅದನ್ನು ರಾಹುಲ್ ಗಾಂಧಿ ಅವರಿಗೆ ನೀಡಿದರು. ಇದು ಉಳುವವನಿಗೆ ಭೂಮಿ ಕಾರ್ಯಕ್ರಮದ ಫಲ" ಎಂದರು.

There Are Strategies Unity And Plans To Come Back To Power DK Shivakumar Said

ಚನ್ನಪಟ್ಟಣದ ಉಪಚುನಾವಣಾ ಸಭೆಯಲ್ಲಿ ಮಾತನಾಡುವಾಗ ಹಿರಿಯ ಮಹಿಳೆಯೊಬ್ಬರು ಇಂದಿರಾಗಾಂಧಿ ಅವರ ಪಿಂಚಣಿ ಯೋಜನೆಯನ್ನು ನೆನಪಿಸಿಕೊಂಡು ʼಮೊದಲಿಗೆ 40 ರೂಪಾಯಿ ಕೊಡುತ್ತಿದ್ದರುʼ ಎಂದು ತುಂಬಿದ ಸಭೆಯಲ್ಲಿ ಹೇಳಿದರು. ಜನರು ಅವರನ್ನು ಅನೇಕ ಜನಪರ ಯೋಜನೆಗಳಿಗಾಗಿ ಈಗಲೂ ನೆನಪಿಸಿಕೊಳ್ಳುತ್ತಾರೆ. ಬ್ಯಾಂಕ್ ರಾಷ್ಟ್ರೀಕರಣದಿಂದ ದೇಶ ಆರ್ಥಿಕವಾಗಿ ಸಬಲವಾಯಿತು. ನೆಹರು ಅವರ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿ ಇಟ್ಟಿದೆ ಎಂದರು.

ಇಂದಿರಾ ಗಾಂಧಿ ಅವರ ಯುಗದಲ್ಲಿ ನಾವು ಬದುಕಿದ್ದೇವೆ ಎಂಬುದೇ ನಮ್ಮ ಪುಣ್ಯ. ಈ ದೇಶದ ಉಕ್ಕಿನ ಮಹಿಳೆಯನ್ನು ಯಾರೂ ಸಹ ಮರೆಯಲು ಸಾಧ್ಯವಿಲ್ಲ. ಅವರ ಪ್ರತಿಯೊಂದು ಕಾರ್ಯಕ್ರಮ, ದಿಟ್ಟ ಹೆಜ್ಜೆ, ಹೋರಾಟ, ಧೈರ್ಯ, ನಾಯಕತ್ವ ಹಾಗೂ ತ್ಯಾಗ ಹಾಗೂ ಈ ದೇಶ ಭವಿಷ್ಯಕ್ಕೆ ನೆಹರು ಅವರ ಕುಟುಂಬ ನೀಡಿದ ಮಾರ್ಗದರ್ಶನವನ್ನು ದೇಶದ ಜನರು ಮರೆಯಲು ಸಾಧ್ಯವಿಲ್ಲ ಎಂದರು.

ಅಧಿಕಾರ ಎಂದರೆ ಪ್ರತಿಯೊಬ್ಬ ಮಾನವನ ಪ್ರಗತಿ. ನನ್ನ ತಂದೆ ನೆಹರು ಅವರು ರಾಜಕೀಯದ ಪವಾಡ ಪುರುಷ ಇರಬಹುದು ಆದರೆ ರಾಜಕೀಯದಲ್ಲಿ ನನ್ನ ದಾರಿಯೇ ಬೇರೆ. ಚುನಾವಣೆಯಲ್ಲಿ ಸೋಲುವುದು, ಗೆಲ್ಲುವುದು ಮುಖ್ಯವಲ್ಲ. ಈ ದೇಶವನ್ನು ಗಟ್ಟಿಗೊಳಿಸುವುದು ಮುಖ್ಯ. ಜನರು ತಮ್ಮ ಕರ್ತವ್ಯಗಳನ್ನು ಮರೆತುಬಿಡುತ್ತಾರೆ ಆದರೆ ತಮ್ಮ ಹಕ್ಕುಗಳನ್ನು ನೆನಪಿಸಿಕೊಳ್ಳುತ್ತಾರೆ. ಪ್ರಜೆಗಳು ಅವರ ಕರ್ತವ್ಯ ಹಾಗೂ ಹಕ್ಕುಗಳನ್ನು ನಾವು ನೆನಪಿಸಬೇಕು ಎಂದರು.

ಸೋನಿಯಾ ಗಾಂಧಿ ಅವರು ಇಂದಿರಾ ಗಾಂಧಿ ಅವರ ನುಡಿಮುತ್ತುಗಳನ್ನು ಸಂಗ್ರಹಿಸಿರುವ ಪುಸ್ತಕದ ಹಕ್ಕುಸ್ವಾಮ್ಯ ರಾಹುಲ್ ಗಾಂಧಿ ಅವರ ಬಳಿ ಇರುವ ಕಾರಣಕ್ಕೆ ಬೇಗ ಲೋಕಾರ್ಪಣೆಗೊಳಿಸಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅನುಮತಿ ಪಡೆಯಲಾಗುವುದು. ಮಹಾತ್ಮ ಗಾಂಧಿ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ 100 ವರ್ಷಗಳ ನೆನಪಿನ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು" ಎಂದು ಹೇಳಿದರು.

"ನಾವು ದೆಹಲಿಗೆ ಯುವ ಕಾಂಗ್ರೆಸ್ ಸಮ್ಮೇಳನಕ್ಕೆ ತೆರಳುವ ವೇಳೆ ನಿಂತುಬಿಟ್ಟಿತು. ಇಂದಿರಾಗಾಂಧಿ ಅವರ ಹತ್ಯೆಯಾಗಿದೆ ಎನ್ನುವ ಸುದ್ದಿ ಬಂದ ಕಾರಣಕ್ಕೆ ರೈಲು ದೊಡ್ಡಬಳ್ಳಾಪುರದ ಹತ್ತಿರ ನಿಂತು ಬಿಟ್ಟಿತು. ಬೆಂಗಳೂರಿನಲ್ಲಿ ಗಲಭೆಯೆದ್ದ ಕಾರಣಕ್ಕೆ ಒಂದಷ್ಟು ಜನರನ್ನು ಜೈಲಿಗೆ ಹಾಕಲಾಯಿತು. ನಾನು ಇದೇ ವೇಳೆ ಜಿಲ್ಲಾಧಿಕಾರಿಗಳಾಗಿದ್ದ ಪುಟ್ಟಣಪ್ಪ ಅವರ ಬಳಿ ಸಿನಿಮಾ ಥಿಯೇಟರ್ ಪ್ರಾರಂಭ ಮಾಡುವುದಕ್ಕೆ ಅನುಮತಿ ಕೇಳಿದೆ. ಅವರು ಯಾವ ಹೆಸರನ್ನು ಇಟ್ಟಿದ್ದೀಯಾ ಎಂದು ಕೇಳಿದರು. ನಾನು ʼಇಂದಿರಾಗಾಂಧಿʼ ಅವರ ಹೆಸರನ್ನು ಇಡುತ್ತೇನೆ ಎಂದು ಹೇಳಿದ ತಕ್ಷಣ ಸಹಿ ಹಾಕಿದರು. ಕೆಪಿಸಿಸಿ ಹಿಂಭಾಗದ ನೂತನ ಕಟ್ಟಡಕ್ಕೆ ನಾಮಕರಣ ಮಾಡುವ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿದೆ ಅವರು ʼಇಂದಿರಾ ಗಾಂಧಿ ಭವನʼ ಎಂದು ಸೂಚಿಸಿದರು. ನಂತರ ಸಭಾಂಗಣಕ್ಕೆ ʼಭಾರತ್ ಜೋಡೋ ಭವನʼ ಎಂದು ಹೆಸರಿಟ್ಟೆವು" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+