Gruhalakshmi: ಐದು ತಿಂಗಳಿನಿಂದ ಅನ್ನಭಾಗ್ಯ ಹಣ ಇಲ್ಲ, ಗೃಹಲಕ್ಷ್ಮಿ ಹಣವೂ ಇಲ್ಲ!
Gruhalakshmi: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕವೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಅದನ್ನು ಜಾರಿ ಮಾಡುವಲ್ಲಿ ಎಡವಿದೆ ಎನ್ನುವ ಮತ್ತೊಂದು ಆರೋಪ ಕೇಳಿ ಬಂದಿದೆ. ಇದಕ್ಕೆ ಕಾರಣ ಕಳೆದ ಐದು ತಿಂಗಳಿನಿಂದಲೂ ಹೆಚ್ಚುವರಿ ಅಕ್ಕಿ ಸಿಗದೆ ಇರುವುದು. ಅನ್ನಭಾಗ್ಯ ಯೋಜನೆಯ ಹಣವೂ ಖಾತೆಗಳಿಗೆ ಬೀಳದೆ ಇರುವುದು ಹಾಗೂ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಸಹ ಬಂದಿಲ್ಲ. ಇದು ಜನರನ್ನು ಕೆರಳಿಸಿದೆ. ಗೃಲಕ್ಷ್ಮಿ ಯೋಜನೆಯಲ್ಲಂತೂ ಪ್ರತಿ ತಿಂಗಳೂ ತಾಂತ್ರಿಕ ಸಮಸ್ಯೆ ಎದುರಾಗುತ್ತಿದೆ ಎನ್ನುವ ಉತ್ತರ ಸರ್ಕಾರದಿಂದ ಬರುತ್ತಿದ್ದು. ಇದು ತೀವ್ರ ಟೀಕೆಗೆ ಗುರಿಯಾಗಿದೆ.
ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಮುಗಿಬಿದ್ದಿವೆ. ಈ ಸಂಬಂಧ ಸಂಸದ ಪ್ರಹ್ಲಾದ್ ಜೋಶಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಹತ್ತು ಕೆಜಿ.. ಹತ್ತು ಕೆಜಿ ಅಕ್ಕಿ ಫ್ರೀ.. ಕಟಾಕಟ್.. ಕಟಾಕಟ್ ಅಂತಾ ಮಹಿಳೆಯರ ಬ್ಯಾಂಕ್ ಅಕೌಂಟ್ ಗೆ ಪ್ರತಿ ತಿಂಗಳು ಹಣ ಬಂದು ಬಿದ್ದೇ ಬಿಡುತ್ತೆ. ಇದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಅಂತಾ ಸುಳ್ಳು ಹೇಳಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಆದರೆ, ಇತ್ತ ಅಕ್ಕಿಯ ಬದಲು ನೀಡುತ್ತಿದ್ದ ಹಣ, ಗೃಹಲಕ್ಷ್ಮಿಯ ಹಣವನ್ನು ನೀಡದೆ ರಾಜ್ಯದ ಜನರಿಗೆ ಸಿದ್ದರಾಮಯ್ಯನವರ ಸರ್ಕಾರ ಮೋಸ ಮಾಡುತ್ತಿದೆ. ರಾಜ್ಯದ ಬೊಕ್ಕಸ ಖಾಲಿ ಮಾಡಿ ಜನರಿಗೆ ಬೆಲೆ ಏರಿಕೆಯ ಬರೆಯನ್ನು ದಿನನಿತ್ಯ ಎಳೆಯುತ್ತಾ ಶಾಕ್ ನೀಡುತ್ತಲೇ ಇದೆ ಎಂದು ಅವರು ಹೇಳಿದ್ದಾರೆ.

ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡುವ ಬದಲು, ಕೇಂದ್ರ ಸರ್ಕಾರ ಪ್ರತಿ ಕೆಜಿ ಅಕ್ಕಿ 22.50 ರೂಪಾಯಿಗೆ ಕೊಡುವುದನ್ನು ಖರೀದಿ ಮಾಡಿ, ವಾರ್ಷಿಕ 2280 ಕೋಟಿ ಅಷ್ಟು ಹಣವನ್ನು ಉಳಿತಾಯ ಮಾಡುವಂತೆ ಹಾಗೂ ಎಷ್ಟು ಬೇಕಾದರೂ ಅಕ್ಕಿಯನ್ನು ನೀಡುವುದಾಗಿ ಹೇಳಿದ್ದರೂ ಸಿದ್ದರಾಮಯ್ಯನವರ ಸರ್ಕಾರ ಜಾಣಕುರುಡು ಪ್ರದರ್ಶಿಸುತ್ತಾ ಜನರಿಗೆ ಮೋಸ ಮಾಡುತ್ತಲೇ ಬಂದಿದೆ. ಇದು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ ಸರ್ಕಾರ ರಾಜ್ಯದ ಜನರಿಗೆ ಮಾಡುತ್ತಿರುವ ಮೋಸದ ಗ್ಯಾರಂಟಿ. ಸಿಎಂ ಸಿದ್ದರಾಮಯ್ಯ ಅವರೇ ನಿಮಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದೂ ಹೇಳಿದ್ದಾರೆ.
ಇನ್ನು ಈ ಸಂಬಂಧ ಮಾತನಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಕಾಂಗ್ರೆಸ್ ನಂಬಿದ್ರೆ ಚೊಂಬು ಗ್ಯಾರಂಟಿ ಎಂದು ಹೇಳಿದ್ದಾರೆ. 5 ತಿಂಗಳಿಂದ ಅನ್ನಭಾಗ್ಯದ ಹಣ ಸಿಕ್ಕಿಲ್ಲ. ಇತ್ತ ಅಕ್ಕಿಯೂ ಕೊಡುತ್ತಿಲ್ಲ. ಗೃಹಲಕ್ಷ್ಮಿ ಹಣ 3 ತಿಂಗಳಿಂದ ಬಂದಿಲ್ಲ ಎಂದಿದ್ದು. ಗ್ಯಾರಂಟಿಗಳ ನೆಪದಲ್ಲಿ ಮತದಾರರನ್ನು ನಂಬಿಸಿ ಮೋಸ ಮಾಡಿ ಅಧಿಕಾರ ಹಿಡಿದ ನಯವಂಚಕ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಕೈಗೆ ದೊಡ್ಡ ಚೊಂಬು ಕೊಟ್ಟಿದೆ ಎಂದಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications