'ಸಂವಿಧಾನ ಬದಲಾಯಿಸುವ ಹುನ್ನಾರ ನಡೆಯುತ್ತಿದೆ'
ಬೆಂಗಳೂರು, ನವೆಂಬರ್ 26: ಸಮಾಜವಾದ,ಜಾತ್ಯತೀತ ಎಂಬ ನೆಲೆಗಟ್ಟಿನಲ್ಲಿ ರಚಿತವಾಗಿರುವ ಸಂವಿಧಾನದ ತಳಹದಿಯನ್ನು ಅಲುಗಾಡಿಸುವ ಪ್ರಯತ್ನಗಳು ನಡೆಯುತ್ತಿದೆ. ಸಂವಿಧಾನ ಬದಲಾವಣೆ ಮಾಡಲು ಹುನ್ನಾರ ನಡೆಯುತ್ತಿದೆ, ಜನರಲ್ಲಿ ಜಾಗೃತಿ ಮೂಡಿದ ಕಾರಣ ಅವರ ತಂತ್ರಗಳು ಮುಂದೂಡಿದೆ ಎಂದು ಹೆಚ್. ಸಿ.ಮಹದೇವಪ್ಪ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಸಂವಿಧಾನ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನವನ್ನು ಅಲುಗಾಡಿಸುವ ಪ್ರಯತ್ನವನ್ನು ಕೋಮುವಾದಿ,ಮೂಲಭೂತವಾದಿ,ಜಾತಿವಾದಿಗಳು ನಡೆಸುತ್ತಿದ್ದಾರೆ.ಸಂವಿಧಾನದ ಆಶಯಗಳನ್ನು ವಿರೋಧಿಸುತ್ತಿದ್ದಾರೆ.ಜನರ ಮನನ್ಸುಗಳ ವಿರುದ್ದ ದಬ್ಬಾಳಿಕೆ ಮತ್ತು ಸರ್ವಾಧಿಕಾರ ಧೋರಣೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಅಂಬೇಡ್ಕರ್ ಬಯಸಿದ್ದ ಸಂವಿಧಾನದ ಆಶಯಗಳು,ಆಶೋತ್ತರಗಳು ಇನ್ನೂ ಸಹ ಅನುಷ್ಠಾನವಾಗಿಲ್ಲ. ಸಂವಿಧಾನವನ್ನು ವಿರೋಧಿಸುವ ದೊಡ್ಡ ವರ್ಗ ಅಸ್ತಿತ್ವದಲ್ಲಿರುವುದರಿಂದ ಅಂಬೇಡ್ಕರ್ ಕಂಡ ಭಾರತ ಇನ್ನೂ ನಿರ್ಮಾಣವಾಗಿಲ್ಲ. ಧರ್ಮ,ಮನುವಾದದ ಮೂಲಕ ನಮ್ಮನ್ನು ನಿಯಂತ್ರಿಸುವ ಶಕ್ತಿಗಳು ಹೆಚ್ಚಾಗುತ್ತಿದೆ.
ಭಾರತದ ಸಂವಿಧಾನ ಈ ನೆಲದ ಸಂಸ್ಕೃತಿ,ಜೀವನ,ಆಚಾರ,ವಿಚಾರಗಳನ್ನು ಬಿಂಬಿಸುತ್ತದೆ. ಜೀವನದ ಮೌಲ್ಯ,ಬದುಕು ಮತ್ತು ಭಾರತದ ಭವಿಷ್ಯ ಮುಖ್ಯ ಎಂದು ಸಂವಿಧಾನ ಒತ್ತಿ ಹೇಳುತ್ತದೆ.ವಿಶ್ವದ ಅನೇಕ ದೇಶಗಳ ಸಂವಿಧಾನ,ಹೋರಾಟ,ಕ್ರಾಂತಿ ಮತ್ತು ಚಳುವಳಿಗಳ ಅಧ್ಯಯನ ನಡೆಸಿ ಅಂಬೇಡ್ಕರ್ರವರು ಭಾರತವನ್ನು ಜಾತಿವಾದ,ಮತೀಯವಾದ,ಧರ್ಮಬೇಧಗಳಿಂದ ಮುಕ್ತಗೊಳಿಸಬೇಕು ಎಂದು ಸಮಗ್ರ ಸಂವಿಧಾನವನ್ನು ಭಾರತೀಯರಿಗೆ ನೀಡಿದರು ಎಂದು ಶ್ಲಾಘಿಸಿದರು.
ವಿಶ್ವವಿದ್ಯಾಲಯಗಳು ಸಾಮಾಜಿಕ ಹೋರಾಟದ ಕೇಂದ್ರಗಳಾಗಬೇಕು.ಹಿಂದೆ ಬೆಂಗಳೂರು, ಮೈಸೂರು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಒಕ್ಕೂಟಗಳು ಏನಾದ್ರೂ ಮಾತನಾಡಿದ್ರೆ ಸರ್ಕಾರಗಳು ಕಣ್ಣು ಬಿಟ್ಟು ನೋಡ್ತಿತ್ತು ಆದರೆ ಇಂದು ವಿಶ್ವವಿದ್ಯಾಲಯಗಳು ಜಾತಿಯ ಗುಂಪುಗಳಾಗುತ್ತಿದೆ.ವಿದ್ಯಾರ್ಥಿಗಳು ಪ್ರತ್ಯೇಕತಾವಾದಿಗಳಾಗುತ್ತಿದ್ದಾರೆ.ಇವರನ್ನು ಒಗ್ಗೂಡಿಸಲು ಸಂವಿಧಾನ ಪೀಠಿಕೆ ಓದಲು ರಾಜ್ಯ ಸರ್ಕಾರದ ವತಿಯಿಂದ ಆದೇಶಿಸಲಾಯಿತು.ಮೊದಲಿಗೆವಿ ದ ಪೀಪಲ್ ಅನ್ನೊದಕ್ಕೆ ನಮ್ಮ ಶಾಸಕರಿಗೆ ಬರ್ತಾ ಇರಲಿಲ್ಲ,ಆದರೆ ಈಗ ಪಂಚಾಯತಿ ಮಟ್ಟದಿಂದ ಸಂವಿಧಾನ ಪೀಠಿಕೆ ಓದುವ ಅಭಿಯಾನ ನಡೆಯುತ್ತಿದೆ.ಸಂವಿಧಾನ ತೆಗೆದು ಹಾಕ್ತೀನಿ ಎಂದವರು ಸಂವಿಧಾನ ಪೀಠಿಕೆ ಓದುತ್ತಿದ್ದಾರೆ ಎಂದು ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ಕಾರ್ಯಕ್ರಮದಲ್ಲಿ ಕುಲಪತಿಗಳು ಡಾ.ಜಯಕರ ಎಸ್.ಎಂ,ಕುಲಸಚಿವರು ಶೇಕ್ ಲತೀಫ್,ದಲಿತ ಮುಖಂಡ ಬಿ.ಗೋಪಾಲ್,ನಿರ್ದೇಶಕರು ಪ್ರೊ.ಹೊನ್ನು ಸಿದ್ದಾರ್ಥ,ಸಿಂಡಿಕೇಟ್ ಸದಸ್ಯರು ಗಂಗರಾಜು,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕ ಪ್ರೊ.ಜಯರಾಮ್ ನಾಯ್ಕ್,ಪ್ರೊ.ಹೆಚ್.ಆರ್.ರವೀಶ್,ಪ್ರೊ.ನಾಗೇಶ್ ಪಿ.ಸಿ ಸೇರಿದಂತೆ ಸಾಕಷ್ಟು ವಿದ್ಯಾರ್ಥಿ, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications