“ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್

ಬೆಂಗಳೂರು, ಏಪ್ರಿಲ್‌ 18: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಿಡಿಕಾರಿದ್ದರು.

ಈ ಕುರಿತು ಮಾತನಾಡಿ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ "ಜೈ ಶ್ರೀರಾಮ್" ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ನಾವು ಹಿಂದೂಸ್ತಾನದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಸಂದೇಹ ಕಾಡುವಂತಾಗಿದೆ ಎಂದರು.

There Is Excessive Attack On Hindus In The State Says R Ashok

ಸಿದ್ದರಾಮಯ್ಯನವರು ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಕರ್ನಾಟಕವನ್ನು ಧಾರೆ ಎರೆದು ಕೊಟ್ಟಿದ್ದಾರಾ ಎಂದು ಭೀತಿ ವ್ಯಕ್ತಪಡಿಸಿದ ಅವರು, ಲಕ್ಷ್ಮಣ ಸವದಿಯವರು ಸಾರ್ವಜನಿಕ ಸಭೆಯಲ್ಲಿ ಕೈಮುಗಿದು ವಿನಮ್ರವಾಗಿ 'ನಾನು ಭಾರತ್ ಮಾತಾ ಕೀ ಜೈ ಅನ್ನಬಹುದೇ ಖರ್ಗೆ ಸಾಬೇಬರೇ' ಎಂದು ಪ್ರಶ್ನಿಸಿದ್ದಾರೆ. ಖರ್ಗೆಯವರು ಅನುಮತಿ ಕೊಟ್ಟಿದ್ದಾರೆ. ಡಿ.ಕೆ.ಸುರೇಶ್ ಅವರು ರಾಮ ದೇವರಲ್ಲ, ನಾವು ಮನೆಯಲ್ಲಿ ಅವರ ಫೋಟೊ ಇಟ್ಟಿಲ್ಲ ಎನ್ನುತ್ತಾರೆ. ಡಿ.ಕೆ.ಸುರೇಶ್ ಅವರೇ, ನೀವು ಕಲ್ಲುಬಂಡೆ ವ್ಯಾಪಾರ ಮಾಡುವವರಲ್ಲವೇ? ಕಲ್ಲು ಬಂಡೆ ಇಟ್ಟುಕೊಳ್ಳಿ. ರಾಮನ ಫೋಟೊ ಯಾಕೆ ಇಡಬೇಕು ಎಂದು ಕೇಳಿದರು. ಇಡೀ ದೇಶದಲ್ಲಿ ರಾಮಭಕ್ತ ಆಂಜನೇಯನ ದೇವಸ್ಥಾನಗಳಿವೆ. ಇದು ನಿಮಗೆ ಕಣ್ಣಿಗೆ ಕಾಣಿಸುವುದಿಲ್ಲವೇ ಎಂದು ಡಿ.ಕೆ.ಸುರೇಶ್ ಅವರನ್ನು ಪ್ರಶ್ನಿಸಿದರು.

ಹಿಂದೂಗಳನ್ನು ಈ ಥರ ಬೈದು ಬೈದು ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆಗಳು ಜಾಸ್ತಿಯಾಗಿವೆ. ಶ್ರೀರಾಮ ಮಂದಿರಕ್ಕೆ ಹೋಗುವ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗುತ್ತಿದೆ. ಮಂಡ್ಯದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಕಿತ್ತು ಹಾಕಿದ್ದೀರಿ. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಹಿಂದೂಗಳು ಭಯದಿಂದ ಬದುಕುವಂಥ ವಾತಾವರಣವನ್ನು ಸಿದ್ದರಾಮಯ್ಯ ಆಂಡ್ ಗ್ಯಾಂಗ್ ಮಾಡುವುದನ್ನು ಖಂಡಿಸುವುದಾಗಿ ಹೇಳಿದರು.

ಚಿಕ್ಕಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದನ್ನು ವಿರೋಧಿಸಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಮಾಡಿ ಹೊಡೆದು ದರೋಡೆ ಮಾಡಿದ್ದಾರೆ. ಕಾಂಗ್ರೆಸ್ ಸರಕಾರ ಪರೋಕ್ಷವಾಗಿ ಗೂಂಡಾಗಿರಿಗೆ ಬೆಂಬಲ ಕೊಡುತ್ತಿದೆ ಎಂದು ಆಕ್ಷೇಪಿಸಿದರು. ಮತ ಹಾಕಿದರೆ ಅವರನ್ನು ರಕ್ಷಿಸುವ ಸಂದೇಶವನ್ನು ಮೂಲಭೂತವಾದಿಗಳಿಗೆ ಕಾಂಗ್ರೆಸ್ ಪಕ್ಷ ನೀಡಿದೆ ಎಂದು ಟೀಕಿಸಿದರು.

ಬಹುಸಂಖ್ಯಾತ ಹಿಂದೂಗಳನ್ನು ಈ ಸರಕಾರ ಕಡೆಗಣಿಸುತ್ತಿದೆ. ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸಿದ್ದರಾಮಯ್ಯನವರು ಗೂಂಡಾ ಕಾಯ್ದೆ, ದೇಶದ್ರೋಹದ ಕೇಸು ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ಅರೆಸ್ಟ್ ಮಾಡಿದ್ದೀರಿ. ಬಿರಿಯಾನಿ ಕೊಟ್ಟು ಕಳಿಸುತ್ತೀರಿ ಎಂದು ಆಕ್ಷೇಪಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಉಪ ಮುಖ್ಯಮಂತ್ರಿಯವರ ಸಹೋದರ ದೇಶ ಇಬ್ಭಾಗ ಮಾಡಬೇಕು ಎನ್ನುತ್ತಾರೆ. ಈ ಥರದ ಹೇಳಿಕೆಗಳಿಂದ ಅಲ್ಪಸಂಖ್ಯಾತ ಮೂಲಭೂತವಾದಿಗಳಿಗೆ ಹುರುಪು ಬಂದಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನವರು ಫಿಟ್ಟಿಂಗ್ ಮಾಸ್ಟರ್‍ಗಳು. ರಾಮೇಶ್ವರಂ ಕೆಫೆ ಬಾಂಬ್ ಹೊಗೆ ಏಳುತ್ತಿರುವಾಗಲೇ ಅದು ಹೋಟೆಲ್ ರೈವಲ್ರಿ ಎಂದಿದ್ದರು ಎಂದು ಟೀಕಿಸಿದರು.

ಇಂಥ ಘಟನೆಗಳಿಗೆ ಕಾರಣವಾದ ಈ ಸರಕಾರ ಬಹಳ ದಿನ ಉಳಿಯುವುದಿಲ್ಲ. ಇದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ಸರಕಾರ ಎಂದು ಬ್ರಾಂಡ್ ಆಗಿದೆ. ಇದು ಜನಕ್ಕೆ ಗೊತ್ತಾಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರು ಇವರಿಗೆ ಪಾಠ ಕಲಿಸುತ್ತಾರೆ ಎಂದರು. ನಿಮ್ಮ ಏಕೈಕ ಎಂಪಿ, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಂಸತ್ತಿನಲ್ಲಿ ಏನು ಮಾಡಿದ್ದಾರೆ? ಕರ್ನಾಟಕದ ಪರವಾಗಿ ಬಾಯಿ ಬಿಟ್ಟೇ ಇಲ್ಲ. ನೀವೇನು ಮಾಡಿದ್ದೀರಿ ಎಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದು ತಿಳಿಸಿದರು.

ಹಿಂದೂಗಳ ರಕ್ಷಣೆ ಬಗ್ಗೆ ಆತಂಕ ಉಂಟಾಗಿದೆ. ದರಿದ್ರ ಸರಕಾರ ಇದು. ನಯಾಪೈಸೆ ಹಣ ಇಲ್ಲ. ಮೇ ಜೂನ್ ನಂತರ ಸಂಬಳ ಕೊಡಲು ದುಡ್ಡಿಲ್ಲ ಎಂಬ ಸ್ಥಿತಿ ಬಂದಿದೆ. ಪಿಂಚಣಿ, ಸ್ಕಾಲರ್‍ಶಿಪ್ ಕೊಟ್ಟಿಲ್ಲ. ಇದರ ಜೊತೆಗೆ ಕರ್ನಾಟಕದ ಶಾಂತಿಯ ತೋಟವನ್ನು ಮತಕ್ಕಾಗಿ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದರ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದು ಎಚ್ಚರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+