'ಸಿದ್ದರಾಮಯ್ಯ, ಪರಮೇಶ್ವರ ನಡುವೆ ಭಿನ್ನಾಭಿಪ್ರಾಯವಿಲ್ಲ'
ಬೆಂಗಳೂರು, ಡಿಸೆಂಬರ್ 05 : 'ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ' ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, 'ದೆಹಲಿಯಿಂದ ಎಲ್ಲರೂ ಒಟ್ಟಿಗೆ ಬಂದಿದ್ದೇವೆ. ಇಬ್ಬರು ನಾಯಕರ ನಡುವೆ ಯಾವುದೇ ಮನಸ್ತಾಪವಿಲ್ಲ. ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಇರುತ್ತವೆ. ಪಕ್ಷ ಎಂದ ಮೇಲೆ ಇವೆಲ್ಲ ಸಾಮಾನ್ಯ' ಎಂದರು.

'ಸಿದ್ದರಾಮಯ್ಯ ಅವರು ನಡೆಸುವ ಜನಾರ್ಶೀವಾದ ಯಾತ್ರೆಯಲ್ಲಿ ಪರಮೇಶ್ವರ ಅವರು ಪಾಲ್ಗೊಳ್ಳುವುದಿಲ್ಲ. ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಅವರು ಪಾಲ್ಗೊಳ್ಳಲಿದ್ದಾರೆ' ಎಂದು ವೇಣುಗೋಪಾಲ್ ತಿಳಿಸಿದರು.
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಿ ಅಶಾಂತಿ ಉಂಟು ಮಾಡುವುದೇ ಬಿಜೆಪಿಯ ಉದ್ದೇಶ. ಇದಕ್ಕೆ ರಾಷ್ಟ್ರೀಯ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿ ಅಭಿವೃದ್ಧಿಯ ವಿಚಾರದಲ್ಲಿ ಮಾತನಾಡಲು ಸಾಧ್ಯವಿಲ್ಲ. ಆದ್ದರಿಂದ ಇಂತಹ ತಂತ್ರಗಳನ್ನು ಮಾತ್ರ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.
ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರಿ, ಪ್ರಚಾರದ ತಂತ್ರ ಮುಂತಾದವುಗಳ ಬಗ್ಗೆ ಕೆಪಿಸಿಸಿ ಪದಾಧಿಕಾರಿ ಜೊತೆ ಚರ್ಚಿಸಲು ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಬುಧವಾರವೂ ಅವರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
-
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications