ಮಾನವೀಯತೆಗಿಂತ ಮಿಗಿಲಾದ ಯಾವುದೇ ಕಾನೂನು ಇಲ್ಲ: ಸಚಿವ ಮಾಧುಸ್ವಾಮಿ
ಆಡಳಿತದ ಚುಕ್ಕಾಣಿ ಹಿಡಿದವರು ಸರ್ಕಾರದ ನಿಲುವು, ಮಾಧ್ಯಮದ ಮಾಹಿತಿ ಹಾಗೂ ಜನ, ಕಾರ್ಯಕರ್ತರ ಅಭಿಪ್ರಾಯದ ಮೇಲೆ ಗಮನ ಹರುಸುವುದು ವಾಡಿಕೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಬೆಂಗಳೂರು, ಫೆಬ್ರವರಿ3: ಮಾನವೀಯತೆಗಿಂತ ಮಿಗಲಾದ ಯಾವುದೇ ಕಾನೂನಿಲ್ಲ. ನಾವು ಮೌಲ್ಯಾಧಾರಿತ ಬದುಕನ್ನು ನಡೆಸಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಶುಕ್ರವಾರ ವಿಕಾಸಸೌಧದಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ವತಿಯಿಂದ ಕಾನೂನು ವಿದ್ಯಾರ್ಥಿಗಳಿಗೆ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆಯ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಡಳಿತದ ಚುಕ್ಕಾಣಿ ಹಿಡಿದವರು ಸರ್ಕಾರದ ನಿಲುವು, ಮಾಧ್ಯಮದ ಮಾಹಿತಿ ಹಾಗೂ ಜನ, ಕಾರ್ಯಕರ್ತರ ಅಭಿಪ್ರಾಯದ ಮೇಲೆ ಗಮನ ಹರುಸುವುದು ವಾಡಿಕೆ. ಕಾನೂನು ಮಾಡಿ ಅದನ್ನು ಕಾರ್ಯರೂಪಕ್ಕೆ ತರುವುದು ಕಷ್ಟದ ಕೆಲಸ. ಇತ್ತೀಚೆಗೆ ಕೆಲ ರಾಜಕಾರಣಿಗಳು ಪ್ರಚಾರಕ್ಕಷ್ಟೇ ಸೀಮಿತವಾಗಿ ಕೆಲಸ ನಿರ್ವಹಿಸುತ್ತಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನಾವು ಬೇರೆ ದೇಶದ ಕಾನೂನನ್ನು ಸಹ ತಿಳಿದು ನಮ್ಮ ದೇಶದ ಕಾನೂನನ್ನು ಅವರಿಗೆ ವಿನಿಮಯ ಮಾಡಿಕೊಡಬೇಕು ಎಂದರು
ಕಾನೂನು ವಿದ್ಯಾರ್ಥಿಗಳು ಅಗಾಧ ಓದಿನ ಜೊತೆಯಲ್ಲಿ ವಿಷಯ ಮನನ ಮಾಡಿಕೊಳ್ಳಬೇಕು. ಯಾವುದೇ ಕೆಲಸ ಮಾಡಿದರೂ ಬದ್ದತೆ ಇರಬೇಕು. ನಮ್ಮ ನಾಡು, ಜನ, ಸಂಸ್ಕೃತಿಯ ಬಗೆಗೆ ಅರಿವು ಇರಬೇಕು. ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಹೆಸರು ಮಾಡಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕಾನೂನು ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿಗಳಾದ ಹೆಚ್. ಕೆ.ಜಗದೀಶ್ ಅವರು, ಕಾನೂನು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಈ ರಾಜ್ಯಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆಯಲ್ಲಿ ಜಿಲ್ಲಾ ವಲಯದ ವಿಜೇತರು ಸೇರಿ ಒಟ್ಟು 50 ಸ್ಪರ್ಧಿಗಳು ಭಾಗವಹಿಸಿದ್ದರು. ಅವರಲ್ಲಿ ಹತ್ತು ಜನರಿಗೆ ಪ್ರಶಸ್ತಿ ನೀಡಲಾಯಿತು.
ಈ ಸ್ಪರ್ಧೆ ಶಾಸಕಾಂಗದ ಮಹತ್ವವನ್ನು ವಿವರಿಸುವ ಅರಿವಿನ ಕಾರ್ಯಕ್ರಮವಾಗಿದೆ. ಇಂದಿನ ಯುವ ವಿದ್ಯಾರ್ಥಿಗಳಿಗೆ ಅಧಿವೇಶನದ ಕಾರ್ಯವಿಧಾನ, ಚಟುವಟಿಕೆ ಬಗೆಗೆ ತಿಳುವಳಿಕೆ ಮೂಡಿಸಿದೆ. ಎಲ್ಲರೂ ದೇಶದ ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕೆಂದರು ಈ ಸ್ಪರ್ಧೆಯಲ್ಲಿ ವಿಜೇತರಾದ ಒಟ್ಟು ಹತ್ತು ಜನರಿಗೆ ಪ್ರಶಸ್ತಿ ನೀಡಲಾಯಿತು. ಪ್ರಥಮ ಸ್ಥಾನ ಭಾರ್ಗವಿ -ಎಸ್ ಡಿ ಎಂ ಕಾಲೇಜು ಮಂಗಳೂರು ರೂ 10000 .ಎರಡನೇ ಸ್ಥಾನ ರಕ್ಷಿತ- ಪಂಚಮಿ ಕಾನೂನು ಕಾಲೇಜು ಬೆಂಗಳೂರು ರೂ 7500 ಮೂರನೇ ಸ್ಥಾನ-ಅನಿಲ್ ರೆಡ್ಡಿ ಎಸ್ ಜೆ ಆರ್ ಕಾನೂನು ಕಾಲೇಜು ರೂ 5000 ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್ ಮಹಾಲಕ್ಷ್ಮಿ, ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸಧಾರಣಾ ಸಂಸ್ಥೆ ನಿರ್ದೇಶಕ ಕೆ.ದ್ವಾರಕನಾಥ್ ಬಾಬು ಉಪಸ್ಥಿತರಿದ್ದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications