"ರಸ್ತೆ ಗುಂಡಿಗಳ ನಿರ್ವಹಣೆಗೂ ಹಣ ಇಲ್ಲ, ಮುಖ್ಯಮಂತ್ರಿಯೂ ಇಲ್ಲ"
ಹಾವೇರಿ,ಅಕ್ಟೋಬರ್29: ರಸ್ತೆ ಗುಂಡಿಗಳ ನಿರ್ವಹಣೆಗೂ ಹಣ ಇಲ್ಲ. ಇದರ ಮೇಲೆ ಮಳೆ ಬಿದ್ದಿದೆ. ಇದರಿಂದ ರಸ್ತೆ ಗುಂಡಿಗಳು ಬಿದ್ದಿವೆ. ಆ ಬಗ್ಗೆ ಚಿಂತನೆ ಮಾಡುವ ಮಂತ್ರಿಗಳು ಇಲ್ಲ. ಮುಖ್ಯಮಂತ್ರಿಯೂ ಇಲ್ಲ. ಹಣ ಇಲ್ಲದ ಕಾರಣ ಎಲ್ಲವೂ ಅಧೋಗತಿಗೆ ಹೋಗಿದೆ ಎಂದು ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ವಿರುದ್ಧ ರಾಜ್ಯ ಸರ್ಕಾರ ಮಾಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರ್ಎಸ್ಎಸ್ ವಿರುದ್ಧ ರಾಜ್ಯ ಸರ್ಕಾರ ಮಾಡಿದ್ದ ಆದೇಶ ಸಂವಿಧಾನ ಬಾಹಿರವಾಗಿದೆ ಎಂದು ನಾನು ಹೇಳಿದ್ದೆ, ಅದನ್ನೇ ರಾಜ್ಯ ಹೈಕೋರ್ಟ್ ಧಾರವಾಡ ಪೀಠ ಮಧ್ಯಂತರ ತಡೆ ನೀಡಿದೆ. ಬಹಳ ಸಷ್ಟವಾಗಿದೆ. ಪ್ರಜಾಪಭುತ್ತದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ ಇದ್ದರೆ, ಸಂವಿಧಾನದಲ್ಲಿ ನಂಬಿಕೆ ಇದ್ದರೆ ಈ ರೀತಿ ಮಾಡುವುದಿಲ್ಲ.

ಮಾತೆತ್ತಿದರೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವಾರು ಸಂವಿಧಾನ ವಿರುದ್ಧ ಕೃತ್ಯಗಳಿದ್ದಾವೆ. ಜನರ ವಾಕ್ ಸ್ವಾತಂತ್ರ್ಯ ನಾಗರಿಕರ ಹಕ್ಕು ಮೊಟಕುಗೊಳಿಸುವ ಕ್ರಮ ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪಯತ್ನಿಸುತ್ತಿದೆ ಎಂದು ಆರೋಪಿಸಿದರು.
ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಆಯೋಗದ ಕುರಿತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗ ಸಂವಿಧಾನ ಬದ್ಧವಾದ ಸಂಸ್ಥೆ ಅವರಿಗೆ ಟೀಕೆ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ಇದರ ಅರಿವು ಇಟ್ಟುಕೊಳ್ಳಬೇಕು. ಯಾವ ಚುನಾವಣಾ ಆಯೋಗದ ಮೂಲಕ ಇವರು ಆಯ್ಕೆಯಾಗಿದ್ದಾರೆ. ಅದನ್ನೇ ತಿರಸ್ಕಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆ ದೇಶದಲ್ಲಿ ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಂಸ್ಥೆಯ ಮೇಲೆ ಸಂಶಯ ಮೂಡಿಸಿ' ಅರಾಜಕತೆ ಮೂಡಿಸುವ ಕೆಲಸ ಮಾಡಿ ಕಾಂಗ್ರೆಸ್ ದೇಶಕ್ಕೆ ದೊಡ್ಡ ಅಪಚಾರ ಮಾಡುತ್ತಿದೆ ಎಂದು ಹೇಳಿದರು.
ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಆರ್ಎಸ್ಎಸ್ ವಿರುದ್ಧ ಕ್ರಮಕ್ಕೆ ಮುಂದಾಗಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಶೂನ್ಯವಾಗಿದ್ದು, ಅದನ್ನು ಮುಚ್ಚ ಹಾಕಲು ಒಂದಿಲ್ಲೊಂದು ಜನರಿಗೆ ಪ್ರಯೋಜನ ಇಲ್ಲದ ವಿಷಯಗಳನ್ನು ತೆಗೆದುಕೊಂಡು ತಮ್ಮ ವೈಫಲ್ಯ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದರು
ರಾಜ್ಯ ಸರ್ಕಾರದಲ್ಲಿ ನವೆಂಬರ್ ಕ್ರಾಂತಿಯ ಕುರಿತು ಕೇಳಿದ ಪಶ್ನೆಗೆ ಪ್ರತಿಕ್ರಿಯಿಸಿ, ಅವರ ಮಧ್ಯ ಏನು ಕ್ರಾಂತಿ ಇದೆ ಅದು ನನಗೆ ಸಂಬಂಧ ಇಲ್ಲ. ಇದೇ ರೀತಿ ಆಡಳಿತ ಮಾಡಿದರೆ ಜನರು ಬಹಳ ಬೇಸತ್ತಿದ್ದಾರೆ. ಸಿದ್ದರಾಮಯ್ಯ ಅವರಿಂದ ಜನರು ಈ ರೀತಿಯ ಆಡಳಿತ ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ











Click it and Unblock the Notifications