"ಸಾರಿಗೆ ನೌಕರರಿಗೆ ಸಿಗಬೇಕಾದ ನೂರಾರು ಕೋಟಿ ಹಿಂಬಾಕಿ ಪಾವತಿಸಲು ದುಡ್ಡಿಲ್ಲ"
ಬೆಂಗಳೂರು, ಸೆಪ್ಟೆಂಬರ್ 02: ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವಂತೆ ನಡು ರಸ್ತೆಯಲ್ಲಿ ಕೆಟ್ಟು ನಿಲ್ಲುತ್ತಿರುವ ಸರ್ಕಾರಿ ಬಸ್ಸುಗಳ ದುರಸ್ತಿಗೆ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ. ಹೊಸ ಬಸ್ಸುಗಳ ಖರೀದಿಗೆ ದುಡ್ಡಿಲ್ಲ. ಸಾರಿಗೆ ನೌಕರರಿಗೆ ಸಿಗಬೇಕಾದ ನೂರಾರು ಕೋಟಿ ಹಿಂಬಾಕಿ ಪಾವತಿಸಲು ದುಡ್ಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಕುರಿತು ಟ್ವೀಟ್ ಮಾಡಿರುವ ಆರ್ ಅಶೋಖ್ ಅವರು, ಯಾವುದಕ್ಕೂ ದುಡ್ಡಿಲ್ಲ, ದುಡ್ಡಿಲ್ಲ ಎಂದು ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿ ಬಸ್ ನಿಲ್ದಾಣಗಳನ್ನು ಹರಾಜು ಹಾಕುವ ದುಸ್ಥಿತಿ ತಂದಿಟ್ಟಿರುವ ದಿವಾಳಿ ಕಾಂಗ್ರೆಸ್ ಈಗ ಸ್ವಂತ ಹೆಲಿಕಾಪ್ಟರ್, ಜೆಟ್ ಖರೀದಿ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಮತ್ತು ನಾಚಿಕೆಗೇಡು. ಸಾರ್ವಜನಿಕರಿಗೆ ಕನಿಷ್ಠ ಸೌಕರ್ಯ ನೀಡುವುದಕ್ಕಿಂತ ಮುಖ್ಯಮಂತ್ರಿಗಳು, ಸಚಿವರ ಐಷಾರಾಮಿ ಶೋಕಿಯೇ ಮುಖ್ಯವಾಗಿರುವ ಈ ಕಾಂಗ್ರೆಸ್ ಸರ್ಕಾರದ ಲಜ್ಜೆಗೆಟ್ಟ ಧೋರಣೆಗೆ ಕನ್ನಡಿಗರು ರೋಸಿ ಹೋಗಿದ್ದಾರೆ ಎಂದು ಕಿಡಿಕಾರಿದರು.

ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಿಗೆ! ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಣವನ್ನ ತೆಲಂಗಾಣ ಚುನಾವಣೆಗೆ, ಲೋಕಸಭೆ ಚುನಾವಣೆಗೆ ಬಳಸಿಕೊಂಡು ನುಂಗಿ ನೀರು ಕುಡಿದಿದ್ದಾಯ್ತು. ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು.
ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಲಿಯಾಗಿದೆ. ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಹಣ ಬಿಡುಗಡ ಸಹಾಯಧನ ಬಿಡುಗಡೆ ಮಾಡಲು 5 ಲಕ್ಷ ಕಮಿಷನ್ ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕಾಂಗ್ರೆಸ್ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಕಮಿಷನ್ ದಂಧೆ, ಲಂಚಗುಳಿತನ, ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಿದ್ದಾರೆ.
ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರವನ್ನ ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂಬಂತೆ SCSP/TSP ಹಣದ ದುರ್ಬಳಕೆ ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಈಗ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆಯುತ್ತಿರುವ ಅಕ್ರಮ ಸಾಕ್ಷಿ ಸಮೇತ ಬಹಿರಂಗವಾಗಿದೆ. ಇಷ್ಟಾದರೂ ತಾವು ಕುರ್ಚಿಗೆ ಅಂಟಿಕೊಂಡು ಕೂರುತ್ತೀರಿ ಎಂದರೆ ನಿಮ್ಮ ಭಂಡತನಕ್ಕೆ ನೀವೇ ಸಾಟಿ. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಇದ್ದರೆ ತಾವು ಇನ್ನೊಂದು ಕ್ಷಣವೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಹೇಳಿದರು.












Click it and Unblock the Notifications