ಕೋವಿಡ್ ರೂಪಾಂತರ: ನೈಟ್ ಕರ್ಫ್ಯೂ ಹಾಕುವ ಬಗ್ಗೆ ಯಡಿಯೂರಪ್ಪ ಮಹತ್ವದ ಹೇಳಿಕೆ!
ಬೆಂಗಳೂರು, ಡಿ. 22: ಇಂಗ್ಲೆಂಡ್ನಲ್ಲಿ ಪತ್ತೆ ಆಗಿರುವ ಕೊರೊನಾ ವೈರಸ್ನ ಹೊಸ ಪ್ರಬೇಧ ಇಡೀ ಜಗತ್ತನ್ನು ಮತ್ತೆ ಆತಂಕಕ್ಕೆ ನೂಕಿದೆ. ಯು.ಕೆ. ಡೆನ್ಮಾರ್ಕ್, ನೆದರ್ ಲ್ಯಾಂಡ್ ಮೊದಲಾದ ಐರೋಪ್ಯ ರಾಷ್ಟ್ರಗಳಲ್ಲಿ ಹೊಸ ಬಗೆಯ ವೈರಾಣು ಹರಡಿರುವುದು ಪತ್ತೆಯಾಗಿದೆ. ಹೀಗಾಗಿ ಖೇಂದ್ರ ಸರ್ಕಾರ ಮುನ್ನಚ್ಚರಿಕೆ ಕ್ರಮವಾಗಿ ಇಂದು (ಡಿ.22) ರಾತ್ರಿಯಿಂದ ಇಂಗ್ಲೆಂಟ್ನಿಂದ ಬರುವ ಎಲ್ಲ ವಿಮಾನಗಳನ್ನು ನಿರ್ಬಂಧಿಸಲಾಗಿದೆ. ಇಂಗ್ಲೆಂಡ್ನಿಂದ ನಿನ್ನೆ ರಾಜ್ಯಕ್ಕೆ ಒಟ್ಟು 537 ಜನರು ರಾಜ್ಯಕ್ಕೆ ಬಂದಿದ್ದರು. ಅವರಲ್ಲಿ 138 ಜನರು ಕೋವಿಡ್ ನೆಗೆಟಿವ್ ವರದಿ ತಂದಿರಲಿಲ್ಲ.
Recommended Video
ರಾಜ್ಯ ಸರ್ಕಾರವೂ ಹೊಸ ಬಗೆಯ ಕೋರೊನಾ ವೈರಸ್ ಕುರಿತು ಕ್ರಮಕೈಗೊಂಡಿದೆ. ಹೀಗಾಗಿ ಮತ್ತೊಮ್ಮೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರುವ ಬಗ್ಗೆಯೂ ಚರ್ಚೆಗಳು ನಡೆದಿವೆ. ಕೊರೋನಾ ರೂಪಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.
ಈ ಬೆಳವಣಿಗೆ ಇಡೀ ರಾಜ್ಯ ಮತ್ತು ದೇಶದ ಜನರನ್ನು ಆತಂಕಕ್ಕೀಡು ಮಾಡಿದೆ ಎಂದು ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಈ ವೈರಾಣು ಕಾಣಿಸಿಕೊಂಡಿದೆ. ನಾವು ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ. ಯಾರೇ ಹೊರಗಡೆಯಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ನೋಡಿ ಪರಿಶೀಲಿಸಿ ತಪಾಸಣೆ ಮಾಡುತ್ತೇವೆ. ದೇಶಾದ್ಯಂತ ಈಗಾಗಲೇ ಹೈಅಲರ್ಟ್ ಇದೆ. ಪ್ರಧಾನಿ ಮೋದಿ ಅವರು ಕೂಡಾ ಆತಂಕಕ್ಕೊಳಗಾಗದೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ವೈರಸ್ ಹರಡದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ವಿವರಿಸಿದ್ದಾರೆ.

ಇನ್ನು ಹೊಸವರ್ಷಾಚರಣೆ ಹಾಗೂ ನೈಟ್ ಕರ್ಫ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಈ ವರ್ಷ ಹೊಸ ವರ್ಷ ಆಚರಣೆಯೇ ಇಲ್ಲ. ಹೊಸ ವರ್ಷ ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶವಿಲ್ಲ. ಆದರೆ ಹೊಸ ವೈರಾಣುವಿನ ಹಿನ್ನೆಲೆಯಲ್ಲಿ ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಹೇರುವ ಅಗತ್ಯವಿಲ್ಲ. ಹೀಗಾಗಿ ನೈಟ್ ಕರ್ಫ್ಯೂ ಹಾಕುವುದಿಲ್ಲ ಎಂದು ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications