ಶಾಸಕರಿಗೆ ಚಿನ್ನದ ಬಿಸ್ಕೆಟ್ ಇಲ್ಲ : ಕೆಬಿ ಕೋಳಿವಾಡ್
ಬೆಂಗಳೂರು, ಅಕ್ಟೋಬರ್ 16: ವಿಧಾನ ಸೌಧಕ್ಕೆ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ ಹಮ್ಮಿಕೊಂಡಿರುವ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕರಿಗೆ ಚಿನ್ನದ ನಾಣ್ಯ ನೀಡುವ ಪ್ರಸ್ತಾಪವಿಲ್ಲ ಎಂದು ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ್ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಅಧಿಕಾರಿಗಳಿಗೆ ಬೆಳ್ಳಿಯ ತಟ್ಟೆಯನ್ನೂ ನೀಡುತ್ತಿಲ್ಲ ಕೋಳಿವಾಡ್ ಹೇಳಿದ್ದಾರೆ. ಇದೇ ಅಕ್ಟೋಬರ್ 25-26ರಂದು ವಿಧಾನಸಭೆ ವಜ್ರಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.

ವಿಧಾನಸೌಧದ ವಜ್ರಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಸುಮಾರು 27 ಕೋಟಿ ರೂಪಾಯಿ ಅಂದಾಜು ವೆಚ್ಚದ ಪಟ್ಟಿ ಸಿದ್ದಪಡಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೇ ಕಾರ್ಯಕ್ರಮದಲ್ಲಿ ವಜ್ರಮಹೋತ್ಸವದ ಸವಿನೆನಪಿಗಾಗಿ ಶಾಸಕರಿಗೆ 50 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ ನೀಡಲು ಸಿದ್ಧತೆ ನಡೆಸಲಾಗಿತ್ತು. ಜತೆಗೆ ವಿಧಾನಸೌಧದ ಸಿಬ್ಬಂದಿಗೆ ತಲಾ 5 ಸಾವಿರ ರೂ. ಮೌಲ್ಯದ ಬೆಳ್ಳಿತಟ್ಟೆ ಉಡುಗೊರೆಯಾಗಿ ನೀಡಲು ಪ್ಲಾನ್ ಹಾಕಿಕೊಳ್ಳಲಾಗಿತ್ತು.
ಆದರೆ ಇದೀಗ ಈ ಪ್ರಸ್ತಾವನೆಯನ್ನು ಕೈಬಿಡಲಾಗಿದೆ. ಹೀಗಾಗಿ ವಿಧಾನಮಂಡಲದ ಉಭಯ ಸದನಗಳ 300 ಸದಸ್ಯರಿಗೆ ವಿಧಾನಸೌಧದ ಲಾಂಛನ ಒಳಗೊಂಡಿರುವ ಚಿನ್ನದ ಬಿಸ್ಕತ್ ಹಾಗೂ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ರಾಜಭವನ ಮತ್ತು ವಿಶ್ವೇಶ್ವರಯ್ಯ ಗೋಪುರಗಳಲ್ಲಿ ಕೆಲಸ ಮಾಡುವ ಸುಮಾರು 5 ಸಾವಿರ ಸಿಬ್ಬಂದಿಗೆ ಬೆಳ್ಳಿ ತಟ್ಟೆಗಳನ್ನು ನೀಡಲಾಗುತ್ತಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications