ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಮಾತೇ ಇಲ್ಲ- ವಿಪಕ್ಷಗಳಿಗೆ ಖಡಕ್ ಸಂದೇಶ ಕೊಟ್ಟ ಡಿಕೆಶಿ
ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಪಕ್ಷಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಕೈಬಿಡುವ ವಿಚಾರವಾಗಿ ಮಾತನಾಡಿದ ಅವರು, 'ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಅನ್ನೋದು ವಿಪಕ್ಷಗಳ ಹುನ್ನಾರ' ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಪಂಚ ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂಬ ಬಿಜೆಪಿ ಆರೋಪಕ್ಕೆ ತಕ್ಕ ಉತ್ತರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, 'ಆದಾಯ ಹೆಚ್ಚಿರುವ ಕಡೆ ಪರಿಶೀಲನೆ ಮಾಡ್ತೀವಿ, ದೂರು ನೀಡಿದಲ್ಲಿ ಮಾತ್ರ ಪರಿಶೀಲನೆ ಮಾಡಲಾಗುತ್ತದೆ. ನಾನು ಪಕ್ಷದ ಅಧ್ಯಕ್ಷರಾಗಿದ್ದೇನೆ. ಯಾವ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಆದಾಯ ಹೆಚ್ಚಿಗೆ ಇರುವವರು ಗ್ಯಾರಂಟಿ ಸವಲತ್ತು ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ದೂರು ಇದೆ. ಅಂತ ಕಡೆ ಮಾತ್ರ ಪರಿಶೀಲನೆ ಮಾಡುತ್ತೇವೆ. ಪಂಚ ಗ್ಯಾರಂಟಿಗಳಿಗೆ ಬೇಕಾದ ವ್ಯವಸ್ಥೆ ಮಾಡಿಕೊಂಡಿದ್ದೇವೆ' ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಸರ್ಕಾರ ಇದನ್ನು ಬಡವರಿಗಾಗಿ ಮೀಸಲಾಗಿ ಇಟ್ಟಿದೆ. ರಾಮಲಿಂಗಾ ರೆಡ್ಡಿ ಇದಕ್ಕಾಗಿ ಹೆಚ್ಚುವರಿ ಬಸ್ಗಳನ್ನು ಖರೀದಿ ಮಾಡಿದ್ದಾರೆ. ಉಚಿತ ಬಸ್ ಪ್ರಯಾಣದಿಂದಾಗಿ ಜನರ ಪ್ರವಾಸ, ನೆಂಟರ ಭೇಟಿ, ವೈಹಿವಾಟು ಎಲ್ಲವೂ ನಡೆಯುತ್ತಿವೆ. ವಿರೋಧ ಪಾರ್ಟಿ ಅವರಿಗೆ ಪಂಚ ಗ್ಯಾರಂಟಿ ಬಗ್ಗೆ ಹೊಟ್ಟೆಕಿಚ್ಚು ಇದೆ. ಇಂಥಹ ಯೋಜನೆ ನಾವು ತರಲು ಆಗಲಿಲ್ಲ ಎನ್ನುವ ಬೇಸರವಿದೆ. ಹೀಗಾಗಿ ಗ್ಯಾರಂಟಿ ಬಗ್ಗೆ ಹೊಟ್ಟೆ ಉರಿ. ಇದೆಲ್ಲವೂ ಜನರಿಗೆ ಅರ್ಥ ಆಗುತ್ತದೆ. ಜನ ಯಾವಾಗ ಓಟ್ ಹಾಕಬೇಕೋ ಆಗ ಓಟ್ ಹಾಕುತ್ತಾರೆ ಅನ್ನೋ ನಂಬಿಕೆ ಇದೆ' ಎಂದು ಡಿಕೆ ಶಿವಕುಮಾರ್ ಹೇಳಿದರು.
ಈ ಬಗ್ಗೆ ಮಾತನಾಡಿದ ಸಚಿವ ಶಿವರಾಜ ತಂಗಡಗಿ, 'ಗ್ರಾಮೀಣ ಭಾಗದ ಜನರಿಗೆ ಪಂಚ ಗ್ಯಾರಂಟಿಗಳು ಬಹಳಷ್ಟು ಸಹಾಯವಾಗಿದೆ. ಯಾವ ಮಂತ್ರಿಗಳೂ ಇದರ ಬಗ್ಗೆ ಅಪಸ್ವರ ಎತ್ತಿಲ್ಲ. ಸಣ್ಣಪುಟ್ಟ ಮನಸ್ತಾಪಗಳಿಂದಾಗಿ ಗ್ಯಾರಂಟಿ ಕೈಬಿಡುವ ವಿಚಾರ ಇಲ್ಲ. ಇದು ಬಡವರಿಗೆ ಬದುಕು ಕಟ್ಟಿಕೊಡುವ ಕನಸು ಆಗಿದೆ. ನೌಕರಿ ಮಾಡುವ ಹೆಣ್ಣುಮಕ್ಕಳು ಉಚಿತ ಬಸ್ಗೆ ಹೋಗ್ತಾರೆ. ಅವರಲ್ಲಿ ಶ್ರೀವಂತರು ಯಾರು ಅಂತ ನಾವು ಕಂಡು ಹಿಡಿಯಲು ಸಾಧ್ಯ ಆಗಲ್ಲ. ಇಂತಹ ತೊಡಕುಗಳಿವೆ. ಆದರೆ ಅದನ್ನು ನಾವು ಪರಿಶೀಲನೆ ಮಾಡುತ್ತೇವೆ' ಎಂದರು.
ಅಷ್ಟಕ್ಕೂ ಗ್ಯಾರಂಟಿ ಯೋಜನೆಗಳನ್ನು ಕೈಬಿಡುವ ವಿಚಾರ ಬಂದಿದ್ದು ಯಾಕೆ ಅನ್ನೋ ಪ್ರಶ್ನೆ ಮೂಡಿದೆ. ಕಾಂಗ್ರೆಸ್ ಪಂಚ ಗ್ಯಾರಂಟಿಗಳಿಗಾಗಿ ಎಂಟು ತಿಂಗಳ ವೆಚ್ಚ 36,000 ಕೋಟಿ ಎಂದು ಅಂದಾಜು ಮಾಡಿತ್ತು. ಆದರೆ ಈ ಎಂಟು ತಿಂಗಳಲ್ಲಿ ಒಟ್ಟು 45,500 ಕೋಟಿ ರೂಪಾಯಿ ಖರ್ಚು ಆಗಿದೆ. ಹೀಗಾಗಿ ಯಾವ ಗ್ಯಾರಂಟಿಗೆ ಹೆಚ್ಚು ಹಣ ಖರ್ಚು ಆಗುತ್ತಿದೆ ಎಂದು ಪರಿಶೀಲನೆ ಮಾಡಿ, ಸಾಧ್ಯವಾದರೆ ಅದನ್ನು ಪರಿಷ್ಕರಣೆ ಮಾಡುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ.
ಆದರೆ ಕಾಂಗ್ರೆಸ್ ಈ ಬಗ್ಗೆ ಮಾತ್ರ ಎಲ್ಲೂ ಹೇಳಿಕೊಂಡಿಲ್ಲ. ದೂರು ಇರುವ ಕಡೆ ಮಾತ್ರ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದೆ.
-
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ವಿವಿಧ ರಾಜ್ಯಗಳ ಚುನಾವಣೆ ಬಳಿಕ ಪ್ರಧಾನಿ ಭೇಟಿಗೆ ಸರ್ವಪಕ್ಷ ಸಂಸದರ ನಿಯೋಗ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications