ಉಪಕುಲಪತಿ ಹುದ್ದೆಗೆ 5 ಕೋಟಿಗೆ ಮಾರಾಟ: ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ
ಬೆಳಗಾವಿ,ಡಿಸೆಂಬರ್ 22: ಉಪ ಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ ಸಂಸದರು ಹೇಳಿದ್ದಾರೆ.
ಇಡಿ, ಐಟಿ, ಸಿಬಿಐ, ಲೋಕಾಯುಕ್ತ ಸಂಸ್ಥೆಗಳು ಏನು ಮಾಡುತ್ತಿವೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಹಾಗೂ ಅವರ ಕಚೇರಿ ಮೇಲೆ ಆರೋಪ ಮಾಡಲು ಆಗುವುದಿಲ್ಲ. ಅದು ಸರಿಯಲ್ಲ. ಉಪಕುಲಪತಿಗಳ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿದರೆ ರಾಜ್ಯಪಾಲರು ನೇಮಕ ಮಾಡುತ್ತಾರೆ.

ಸರ್ಕಾರದಲ್ಲಿ ಯಾರಿಗೆ ಈ ಹಣ ತಲುಪಿದೆ? ಮಂತ್ರಿಗಳಿಗೆ ತಲುಪಿದೆಯೋ? ಅಧಿಕಾರಿಗಳಿಗೆ ತಲುಪಿದೆಯೋ? ಎಂಬುದು ಚರ್ಚೆ ಆಗಬೇಕು. ಅದಕ್ಕಾಗಿ ವಿಧಾನ ಪರಿಷತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿದೆ. ಕೂಡಲೇ ಲೋಕಾಯುಕ್ತ, ಇಡಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. ನಮ್ಮ ಮೇಲೆ ದಾಳಿ ಮಾಡಿ ತನಿಖೆ ಮಾಡುವವರು ಇವರ ಹೇಳಿಕೆ ವಿಚಾರದಲ್ಲೂ ತನಿಖೆ ಮಾಡಬೇಕು. ಸಿಬಿಐನವರು ನನ್ನ ಜತೆ ವ್ಯವಹಾರ ಇಟ್ಟುಕೊಂಡವರಿಗೆಲ್ಲ ನೊಟೀಸ್ ನೀಡಿ ವಿಚಾರಣೆ ಮಾಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ.
ಶಿಕ್ಷಣ ವ್ಯವಸ್ಥೆಯ ಹುದ್ದೆ ಮಾರಾಟ ಭ್ರಷ್ಟಾಚಾರದ ವಿಚಾರವಾಗಿದ್ದು, ಬಿಜೆಪಿ ಸಂಸದರು ಹೇಳಿರುವ ವಿಚಾರವನ್ನು ನಾವು ಚರ್ಚೆ ಮಾಡದಿದ್ದರೆ ನಮ್ಮ ಕರ್ತವ್ಯದಲ್ಲಿ ಲೋಪ ಆಗಲಿದೆ. ಹೀಗಾಗಿ ಈ ವಿಚಾರ ತನಿಖೆ ಆಗಬೇಕು, ಜನರಿಗೆ ವಿಚಾರ ತಿಳಿಯಬೇಕು.
ಕುಲಪತಿ ನೇಮಕ್ಕೆ ಲಂಚ ನೀಡಬೇಕೆಂದು ಪ್ರತಾಪ್ ಸಿಂಹ ಹೇಳಿಕೆ; ಮೇಲ್ಮನೆಯಲ್ಲಿ ಪ್ರತಿಧ್ವನಿ
ವಿಶ್ವವಿದ್ಯಾಅಲಯ ಉಪಕುಲಪತಿ ಹುದ್ದೆ ನೇಮಕಕ್ಕೆ ಕೋಟ್ಯಂತರ ರೂಪಾಯಿ ಲಂಚ ನೀಡಬೇಕೆಂದಿರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೇಳಿಕೆ ಬುಧವಾರ ವಿಧಾನ ಪರಿಷತ್ ನಲ್ಲೂ ಪ್ರತಿಧ್ವನಿಸಿತ್ತು.
ವಿಧಾನ ಪರಿಷತ್ ನಲ್ಲಿ ವಿಪಕ್ಷ ನಾಯಕ ಬಿ.ಕೆ ಹರಿ ಪ್ರಸಾದ್ ಈ ವಿಚಾರವನ್ನ ಪ್ರಸ್ತಾಪಿಸಿದ್ದು, ಕುಲಪತಿ ನೇಮಕ ವಿಚಾರವಾಗಿ ಲಂಚ ನೀಡುವುದರ ಕುರಿತು ಚರ್ಚೆಯನ್ನು ಕೈಗೆತ್ತಿಕೊಳ್ಳಬೇಕೆಂದರು ಸಭಾಪತಿ ಬಸವರಾಜ ಹೊರಟ್ಟಿ ಅವರಲ್ಲಿ ಮನವಿ ಮಾಡಿದ್ದಾರೆ.












Click it and Unblock the Notifications