ನೈಟ್ ಕರ್ಫ್ಯೂ ಹಾಕುವ ಬಗ್ಗೆ ಸರ್ಕಾರದಲ್ಲಿ ಭಿನ್ನಾಭಿಪ್ರಾಯಗಳಿಲ್ಲ!
ಬೆಂಗಳೂರು, ಡಿ. 25: ಮಳೆ ನಿಂತರೂ ಮಳೆ ಹನಿ ನಿಲ್ಲುವುದಿಲ್ಲ ಎಂಬಂತೆ ನೈಟ್ ಕರ್ಫ್ಯೂವನ್ನು ಸರ್ಕಾರ ಹಿಂದಕ್ಕೆ ಪಡೆದಿದ್ದರೂ, ಆ ವಿಚಾರವಾಗಿ ಚರ್ಚೆ ಮುಂದುವರೆದಿದೆ. ರೂಪಾಂತರಿ ಕೊರೊನಾ ವೈರಸ್ ಹರಡದಂತೆ ತಡೆಯಲು ವಿಚಿತ್ರ ನಿಲುವನ್ನು ರಾಜ್ಯ ಸರ್ಕಾರ ತಾಳಿದ್ದು, ಆಮೇಲೆ ಅದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ನೈಟ್ ಕರ್ಫ್ಯೂ ಹೇರಿದ್ಯಾಕೆ? ಎಂಬ ಚರ್ಚೆ ಸರ್ಕಾರದ ಮಟ್ಟದಲ್ಲಿಯೆ ಶುರುವಾಗಿದೆ. ಜೊತೆಗೆ ಆಡಳಿತ-ವಿರೋಧ ಪಕ್ಷಗಳ ಮಧ್ಯೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ.
ರಾತ್ರಿ ಕರ್ಪ್ಯೂ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಮಾತನಾಡಿದ್ದು, ಜನರ ಒತ್ತಾಯದ ಮೇರೆಗೆ ನೈಟ್ ಕರ್ಪ್ಯೂ ವಾಪಸ್ ತೆಗೆದುಕೊಂಡಿದ್ದೇವೆ ಎಂದಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ನೈಟ್ ಕರ್ಫ್ಯೂ ಹಾಕಲಾಗಿತ್ತು. ಸರ್ಕಾರದಲ್ಲಿ ಈ ಬಗ್ಗೆ ಯಾವುದೇ ವಿವಾದಗಳಿಲ್ಲ. ಕೇವಲ ಮುಂಜಾಗ್ರತೆಗಾಗಿ ಮಾತ್ರ ನೈಟ್ ಕರ್ಫ್ಯೂ ಹಾಕಲಾಗಿತ್ತು.

ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಅದನ್ನು ಜಾರಿ ಮಾಡಿದ್ದು. ಜನರ ಓಡಾಟ, ಸಭೆ ಸಮಾರಂಭದಲ್ಲಿ ಹೆಚ್ಚಾಗ ಬಹುದು ಎಂಬ ಭಯದಿಂದ ಹಾಗೆ ಮಾಡಲಾಗಿತ್ತು ಎಂದು ಡಾ. ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ.

ಜನರ ಜೀವನೋಪಾಯಕ್ಕೆ ಸಮಸ್ಯೆ ಆಗುತ್ತದೆ ಎಂಬ ಒತ್ತಡ ಬಂತು, ಹೀಗಾಗಿ ನಾಗರೀಕ ಸಮಾಜದ ವಿರೋಧದಿಂದಾಗಿ ನೈಟ್ ಕರ್ಫ್ಯೂ ವಾಪಸ್ ಪಡೆದಿದ್ದೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.
Recommended Video
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications