ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ: ಸುಳಿವು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 22: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು.
ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಪರೋಕ್ಷವಾಗಿ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಬೊಟ್ಟು ಮಾಡಿದ ಅವರು, ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವರು ಕರೆ ನೀಡಿದರು.

ಜನ ಕೆಟ್ಟ ಆಡಳಿತದಿಂದ ರೋಸಿ ಹೋಗಿದ್ದಾರೆ. ತೆರಿಗೆ, ದರ ಏರಿಕೆ ಸುಳಿಗೆಯಿಂದ ಬೇಸತ್ತು ಹೋಗಿದ್ದಾರೆ. ಮುಂದೆ ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ. ಐದು ವರ್ಷದಲ್ಲಿ ಯಾವ ರೀತಿ ಆಡಳಿತ ಕೊಡಬೇಕು, ಜನರಿಗೆ ಏನೆಲ್ಲ ಒಳ್ಳೆಯದು ಮಾಡಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸುತ್ತೇನೆ. ಒಂದು ವೇಳೆ ಜನ ಮೆಚ್ಚುವ ಸರ್ಕಾರ ನನ್ನಿಂದ ಕೊಡಲು ಆಗದಿದ್ದರೆ ಈ ಜನ್ಮದಲ್ಲಿ ಮತ್ತೆ ನನ್ನ ಮುಖ ತೋರಿಸಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರಾಜ್ಯದ ಸಾಲ 7.50 ಲಕ್ಷ ಕೋಟಿ ದಾಟಿದೆ. ಸಿದ್ಧರಾಮಯ್ಯ ಒಬ್ಬರೇ 5ರಿಂದ 5.50 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಏನಕ್ಕೆ ಮಾಡಿದ್ರು ಇಷ್ಟು ಸಾಲವನ್ನು? ಯಾವ ಪುರುಷಾರ್ಥಕ್ಕೆ ಮಾಡಿದ್ರು ಎಂಬುದನ್ನು ಜನರಿಗೆ ಉತ್ತರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಇಡೀ ಬದುಕನ್ನು ಜನರಿಗೆ ಮೀಸಲಿಟ್ಟರು. ಅವರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋದವರಲ್ಲಾ. ಈ ರಾಜ್ಯವನ್ನು ದೀರ್ಘ ಕಾಲ ಆಳಿದ ದೇವರಾಜು ಅರಸು ಅವರೇ ಕುಂಡೆ ಬಂದು ನನ್ನ ನಮ್ಮ ಜೊತೆ ಕೈ ಜೋಡಿಸು ಎಂದು ಹೇಳಿದರು ದೇವೇಗೌಡರು ಕೇಳಲಿಲ್ಲ. ಒಂದು ಆದರ್ಶ, ಮೌಲ್ಯ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಅಂತಹವರ ಮೇಲೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದರು. ದೇವೇಗೌಡರು ಜ್ಯೋತಿಷ್ಯರನ್ನ ನಂಬುತ್ತಾರೆ ಎಂದು ಆ ಜ್ಯೋತಿಷಿಗಳನ್ನು ಟ್ರ್ಯಾಪ್ ಮಾಡಿ ವಂಚಿಸಿದರು. ಅಲ್ಲದೆ, ಮೈಸೂರಿನಲ್ಲಿ ದೇವೇಗೌಡರು 500 ನಿವೇಶನಗಳನ್ನು ಖರೀದಿ ಮಾಡಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಿದರು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರ ವಿರುದ್ದ ಸಿಐಡಿ, ಲೋಕಾಯುಕ್ತ ಸೇರಿ ಅನೇಕ ತನಿಖೆಗಳನ್ನು ನಡೆಸಿದರು. ಕೊನೆಗೆ ಸತ್ಯಕ್ಕೆ ಜಯವಾಯಿತು. ದೇವೇಗೌಡರು ಏನೆಂಬುದು ರಾಜ್ಯದ ಜನತೆಗೆ ತಿಳಿಯಿತು ಎಂದು ಅವರು ಹೇಳಿದರು. ಜನರು ಹಾಗೂ ಕಾರ್ಯಕರ್ತರಿಂದ ಜೆಡಿಎಸ್ ಉಳಿದಿದೆ. ಜನತೆಗೆ ನಮ್ಮ ಕೈಲಾದಷ್ಟು ಒಳ್ಳೆಯದನ್ನು ಮಾಡಿದ್ದೇವೆ. ನಾವೇನು ಅನ್ಯಾಯ ಮಾಡಿದ್ದೇವೆ ಈ ರಾಜ್ಯಕ್ಕೆ? ದೇವೇಗೌಡರು ಏನು ಅನ್ಯಾಯ ಮಾಡಿದ್ದಾರೆ? ನಮಗೆ ಯಾಕೆ ಪೂರ್ಣ ಪ್ರಮಾಣದ ಆಶೀರ್ವಾದ ಸಿಕ್ಕಿಲ್ಲ? ಯಾವ ಸಮುದಾಯಕ್ಕೂ ನಮ್ಮ ಪಕ್ಷದಿಂದ ಅನ್ಯಾಯ ಆಗಿಲ್ಲ. ಬೇರೆ ಬೇರೆ ರಾಜ್ಯಗಳ ಜನರು ದೇವೇಗೌಡರನ್ನು ನೆನಪು ಮಾಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಜನತೆಗೆ ಏಕೆ ಅಂತಹ ಭಾವನೆ ಇಲ್ಲ ಎಂದು ಸಚಿವರು ಅತೀವ ಬೇಸರ ವ್ಯಕ್ತಪಡಿಸಿದರು.
-
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications