ಕರ್ನಾಟಕದ ಈ 2 ಜಿಲ್ಲೆಗಳನ್ನ ಭಯ ಪೀಡಿತ ಜಿಲ್ಲೆ ಮಾಡಲಾಗುತ್ತಿದೆ: ಬಿಜೆಪಿ!
ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತಮ್ಮ ಮತ ಬ್ಯಾಂಕ್ ಭದ್ರ ಪಡಿಸಿಕೊಳ್ಳಲು ಮುಸ್ಲಿಂ ಸಮುದಾಯವನ್ನು ಓಲೈಸುವ ಭರದಲ್ಲಿ ವಿದ್ವಂಸಕ ಕೃತ್ಯ ನಡೆಸುತ್ತಿರುವವರ ರಕ್ಷಣೆಗೆ ನಿಲ್ಲುತ್ತಲೇ ಬಂದಿದೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಸಮಾಜಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವ ನಿರ್ಧಾರವನ್ನು ಕೈಗೊಂಡಿದೆ, ಮೊನ್ನೆಯಷ್ಟೇ ಈ ಸಂಬಂಧ ಘನ ಉಚ್ಛ ನ್ಯಾಯಾಲಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಕರಾವಳಿ ಪ್ರದೇಶದಲ್ಲಿ ಮತಾಂಧ ದುಷ್ಟಶಕ್ತಿಗಳ ನಿರಂತರ ಅಟ್ಟಹಾಸ ಹಾಗೂ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳು ಸರಣಿ ರೂಪದಲ್ಲಿ ಘಟಿಸುತ್ತಲೇ ಇವೆ, ಈ ಸಂಬಂಧ ಹಿಂದೂ ಸಮಾಜಕ್ಕೆ ರಕ್ಷಣೆ ನೀಡಬೇಕಿದ್ದ ಪೊಲೀಸ್ ವ್ಯವಸ್ಥೆ ವಿಪರ್ಯಾಸ ಎನ್ನುವಂತೆ ಹಿಂದೂ ಸಂಘಟಕರಿಗೆ ನಿರಂತರ ಕಿರುಕುಳ ನೀಡುತ್ತಾ, ಸುಳ್ಳು ಕೇಸುಗಳನ್ನು ದಾಖಲಿಸುತ್ತಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಟ್ರಕ್ ಚಾಲಕನೊಬ್ಬನ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಂಘಟಿತವಾಗಿ ಸರ್ಕಾರಕ್ಕೆ ಬೆದರಿಕೆ ಒಡ್ಡಿದ ಮುಸ್ಲಿಂ ಸಮುದಾಯದ ಒತ್ತಾಯಕ್ಕೆ ಬೆದರಿ ದಿಢೀರನೇ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಯನ್ನು 24 ಗಂಟೆಯೊಳಗೆ ವರ್ಗಾವಣೆ ಮಾಡಿತ್ತು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದರ ಬೆನ್ನಲ್ಲೇ ಹಿಂದೂ ಸಮಾಜದ ಮುಖ್ಯಸ್ಥರ ವಿರುದ್ಧ ಸುಳ್ಳು ಕೇಸುಗಳನ್ನು ದಾಖಲಿಸಿ ಜೈಲಿಗೆ ದೂಡುವ ಪಿತೂರಿ ನಡೆಯುತ್ತಿದೆ. ಇಂದು ಹಿರಿಯರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರೂ ಸೇರಿದಂತೆ 15ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿದ್ದು, ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ಮನೆ, ಮನೆಗಳನ್ನು ಶೋಧಿಸಿ ಆತಂಕದ ವಾತಾವರಣ ಸೃಷ್ಟಿಸುತ್ತಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ. ಅದೇರೀತಿ ನಮ್ಮ ಪಕ್ಷದ ಮುಖಂಡರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಗಡಿಪಾರು ಮಾಡುತ್ತಿರುವ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ನಾಚಿಕೆಗೇಡಿನ ಕ್ರಮವಾಗಿದೆ ಎಂದಿದ್ದಾರೆ.
ಒಂದು ಸಮುದಾಯದ ಪರವಾಗಿ ಪೊಲೀಸ್ ವ್ಯವಸ್ಥೆ ಹಾಗೂ ಸರ್ಕಾರ ನಿಲ್ಲುವ ಮೂಲಕ ಕರಾವಳಿ ಪ್ರದೇಶದ ಸಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿ ದಕ್ಷಿಣ ಕನ್ನಡ ಹಾಗೂ ಉಡುಪಿಯನ್ನು ಭಯ ಪೀಡಿತ ಜಿಲ್ಲೆಗಳನ್ನಾಗಿಸಲು ರಾಜ್ಯ ಸರ್ಕಾರ ಹೊರಟಂತಿದೆ. ಕಾಂಗ್ರೆಸ್ ಸರ್ಕಾರದ ನಡೆ, ಪೊಲೀಸರ ವರ್ತನೆ ಏಕಪಕ್ಷೀಯವಾಗಿ ಇದೇ ರೀತಿ ಮುಂದುವರೆದರೆ ಬಿಜೆಪಿ ಕರ್ನಾಟಕ ಸುಮ್ಮನೆ ಕೂರದು ಎಂದು ಎಚ್ಚರಿಸ ಬಯಸುತ್ತೇನೆ.
ಈ ಕೂಡಲೇ ಕಲ್ಲಡ್ಕ ಪ್ರಭಾಕರ್ ಭಟ್ ಅವರೂ ಸೇರಿದಂತೆ 15 ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ಪ್ರಮುಖರ ಮೇಲೆ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಿ ಗಡೀಪಾರು ಆದೇಶ ಹಿಂಪಡೆಯಲಿ, ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಬೇಕಾದೀತು ಎಂದು ಎಚ್ಚರಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications