ಅತಿ ಕಡಿಮೆ 'ಆಕ್ಟಿವ್ ಕೇಸ್' ಹೊಂದಿರುವ ಕರ್ನಾಟಕದ ಐದು ಜಿಲ್ಲೆಗಳು
ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಟಾಪ್ ಹತ್ತರೊಳಗೆ ಕರ್ನಾಟಕ ಗುರುತಿಸಿಕೊಂಡಿದೆ. ಒಂದು ಹಂತದಲ್ಲಿ ಇತರೆ ರಾಜ್ಯಗಳಿಗೆ ಮಾದರಿ ಎನಿಸಿಕೊಂಡಿದ್ದ ಕರ್ನಾಟಕ ಈಗ ಗಂಭೀರ ಸ್ಥಿತಿ ತಲುಪಿತ್ತಿದೆ.
Recommended Video
ಈವರೆಗೂ ರಾಜ್ಯದಲ್ಲಿ 23,474 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 9847 ಜನರು ಗುಣಮುಖರಾಗಿದ್ದು, 13,251 ಕೇಸ್ಗಳು ಸಕ್ರಿಯವಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲೇ 8167 ಕೇಸ್ ಆಕ್ಟಿವ್ ಆಗಿದೆ.
ಬೆಂಗಳೂರು, ಕಲಬುರಗಿ, ದಕ್ಷಿಣ ಕನ್ನಡ, ಬಳ್ಳಾರಿ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಸೋಂಕು ವರದಿಯಾಗಿದೆ. ಕರ್ನಾಟಕ ಅತಿ ಕಡಿಮೆ ಆಕ್ಟಿವ್ ಕೇಸ್ ಹೊಂದಿರುವ ಟಾಪ್ ಐದು ಜಿಲ್ಲೆಗಳ ಅಂಕಿ ಅಂಶ ಇಲ್ಲಿದೆ. ಮುಂದೆ ಓದಿ....

ಕೋಟೆನಾಡು ಚಿತ್ರದುರ್ಗ
ಕರ್ನಾಟಕದಲ್ಲಿ ಅತಿ ಕಡಿಮೆ ಆಕ್ಟಿವ್ ಕೇಸ್ ಹೊಂದಿರುವ ಜಿಲ್ಲೆ ಚಿತ್ರದುರ್ಗ. ಕೋಟೆನಾಡಿನಲ್ಲಿ ಜುಲೈ 5ರ ವರದಿಯಂತೆ 35 ಮಂದಿ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಚಿತ್ರದುರ್ಗ ದಲ್ಲಿ ಒಟ್ಟು 83 ಮಂದಿಗೆ ಸೋಂಕು ತಗುಲಿದೆ. 48 ಜನರು ಚೇತರಿಸಿಕೊಂಡಿದ್ದಾರೆ. ಈ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಕಾಫಿನಾಡು ಚಿಕ್ಕಮಗಳೂರು ಎಷ್ಟಿದೆ?
ಚಿಕ್ಕಮಗಳೂರಿನಲ್ಲಿ ಒಟ್ಟು 42 ಕೇಸ್ಗಳು ಸಕ್ರಿಯವಾಗಿದೆ. ಈ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94. ಇದರಲ್ಲಿ 51 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಮೂರನೇ ಜಿಲ್ಲೆ ದಾವಣಗೆರೆ
ದಾವಣಗೆರೆಯಲ್ಲಿ ಪ್ರಸ್ತುತ 44 ಸಕ್ರಿಯ ಕೇಸ್ಗಳು ವರದಿಯಲ್ಲಿವೆ. ನಿನ್ನೆಯವರೆಗೂ ಜಿಲ್ಲೆಯಲ್ಲಿ ಒಟ್ಟು 356 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ 301 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 11 ಜನರು ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ.

ಕೊಪ್ಪಳದಲ್ಲಿ ಎಷ್ಟು ಆಕ್ಟಿವ್ ಕೇಸ್?
ಕೊಪ್ಪಳದಲ್ಲಿ ಇನ್ನೂ 51 ಕೇಸ್ ಸಕ್ರಿಯವಾಗಿದೆ. ಈವರೆಗೂ ಜಿಲ್ಲೆಯಲ್ಲಿ 130 ಜನರಿಗೆ ಮಹಾಮಾರಿ ವಕ್ಕರಿಸಿತ್ತು. ಅದರಲ್ಲಿ 77 ಜನರು ಗುಣಮುಖರಾಗಿದ್ದಾರೆ. ಇಬ್ಬರು ಕೊವಿಡ್ನಿಂದ ಸಾವನ್ನಪ್ಪಿದ್ದಾರೆ.

ಕೊಡಗಿನಲ್ಲಿ ಸಕ್ರಿಯ ಕೇಸ್ ಎಷ್ಟಿದೆ?
ಕೊಡಗಿನಲ್ಲಿ ಒಟ್ಟು 76 ಜನರಿಗೆ ಕೊರೊನಾ ವೈರಸ್ ಅಂಟಿಕೊಂಡಿದೆ. ಅದರಲ್ಲಿ ಕೇವಲ ಮೂರು ಜನ ಮಾತ್ರ ಚೇತರಿಸಿಕೊಂಡಿದ್ದಾರೆ. ಇನ್ನೂ 73 ಮಂದಿ ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡಗಿನಲ್ಲೂ ಯಾವುದೇ ಸಾವು ವರದಿಯಾಗಿಲ್ಲ. ಇನ್ನುಳಿದಂತೆ ಬೆಳಗಾವಿಯಲ್ಲಿ 75 ಕೇಸ್, ಚಿಕ್ಕಬಳ್ಳಾಪುರದಲ್ಲಿ 79 ಕೇಸ್, ಬಾಗಲಕೋಟೆಯಲ್ಲಿ 88 ಕೇಸ್ ಆಕ್ಟಿವ್ ಆಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications