ಕಾರ್ಕಳದ ಜೈನ ಬಸದಿಯಲ್ಲಿ ನಾನಾ ವಿಗ್ರಹಗಳು ಕಳವು
ಉಡುಪಿ, ಫೆಬ್ರವರಿ,22: ಲಕ್ಷಾಂತರ ಬೆಲೆಬಾಳುವ ಅಮೂಲ್ಯ ಪಂಚಲೋಹ ವಿಗ್ರಹ ಸಹಿತ ಚಿನ್ನ,ಬೆಳ್ಳಿ ಅಭರಣಗಳ ಕಳವು ಮಾಡಿದ ಘಟನೆ ಭಾನುವಾರದ ನಸುಕಿನಲ್ಲಿ ಕಾರ್ಕಳದ ಶಿರ್ಲಾಲು ಶ್ರೀ ಆದಿನಾಥಸ್ವಾಮಿ ಬಸದಿಯಲ್ಲಿ ನಡೆದಿದೆ.
ಐತಿಹಾಸಿಕ ಹಿನ್ನಲೆಯುಳ್ಳ ಶಿರ್ಲಾಲು ಶ್ರೀ ಆದಿನಾಥ ಸ್ವಾಮಿಯ ಬಾಗಿಲು ಮುರಿದು ದುಷ್ಕರ್ಮಿಗಳು ಅಕ್ರಮವಾಗಿ ಪ್ರವೇಶಗೈದು ಅಲ್ಲಿನ ಪದ್ಮಾವತಿ ಅಮ್ಮನ, ಬಾಹುಬಲಿ, ಮೂಲ ಆದಿನಾಥ ಸ್ವಾಮಿ, ಭರತ ದೇವರುಗಳ ವಿಗ್ರಹಗಳು, ಚಿನ್ನದ ಮುಖವಾಡ, ಬಂಗಾರದ ನಾಗ ಹೆಡೆ, ಬೆಳ್ಳಿಯ ಪ್ರಭಾವಳಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಕಳವುಗೈದಿದ್ದಾರೆ.[ಕಾರ್ಕಳದಲ್ಲಿ ನೋಡಬೇಕಾದ ಸ್ಥಳಗಳು]

ಶ್ವಾನಗಳ ಮಾರಣ ಹೋಮವೂ, ಕಳ್ಳತನವೂ...
ಬಸದಿ ಹಾಗೂ ಪರಿಸರದಲ್ಲಿ ಇದ್ದಂತಹ ಸಾಕು ನಾಯಿಗಳು ಕಳೆದ ಐದು ದಿನಗಳ ಅಂತಹದಲ್ಲಿ ಸರಣಿಯಂತೆ ಸಾವಿಗೀಡಾಗಿದ್ದವು. ಇವುಗಳಿಗೆ ಯಾವುದಾದರೂ ವಿಷ ಪಾಷಣ ನೀಡಿ ಇದೇ ತಂಡ ಮಾರಣಹೋಮ ನಡೆಸಲಾಗಿತ್ತೇ ಎಂಬ ಯಕ್ಷ ಪ್ರಶ್ನೆಗಳು ಸ್ಥಳೀಯರಲ್ಲಿ ಕಾಡತೊಡಗಿದೆ.
ಬೆರಳಚ್ಚು ತಜ್ಞರು, ಶ್ವಾನದಳ
ಮಾಹಿತಿ ತಿಳಿಯುತ್ತಿದ್ದಂತೆ ಉಡುಪಿ ಜಿಲ್ಲಾ ಬೆರಳಚ್ಚು ತಂಡ ಹಾಗೂ ಪೊಲೀಸ್ ಶ್ವಾನದಳ ಅಗಮಿಸಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ತಮ್ಮ ಹೆಜ್ಜೆ ಗುರುತುಗಳೇ ಸಿಗದಂತೆ ಮಾಡಲು ಬಸದಿಯೊಳಗೆ ಕಳ್ಳರು ಶೂ ಧರಿಸಿ ಪ್ರವೇಶಿಸಿರುವುದು ಇದರಿಂದ ಧೃಢ ಪಟ್ಟಿದೆ.[ಪತಿ ಕದ್ದ ದೇಗುಲ ಚಿನ್ನವನ್ನು ದೇವಸ್ಥಾನಕ್ಕೆ ಹಿಂತಿರುಗಿಸಿದ ಪತ್ನಿ]
ವಿದ್ಯುತ್ ಸ್ಪರ್ಶಿಸಿದ ಕೇಬಲ್ ಆಪರೇಟರ್ ಸ್ಥಿತಿ ಚಿಂತಾಜನಕ
ಮಂಗಳೂರು, ಫೆಬ್ರವರಿ,22: ವಿದ್ಯುತ್ ಸ್ಪರ್ಶಿಸಿ ಕೇಬಲ್ ಅಪರೇಟರ್ ಗೆ ಗಂಭೀರ ಗಾಯವಾಗಿದ್ದು, ಸ್ಥಿತಿ ಚಿಂತಾಜನಕವಾದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸೋಮವಾರ ನಡೆದಿದೆ.

ಗಾಯಗೊಂಡ ಕೇಬಲ್ ಆಪರೇಟರ್ ಉಳ್ಳಾಲ ಕೃಷ್ಣಾ ನಗರ ನಿವಾಸಿ ನಿಶಾಂತ್ (29) ಎಂದು ಗುರುತಿಸಲಾಗಿದೆ. ನಿಶಾಂತ್ ನನ್ನು ದೇರಳಕಟ್ಟೆ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದೆ. ತೊಕ್ಕೊಟು ಪ್ರದೇಶದಲ್ಲಿ ಕೇಬಲ್ ವ್ಯತ್ಯಯ ಉಂಟಾದ ಹಿನ್ನಲೆ ವಿದ್ಯುತ್ ಟ್ರಾನ್ಸ್ ಫರ್ ಕಂಬವನ್ನೇರಿ ಕೇಬಲ್ ತಂತಿಗಳನ್ನು ಜೋಡಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. [ಸೌರಶಕ್ತಿಯಿಂದ ಮನೆ ಬೆಳಗಿಸಿದ ಮೈಸೂರಿನ 'ಭಕ್ತವತ್ಸಲ']
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications