ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ತಲೆನೋವು: 'ತಿಗಳ ಕ್ಷತ್ರಿಯರ ನಡೆ ಕಾಂಗ್ರೆಸ್ ಕಡೆ' ಸಮಾವೇಶ, ವಿವರ
ಬೆಂಗಳೂರು, ಮಾರ್ಚ್ 12: ಕರ್ನಾಟಕದಲ್ಲಿ ಚುನಾವಣೆ ಕಾವು ಪಡೆಯುತ್ತಿದ್ದಂತೆ ವರ್ಷಗಳಿಂದ ಮನವಿ ಮಾಡಿದ್ದ ಸಮುದಾಯಗಳು ಮತ್ತೆ ತಮ್ಮ ಬೇಡಿಕೆ ಹಿಡಿದು ರಸ್ತೆಗಿಳಿಯುವುದು ಮಾಮೂಲು. ಅದೇ ರೀತಿ ತಿಗಳ ಕ್ಷತ್ರಿಯ ಸಮುದಾಯ ಬೃಹತ್ ಸಮಾವೇಶವೊಂದನ್ನು ನಡೆಸುವುದಾಗಿ ತಿಳಿಸಿದೆ. ಇದು ಆಡಳಿತಾರೂಢ ಬಿಜೆಪಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ರಾಜ್ಯ ಬಿಜೆಪಿ ಸರ್ಕಾರ ಎಲ್ಲ ಜಾತಿ, ಸಮುದಾಯದವರ ಏಳಿಗೆಗಾಗಿ ಅಭಿವೃದ್ಧಿ ನಿಗಮ ಮಂಡಳಿಗಳನ್ನು ಸ್ಥಾಪನೆ ಮಾಡಿದೆ. ಆದರೆ ರಾಜ್ಯದ ಬೃಹತ್ ಸಮುದಾಯಗಳಲ್ಲಿ ಗುರುತಿಸಿಕೊಳ್ಳುವ ಸುಮಾರು 40 ಲಕ್ಷ ಜನಸಂಖ್ಯೆ ಇರುವ ಹೊಂದಿರುವ ತಿಗಳ ಕ್ಷತ್ರಿಯ ಸಮುದಾಯವನ್ನು ನಿರ್ಲಕ್ಷಿಸಿದೆ. ಈ ಸಂಬಂಧ ಸಮುದಾಯದ ಮುಖಂಡರ ಅಸಮಾಧಾನ ಹೊರ ಹಾಕಿದ್ದಾರೆ.

ಅಷ್ಟೇ ಅಲ್ಲದೇ ಇದೇ ಮಾರ್ಚ್ 14ರಂದು 'ತಿಗಳ ಕ್ಷತ್ರಿಯರ ನಡೆ ಕಾಂಗ್ರೆಸ್ ಕಡೆ' ಜಾಗೃತಿ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವುದಾಗಿ ಹೇಳಿರುವ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಎಲ್ಲಾ ಜಾತಿಗಳು ಹಾಗೂ ಸಮುದಾಯಗಳ ಅಭಿವೃದ್ಧಿಗೆ ಕ್ರಮ ವಹಿಸಿದೆ. ಆದರೆ ತಿಗಳ ಕ್ಷತಿಯ ಸಮುದಾಯಕ್ಕೆ ನಿಗಮ ಮಂಡಳಿಯನ್ನು ಸ್ಥಾಪನೆಗೆ ಮುಂದಾಗಿಲ್ಲ ಎಂದರು.
ಪೂರ್ಣಿಮಾ ಪ್ಯಾಲೇಸ್ ನಲ್ಲಿ ಸಮಾವೇಶ, ಬಿಜೆಪಿಗೆ ಪಾಠ
ಸರ್ಕಾರ ತಾನು ಸ್ಥಾಪಿಸಿರುವ ವಿವಿಧ ಸಮುದಾಯಗಳ ನಿಗಮ ಮಂಡಳಿಗಳಿಗೆ ಅಗತ್ಯ ಹಣ ನೀಡುತ್ತಿಲ್ಲ.ಸಮರ್ಪಕವಾಗಿ ಹಣವನ್ನು ಸಂದಾಯ ಮಾಡುತ್ತಿಲ್ಲ. ಹಾಲಿ ನಿಗಮ ಮಂಡಳಿಯಲ್ಲಿ ಕೆಲಸಗಾರರಿಗೂ ಸರಿಯಾಗಿ ವೇತನ ನೀಡುತ್ತಿಲ್ಲ. ಬಜೆಟ್ ಮಂಡನೆ ವೇಳೆ ಸಿಎಂ ಬೊಮ್ಮಾಯಿಯವರು ತಿಗಳ ಸಮುದಾಯದ ಅಭಿವೃದ್ಧಿಗಾಗಿ ಒಟ್ಟು 400 ಕೋಟಿ ರೂಪಾಯಿ ಇಟ್ಟಿದೇವೆ ಎಂದಿದ್ದರು. ಆದರೆ ಒಂದೂ ರೂಪಾಯಿ ಸಹ ನಮಗಾಗಿ ಖರ್ಚು ಮಾಡಿಲ್ಲ ಎಂದು ಅವರು ದೂರಿದರು.

ಇದೇ ಮಾರ್ಚ್ 14ರಂದು ಮಂಗಳವಾರ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್ ನಲ್ಲಿ 'ತಿಗಳ ಕ್ಷತ್ರಿಯರ ನಡೆ ಕಾಂಗ್ರೆಸ್ ಕಡೆ' ಜಾಗೃತಿ ಸಭೆ ಜರುಗಲಿದೆ. ಈ ಜಾಗೃತಿ ಸಮಾವೇಶಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಹ ಆಗಮಿಸಲಿದ್ದಾರೆ. ರಾಜ್ಯದಲ್ಲಿರುವ ತಿಗಳ ಕ್ಷತಿಯ ಸಮುದಾಯ ಕಡೆಗಣಿಸಿದ್ದ ಬಿಜೆಪಿಗೆ ಮುಂಬರಲಿರುವ ಚುನಾವಣೆಯಲ್ಲಿ ಸೂಕ್ತ ಪಾಠ ಕಲಿಸಲು ಈ ಮೂಲಕ ಸಮುದಾಯ ನಿರ್ಧರಿಸಿದೆ ಎಂದು ಅವರು ವಿವರಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications