ಬೆಂಗಳೂರು ಅಭಿವೃದ್ಧಿಗೆ 2.50 ಲಕ್ಷ ಕೋಟಿ; ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್: ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು: ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಿಸಬೇಕು ಎಂಬ ಕಾರಣಕ್ಕೆ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2.50 ಲಕ್ಷ ಕೋಟಿ ಹಣವನ್ನು ಐದು ವರ್ಷಗಳಲ್ಲಿ ವೆಚ್ಚ ಮಾಡಲಾಗುತ್ತಿದೆ ಎಂದರು.
ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲಾ ನಗರ ಪ್ರದೇಶಗಳಿಗೆ ಸಂಚಾರ ಯೋಜನೆ ರೂಪಿಸಬೇಕು.

ಮುಂದಿನ 25 ವರ್ಷಕ್ಕೆ ಅಗತ್ಯವಿರುವ ಸಂಚಾರಿ ಮಾರ್ಗದ ಯೋಜನೆ ರೂಪಿಸಬೇಕು. ಎಲ್ಲಾ ನಗರ ಪ್ರದೇಶಗಳಲ್ಲಿ ವರ್ತುಲ ರಸ್ತೆಗಳಿಗೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಸಮಯವೇ ಹಣ, ಯಾರೂ ಸಹ ಸಮಯ ವ್ಯರ್ಥ ಮಾಡಿಕೊಳ್ಳಲು ಬಯಸುವುದಿಲ್ಲ. ಹೀಗಾಗಿ ನಾವು ಈಗಿನಿಂದಲೇ ಯೋಜನೆ ರೂಪಿಸಬೇಕಿದೆ. ಈ ಬಗ್ಗೆ ನಾನು, ನಗರಾಭಿವೃದ್ಧಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಪೌರಾಡಳಿತ ಸಚಿವರು ಸಭೆ ಸೇರಿ, ನಗರ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ತಿಳಿಸಿದರು.
ಮುಂದಿನ 25 ವರ್ಷಗಳಲ್ಲಿ ಕರ್ನಾಟಕದ ಜನಸಂಖ್ಯೆಯಲ್ಲಿ ಸುಮಾರು 70% ನಗರ ಪ್ರದೇಶಕ್ಕೆ ವರ್ಗಾವಣೆಯಾಗುವ ಲೆಕ್ಕಾಚಾರ ಅವರದ್ದಾಗಿದೆ. ನಮ್ಮ ಪ್ರಗತಿ ನೋಡಿ ಅವರು ಈ ಲೆಕ್ಕಾಚಾರ ಮಾಡಿದ್ದಾರೆ. ಇದಕ್ಕೆ ಯಾವ ತಯಾರಿ ನಡೆಸಿದ್ದೀರಿ ಎಂದು ಕೇಳಿದರು. ಹೀಗಾಗಿ ನಾವು ಸಮಯ ವ್ಯರ್ಥ ಮಾಡದೇ ಇಡೀ ರಾಜ್ಯದಲ್ಲಿ ಸಂಚಾರಿ ಗ್ರಿಡ್ ರೂಪಿಸಬೇಕು ಎಂದು ತೀರ್ಮಾನಿಸಿದ್ದೇವೆ. ಎಲ್ಲಿ ರಸ್ತೆ ಬರುತ್ತದೆ, ರಸ್ತೆ ಅಗಲೀಕರಣ ಎಷ್ಟಿರಬೇಕು ಎಂಬುದರ ಬಗ್ಗೆ ಕಾನೂನಾತ್ಮಕವಾಗಿ ಚರ್ಚೆ ಮಾಡಿ ಹೊಸ ತೀರ್ಮಾನ ಮಾಡಬೇಕಿದೆ. ಬೆಂಗಳೂರಿನಲ್ಲಿ ಪೆರಿಫೆರಲ್ ರಿಂಗ್ ರಸ್ತೆಗೆ ಅಧಿಸೂಚನೆ ಹೊರಡಿಸಿ ನಂತರ ಅದನ್ನು ಕಾರ್ಯರೂಪಕ್ಕೆ ತರಲು ತಡವಾಗಿದೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದರು.
ದಾವೋಸ್ ಕಾರ್ಯಕ್ರಮದಲ್ಲಿ ಡಾಟಾ ಸೆಂಟರ್, ಗ್ಲೋಬಲ್ ಕೇಪಬಲ್ ಸೆಂಟರ್, ಆಹಾರ ಮತ್ತು ಪಾನೀಯ, ಏವಿಯೇಷನ್, ನವೀಕೃತ ಇಂಧನ, ಇವಿ, ಎಲೆಕ್ಟ್ರಾನಿಕ್ಸ್, ಅಡ್ವಾನ್ಸ್ ಮ್ಯಾನ್ಯುಫ್ಯಾಕ್ಚರ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 45ಕ್ಕೂ ಹೆಚ್ಚು ಕಂಪನಿಗಳ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಾಗಿದೆ. ನಮ್ಮಲ್ಲಿ ಲಭ್ಯವಿರುವ ನೀರು, ವಿದ್ಯುತ್ ಪ್ರಮಾಣ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಗಳನ್ನು ಕಂಪನಿಗಳು ಪಡೆದಿವೆ. ಹೊರ ದೇಶಗಳಲ್ಲಿ ಉದ್ಯಮ ಮಾಡುತ್ತಿರುವ ಅನಿವಾಸಿ ಭಾರತೀಯರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರುಗಳು ಕೂಡ ನಮ್ಮ ಕೈಗಾರಿಕ ಸಚಿವರಾದ ಎಂ.ಬಿ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ವಿವರಿಸಿದರು.
ಈ ಬಾರಿಯ ಕಾರ್ಯಕ್ರಮದಲ್ಲಿ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡುವ ಕಂಪನಿಗಳ ಜೊತೆಗಿನ ಒಪ್ಪಂದಕ್ಕೆ ಅಲ್ಲಿ ಸಹಿ ಹಾಕುವುದು ಬೇಡ ಎಂದು ನಿರ್ಧರಿಸಿದ್ದೇವೆ. ಹೊರ ದೇಶಗಳ ಕಂಪನಿಗಳು ಇಲ್ಲಿಗೆ ಬಂದು, ಇಲ್ಲಿನ ವಾತಾವರಣ, ಯುವ ಪ್ರತಿಭೆ, ಇಲ್ಲಿನ ಸೌಲಭ್ಯ, ಇಂಧನ, ನೀರಿನ ಸೌಲಭ್ಯ ಗಮನಿಸಬೇಕು. ಇನ್ನು ನಮ್ಮ ರಾಜ್ಯದ ಉದ್ಯಮಿಗಳು ಕೂಡ ಅಲ್ಲಿಗೆ ಬಂದು ತಮ್ಮ ಉದ್ಯಮ ವಿಸ್ತರಣೆಗೆ ತಮ್ಮ ಆಲೋಚನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 11 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಪ್ರಸ್ತಾವನೆ ಬಂದಿದ್ದು, ಇದರಲ್ಲಿ 50% ನಷ್ಟು ಹೂಡಿಕೆ ಕಾರ್ಯಗತಗೊಳ್ಳುತ್ತಿದೆ. ಹೀಗಾಗಿ ದಾವೋಸ್ ನಲ್ಲಿ ಒಪ್ಪಂದಕ್ಕೆ ಸಹಿ ಹಾಕದೇ, ಇಲ್ಲೇ ಸಹಿ ಹಾಕಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications