ಬೆಂಗಳೂರಿನ ದಾಹ ತಣಿಸಲು ಶರಾವತಿ, ತುಂಗಾ ಭದ್ರಾ ನೀರು
ಬೆಂಗಳೂರು, ಜೂನ್ 12: ಬೆಂಗಳೂರಿಗರ ಕುಡಿಯುವ ನೀರಿನ ದಾಹ ತಣಿಸಲು ಕಾವೇರಿ ನದಿಯಿಂದ ಸಾಧ್ಯವಾಗದ ಕಾರಣ ಮತ್ತೊಮ್ಮೆ ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ಹಾಗೂ ತುಂಗಾ ಭದ್ರಾ ನದಿಯಿಂದ ನೀರು ತರುವ ಪ್ರಯತ್ನಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.
ತುಂಗಾ ಭದ್ರಾ ನದಿಯಿಂದ ಬೆಂಗಳೂರಿಗೆ ನೀರು ಒದಗಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ಈ ಬಗ್ಗೆ ವಿಸ್ತೃತ ವರದಿ ನೀಡುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚಿಸಿದ್ದಾರೆ.
ಬೆಂಗಳೂರಿನಿಂದ 425 ಕಿ.ಮೀ ದೂರದಲ್ಲಿರುವ ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ತರುವುದು ಅತ್ಯಂತ ಸೂಕ್ತ ಕ್ರಮ ಎಂದು ನೀರಾವರಿ ತಜ್ಞರು ಅಭಿಪ್ರಾಯಪಟ್ಟಿದ್ದರೆ, ಪರಿಸರವಾದಿಗಳು, ಬೆಂಗಳೂರಿನಲ್ಲಿ ಜಲ ಸಂಪನ್ಮೂಲ ಉಳಿಸಿಕೊಂಡರೆ ನೀರಿನ ದಾಹ ತಣಿಸಬಹುದು ಎಂದಿದ್ದಾರೆ.
ಈಗ 18 ಟಿಎಂಸಿ ಅಡಿಗಳಷ್ಟು ನೀರು ತರಲು ಬೇಕಾದ ರೂಪುರೇಷೆ ಸಿದ್ಧಪಡಿಸುವಂತೆ ಮಂಗಳವಾರ(ಜೂನ್ 12) ದಂದು ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಸೂಚಿಸಿದ್ದಾರೆ.

ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ತರುವುದು ಸೂಕ್ತ ಕ್ರಮ
ಬೆಂಗಳೂರಿನಿಂದ 425 ಕಿ.ಮೀ ದೂರದಲ್ಲಿರುವ ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ತರುವುದು ಅತ್ಯಂತ ಸೂಕ್ತ ಕ್ರಮ ಎಂದು ನೀರಾವರಿ ತಜ್ಞರು ಅಭಿಪ್ರಾಯ ಪಟ್ಟಿದ್ದು, ಈಗ 18 ಟಿಎಂಸಿ ಅಡಿಗಳಷ್ಟು ನೀರು ತರಲು ಬೇಕಾದ ರೂಪುರೇಷೆ ಸಿದ್ಧಪಡಿಸುವಂತೆ ಮಂಗಳವಾರ(ಜೂನ್ 12) ದಂದು ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಸೂಚಿಸಿದ್ದಾರೆ.

ವಿವಿಧ ಜಿಲ್ಲೆಗಳಿಗೆ ಪ್ರಯೋಜನ
ವಿವಿಧ ಜಿಲ್ಲೆಗಳಿಗೆ ಪ್ರಯೋಜನ: ಲಿಂಗನಮಕ್ಕಿಯಿಂದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತಂದರೆ, ಬೆಂಗಳೂರಷ್ಟೇ ಅಲ್ಲ, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳಿಗೂ ಕುಡಿಯುವ ನೀರು ಒದಗಿಸಬಹುದು ಎಂದು ನೀರಾವರಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

1964ರಲ್ಲಿ ನಿರ್ಮಾಣಗೊಂಡ ಅಣೆಕಟ್ಟು
1964ರಲ್ಲಿ ನಿರ್ಮಾಣಗೊಂಡ ಅಣೆಕಟ್ಟಿನಲ್ಲಿ ಗರಿಷ್ಠ 151 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸಬಹುದಾಗಿದೆ. ಲಿಂಗಮಕ್ಕಿ ಜಲಾಶಯವನ್ನು ಶರಾವತಿ ನದಿಗೆ ಅಡ್ಡಲಾಗಿ, 1964ರಲ್ಲಿ ಕರ್ನಾಟಕ ಸರ್ಕಾರ ನಿರ್ಮಿಸಿತು. ಈ ಅಣೆಕಟ್ಟು 2.4 ಕಿ.ಮೀ. ಉದ್ದವಿದ್ದು, 1819 ಅಡಿ ಎತ್ತರವಿದೆ. 4368 ಮಿಲಿಯನ್ ಮೀಟರ್ ಕ್ಯೂಬ್ ನೀರು ಸಂಗ್ರಹ ಸಾಮರ್ಥ್ಯವನ್ನು ಜಲಾಶಯ ಹೊಂದಿದೆ.

ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ
ನೀರಿನ ಬೇಡಿಕೆ: ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ 18 ರಿಂದ 20 ಟಿಎಂಸಿ ಅಡಿಯಷ್ಟಿದ್ದು,ಮಳೆಕೊಯ್ಲು ವಿಧಾನದಿಂದ 15ಟಿಎಂಸಿ ಅಡಿಯಷ್ಟು ನೀರು ಉಳಿಸಬಹುದು. ನೀರು ಪುನರ್ ಬಳಕೆ ವಿಧಾನದಿಂದ 16 ಟಿಎಂಸಿ ಅಡಿಗಳಷ್ಟು ನೀರನ್ನು ಉಳಿಸಬಹುದು ಎಂದು ಐಐಎಸ್ಸಿ ಪ್ರೊ. ಡಾ ಟಿ. ವಿ ರಾಮಚಂದ್ರ ಅಭಿಪ್ರಾಯಪಟ್ಟಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications