Get Updates
Get notified of breaking news, exclusive insights, and must-see stories!

ಭಾರತಕ್ಕಾಗಿ ಇಂದಿರಾ, ರಾಜೀವ್ ರಕ್ತವನ್ನು ಈ ದೇಶ ಕಂಡಿದೆ

ನವದೆಹಲಿ, ಮೇ 8: ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ನಲ್ಲಿನ "ಶಾಹಿ ಪರಿವಾರ" ಹೇಳಿಕೆಗೆ ತಿರುಗೇಟು ನೀಡಿದ್ದು, ಭಾರತಕ್ಕಾಗಿ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ರಕ್ತವನ್ನು ಈ ದೇಶ ಕಂಡಿದೆ ಎಂದು ಹೇಳಿದರು.

ಕಾಂಗ್ರೆಸ್ ಶಾಹಿ ಪರಿವಾರವು (ರಾಜ ಕುಟುಂಬ) ಕರ್ನಾಟಕವನ್ನು ಭಾರತದಿಂದ ಬೇರ್ಪಡಿಸಲು ಬಯಸುತ್ತದೆ ಎಂದ ಮೋದಿ ಹೇಳಿಕೆ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿದ ಕಪಿಲ್‌ ಸಿಬಲ್‌ ಮೋದಿಜಿ ಈ ದೇಶ ಭಾರತಕ್ಕಾಗಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ರಕ್ತ ಹರಿದಿದೆ. ಎನ್‌ಸಿಇಆರ್‌ಟಿಯು ಪಠ್ಯಪುಸ್ತಕಗಳಿಂದ ಆ ಸಂಗತಿಗಳನ್ನು ಹೊರಹಾಕಲು ಬಿಜೆಪಿ ಹೊರಟಿದೆಯೇ? ಅವರು ಹೇಳಿದರು.

Kapil Sibal hits back at Narendra Modi

ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಇಬ್ಬರೂ ಕ್ರಮವಾಗಿ 1984 ಮತ್ತು 1991 ರಲ್ಲಿ ಹತ್ಯೆಯಾದರು. ಯುಪಿಎ 1 ಮತ್ತು 2 ರ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಸಿಬಲ್, ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾದರು.

ಭಾನುವಾರ ಕರ್ನಾಟಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶಾಹಿ ಪರಿವಾರ (ರಾಜ ಕುಟುಂಬ) ಎಲ್ಲ ಮಿತಿಗಳನ್ನು ಮುರಿದು ದೇಶದ ಭಾವನೆಗಳನ್ನು ಹತ್ತಿಕ್ಕುವ ಮೂಲಕ ಒಂದು ಹೆಜ್ಜೆ ಮುಂದೆ ಹೋಗಿದೆ. ಕರ್ನಾಟಕ ಮಾತ್ರವಲ್ಲ, ಇಡೀ ದೇಶಕ್ಕೆ ನಾನು ಬಹಳ ನೋವಿನಿಂದ ಹೇಳಲು ಬಯಸುತ್ತೇನೆ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಜಮನೆತನದವರು ನಿನ್ನೆ ಕರ್ನಾಟಕಕ್ಕೆ ಬಂದು ಕರ್ನಾಟಕದ ಸಾರ್ವಭೌಮತ್ವವನ್ನು ರಕ್ಷಿಸಬೇಕೆಂದು ಪ್ರಧಾನಿ ಹೇಳಿದ್ದರು.

ಕರ್ನಾಟಕದ ಸಾರ್ವಭೌಮ ರಾಜ್ಯ. ಅದರ ಅರ್ಥವೇನು ಗೊತ್ತಾ? ಅವರು ಸಂಸತ್ತಿನಲ್ಲಿ ಇಷ್ಟು ವರ್ಷ ಕುಳಿತು, ಭಾರತದ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಒಂದು ದೇಶ ಸ್ವತಂತ್ರವಾದಾಗ ಮಾತ್ರ ಆ ದೇಶವನ್ನು ಸಾರ್ವಭೌಮ ಎಂದು ಕರೆಯಲಾಗುತ್ತದೆ. ಕಾಂಗ್ರೆಸ್ ಹೇಳುತ್ತಿರುವುದರ ಅರ್ಥವೇನೆಂದರೆ, ಕರ್ನಾಟಕವು ಭಾರತದಿಂದ ಪ್ರತ್ಯೇಕವಾಗಿದೆ ಎಂದು ಕಾಂಗ್ರೆಸ್ ನಂಬುತ್ತದೆ ಎಂದು ಮೋದಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+