ರಾಕಿಭಾಯ್ ಯಶ್ ಶ್ರೀರಾಮ ಮಂದಿರದ ಬಗ್ಗೆ ಹೇಳಿದ್ದೇನು?
ಶತಕೋಟಿ ಹಿಂದೂಗಳ ಕನಸು ನಿನ್ನೆ ಈಡೇರಿದ್ದು, ಅದ್ಧೂರಿಯಾಗಿ ಅಯೋಧ್ಯೆ ಭೂಮಿಗೆ ಶ್ರೀರಾಮನ ಆಗಮನ ಆಗಿದೆ. ನಿನ್ನೆ ಶ್ರೀರಾಮ ಮಂದಿರ ಉದ್ಘಾಟನೆ ಆಗಿದೆ. ಹೀಗಿದ್ದಾಗಲೇ ಸಂಭ್ರಮ ಕಣ್ತುಂಬಿಕೊಳ್ಳಲು ಬಾಲಿವುಡ್, ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್ನಿಂದ ದೊಡ್ಡ ದೊಡ್ಡ ನಟ & ನಟಿಯರೇ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ ನಟ ಯಶ್ ಅವರಿಗೆ, ಆಹ್ವಾನ ಇದ್ದರೂ ಬಂದಿಲ್ಲ ಎಂಬ ಮಾತು ಹರಿದಾಡಿತ್ತು. ಆದರೆ ಶ್ರೀರಾಮನ ಬಗ್ಗೆ ಇದೀಗ ನಟ ಯಶ್ ಏನ್ ಹೇಳಿದ್ದಾರೆ ಗೊತ್ತೆ?
ದೇಶಕ್ಕೆ ದೇಶವೇ ರಾಮನ ಹೆಸರಿನಲ್ಲಿ ಮಿಂದು ಹೋಗಿದ್ದು, ದೀಪ ಬೆಳಗಿಸಿ ಸಂಭ್ರಮಿಸಿದ್ದಾರೆ. ಅಯೋಧ್ಯೆಯಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಸಂಭ್ರಮ ನಿನ್ನೆ ಮೇಳೈಸಿತ್ತು. ಇದೇ ವೇಳೆ ನಟ ಯಶ್ ಅವರು ಕಾರ್ಯಕ್ರಮಕ್ಕೆ ಬಂದಿಲ್ಲ ಯಾಕೆ..? ಎಂಬ ಬಗ್ಗೆ ಚರ್ಚೆ ಜೋರಾಗಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ ಅದರ ಜೊತೆಯಲ್ಲೇ ನಟ ಯಶ್ ಅವರು ಶ್ರೀರಾಮ ಗುಣಗಾನ ಮಾಡಿದ್ದಾರೆ. ಹಾಗಾದರೆ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಆಗಿ ಮಿಂಚಿದ್ದ ನಟ ಯಶ್ ಶ್ರೀರಾಮ ಮಂದಿರ ಉದ್ಘಾಟನೆ ಬಗ್ಗೆ ಹೇಳಿದ್ದು ಏನು ಗೊತ್ತೆ?

ಮರ್ಯಾದ ಪುರುಷನ ಬಗ್ಗೆ ಯಶ್...
ಹೌದು, ಅಯೋಧ್ಯೆಯ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ಹಲವಾರು ಬಾಲಿವುಡ್ ನಟ & ನಟಿಯರು ಹಾಜರಿದ್ದರು. ಇಷ್ಟು ಮಾತ್ರವಲ್ಲದೆ ಭಾರತದ ವಿವಿಧ ಸಿನಿ ರಂಗದ ನಟ ಮತ್ತು ನಟಿಯರು ಹಾಜರಿದ್ದರು. ಅದೇ ರೀತಿ ಕನ್ನಡಿಗ ಯಶ್ ಅವರು ಕೂಡ ಕಾರ್ಯಕ್ರಮಕ್ಕೆ ಹೋಗ್ತಾರೆ ಎನ್ನಲಾಗಿತ್ತು. ಆದರೆ ಅದು ನೆರವೇರಿಲ್ಲ, ಹೀಗಿದ್ದಾಗ ನಟ ಯಶ್ ಗೈರಾಗಿದ್ದು ಏಕೆ? ಎಂಬ ಪ್ರಶ್ನೆ ಮೂಡಿರುವಾಗಲೇ ನಟ ಯಶ್ ಈಗ ಮರ್ಯಾದ ಪುರುಷ ಶ್ರೀರಾಮನ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಶ್ರೀರಾಮನ ಬಗ್ಗೆ ಯಶ್ ಹೇಳಿದ್ದೇನು?
ಅಂದಹಾಗೆ ಈಗ ವಿಶೇಷವಾಗಿ ಟ್ವೀಟ್ ಮಾಡಿರುವ ರಾಕಿಂಗ್ ಸ್ಟಾರ್ ಯಶ್, ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನಿಗೆ ನಮನ: ಧಾರ್ವಿುಕ ಜೀವನದ ದ್ಯೋತಕ ಉದಾಹರಣೆ ಮೂಲಕ ಮುನ್ನಡೆಸು, ಸಂಬಂಧಗಳಿಗೆ ಪೂಜ್ಯಭಾವನೆ, ಪ್ರತಿಕೂಲತೆಯಲ್ಲೂ ದೃಢತೆ ಮತ್ತು ಮಿತಿ ಇಲ್ಲದ ಸಹಾನುಭೂತಿ. ಇದು ನಮಗೆಲ್ಲರಿಗೂ ನಿಜಕ್ಕೂ ಮಹಾಕಾವ್ಯದ ದಿನವಾಗಿದೆ. ಜೈ ಶ್ರೀ ರಾಮ್, ಎಂದು ನಟ ಯಶ್ ಅವರು ಸ್ಪೆಷಲ್ ಟ್ವೀಟ್ ಮಾಡಿದ್ದಾರೆ. ಹಾಗೇ ರಾಕಿಂಗ್ ಸ್ಟಾರ್ ಯಶ್ ಅವರು ಇದೀಗ ಸಿನಿಮಾ ಶೂಟಿಂಗ್ನಲ್ಲಿ ಇರುವ ಕಾರಣ, ಅನಿವಾರ್ಯವಾಗಿ ಕಾರ್ಯಕ್ರಮಕ್ಕೆ ಬಂದಿಲ್ಲ ಎನ್ನಲಾಗಿದೆ.
Namana to Maryada Purushottama Lord Rama: the epitome of Dharmic life, leading by example, reverence for relationships, resilience in adversity, and boundless compassion
— Yash (@TheNameIsYash) January 22, 2024
Truly an epic day for us all
Jai Shree Ram🙏 pic.twitter.com/vorivjbjbO
ಯಶ್-19 ಅಬ್ಬರ ಬಲು ಜೋರು
'ಕೆಜಿಎಫ್-1' ತನ್ನ ಕೆಪಾಸಿಟಿ ತೋರಿಸಿತ್ತು, ನಂತರ 2022ರಲ್ಲಿ 'ಕೆಜಿಎಫ್-2' 1000 ಕೋಟಿ ಕ್ಲಬ್ ಸೇರಿ ಅಬ್ಬರಿಸಿತ್ತು. ಕೆಜಿಎಫ್-2 ಬಳಿಕ ಯಶ್ ಅವರ ಯಾವುದೇ ಸಿನಿಮಾಗಳು ಅನೌನ್ಸ್ ಆಗಿರಲಿಲ್ಲ. ಹೀಗಾಗಿ ಅವರ ಅಭಿಮಾನಿಗಳು ಸಖತ್ ಕುತೂಹಲದಿಂದ ಕಾಯ್ತಾ, ಯಶ್-19 ಅಪ್ಡೇಟ್ಗೆ ಎದುರು ನೋಡುತ್ತಿದ್ದರು. ಹೀಗಿದ್ದಾಗ ಸರಿಯಾಗಿ ಒಂದೂವರೆ ತಿಂಗಳ ಹಿಂದಷ್ಟೆ ತಮ್ಮ ಮುಂದಿನ ಸಿನಿಮಾ ಬಗ್ಗೆ ಭರ್ಜರಿ ಘೋಷಣೆ ಹೊರಡಿಸಿದ್ದರು ರಾಕಿಂಗ್ ಸ್ಟಾರ್. ಹೀಗೆ, ಯಶ್-19 ಸಿನಿಮಾಗೆ 'ಟಾಕ್ಸಿಕ್' ಎಂಬ ಟೈಟಲ್ ಇಡಲಾಗಿತ್ತು.

ಯಶ್-19 'ಟಾಕ್ಸಿಕ್' ಫಸ್ಟ್ ಲುಕ್ನ ನೋಡುತ್ತಿದ್ದರೆ, ನಟ ಯಶ್ ಬೇರೆ ಏನೋ ದೊಡ್ಡದಾಗಿ ಮಾಡುತ್ತಿರುವಂತೆ ಕಾಣುತ್ತಿದೆ. ಈಗಾಗಲೇ ಭಾರತ ಸಿನಿಮಾ ರಂಗವನ್ನು ಶೇಕ್ ಮಾಡಿರುವ ಈ ನಟ ಹಾಲಿವುಡ್ ರಣ ರಂಗದಲ್ಲಿ ಖದರ್ ತೋರಿಸೋದಕ್ಕೆ ಸಜ್ಜಾಗಿದ್ದಾರೆ. ಹೀಗೆ ಕನ್ನಡ ನೆಲದ ನಟ ಜಾಗತಿಕವಾಗಿ ಖ್ಯಾತಿ ಪಡೆಯುತ್ತಿರುವುದು ಕನ್ನಡಿಗರಿಗೂ ಖುಷಿ ತಂದಿದೆ. ಈ ಸಮಯಕ್ಕೆ ನಟ ಯಶ್ ಅವರು ಶ್ರೀರಾಮ ಮಂದಿರದ ಬಗ್ಗೆಯೂ ಹೆಮ್ಮೆಯ ಮಾತುಗಳನ್ನಾಡಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications