ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್ವೈ ಸರಕಾರವನ್ನು 'ಕಲಿಯುಗದ ಕೌರವರು'ಎಂದ ಡಿ.ಕೆ.ಶಿವಕುಮಾರ್

|
Google Oneindia Kannada News

ಬೆಂಗಳೂರು, ಜುಲೈ 23: ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು, ಯಡಿಯೂರಪ್ಪ ನೇತೃತ್ವದ ಸರಕಾರದ ವಿರುದ್ದ ಕಾಂಗ್ರೆಸ್, ದಾಖಲೆಗಳ ಮೇಲೆ ದಾಖಲೆಯನ್ನು ಬಿಡುಗಡೆ ಮಾಡುತ್ತಿದೆ.

Recommended Video

India vs China : ಪಾಕಿಸ್ತಾನವನ್ನು ಬಿಟ್ಟು ಚೀನಾವನ್ನು ಟಾರ್ಗೆಟ್ ಮಾಡಿದ ಭಾರತ | Oneindia Kannada

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡುತ್ತಿದ್ದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, "ಮಹಾಭಾರತ ಯುದ್ದ ಮುಗಿಯಲು ಹದಿನೆಂಟು ದಿನಬೇಕಾಯಿತು. ಕೊರೂನಾ ವಿರುದ್ದ ಜಯಸಾಧಿಸಲು 21ದಿನಗಳು ಸಾಕು ಎಂದು ಬಿಜೆಪಿಯವರು ಹೇಳಿದ್ದರು. ಆದರೆ ಈಗ 121 ದಿನವಾದರೂ, ಕೊರೊನಾದಿಂದ ಮುಕ್ತಿಸಿಗಲಿಲ್ಲ"ಎಂದು ಡಿಕೆಶಿ ಹೇಳಿದರು.

ಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

"ಯಾವುದೇ ದೂರದೃಷ್ಟಿಯಿಲ್ಲದ, ಬರೀ ಭ್ರಷ್ಟಾಚಾರದಲ್ಲೇ ತೊಡಗಿರುವ ಯಡಿಯೂರಪ್ಪನವರ ಸರಕಾರ ಕಲಿಯುಗದ ಕೌರವರು ಇದ್ದಂತೆ"ಎಂದು ಡಿ.ಕೆ.ಶಿವಕುಮಾರ್, ಸರಕಾರದ ವಿರುದ್ದ ಕಿಡಿಕಾರಿದರು.

This Is A Government Of Kaliyugada Kauravas, D K Shivakumar On Yediyurappa Government

"ನಮ್ಮ ನಾಯಕರಾದ ಸಿದ್ದರಾಮಯ್ಯನವರು ಸರಕಾರದ ಎರಡು ಸಾವಿರ ಕೋಟಿ ಭ್ರಷ್ಟಾಚಾರವನ್ನು ಹೊರಗೆಳೆದಿದ್ದಾರೆ. ಕೊರೊನಾಗಿಂತಲೂ ದೊಡ್ಡ ಸಮಸ್ಯೆಯಲ್ಲಿ ಬಿಜೆಪಿ ತಗಲಾಕಿಕೊಂಡಿದೆ"ಎಂದು ಡಿಕೆಶಿ ಈ ಸಂದರ್ಭದಲ್ಲಿ ಹೇಳಿದರು.

"ಸರಕಾರದ ಮೂಲ ಧ್ಯೇಯ ಲೂಟಿ ಹೊಡೆಯುವುದು. ರಾಜ್ಯದಲ್ಲಿನ ಆಡಳಿತಯಂತ್ರ ದಾರಿತಪ್ಪಿ ಹೋಗಿದೆ. ಹಾಲೀ ನ್ಯಾಯಧೀಶರ ನೇತೃತ್ವದಲ್ಲಿ ಕೊರೊನಾ ಅಕ್ರಮದ ಬಗ್ಗೆ ತನಿಖೆ ನಡೆಯಬೇಕೆಂದು ನಾವು ಒತ್ತಾಯ ಮಾಡುತ್ತಿದ್ದೇವೆ"ಎಂದು ಡಿಕೆಶಿ ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೊರೊನಾ ಭ್ರಷ್ಟಾಚಾರದ ದಾಖಲೆಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡುತ್ತಿದ್ದಂತೆಯೇ, 'ಉತ್ತರಕೊಡಿ ಬಿಜೆಪಿ' ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.

English summary
This Is A Government Of 'Kaliyugada Kauravas', KPCC President D K Shivakumar On Yediyurappa Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X