ವಿಶ್ಲೇಷಣೆ: ಕರ್ನಾಟಕದಲ್ಲಿ ಬಿಜೆಪಿ ಹೆಣೆಯುತ್ತಿರುವ ಬಲೆಗೆ ಕಾಂಗ್ರೆಸ್ ಬಿದ್ದಿರಬಹುದೇ?
ಬೆಂಗಳೂರು, ಏಪ್ರಿಲ್. 30: 'ಭಾರತದ ಸಿಲಿಕಾನ್ ವ್ಯಾಲಿ'ಗೆ ನೆಲೆಯಾಗಿರುವ ಕರ್ನಾಟಕವು ಜಾತಿ ಮತ್ತು ಧರ್ಮಗಳ ಆಧಾರದ ಮೇಲೆ ಅದೇ ಹಳೆಯ ಶೈಲಿಯ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಈ ಬಾರಿಯ ಚುನಾವಣೆಯಲ್ಲಿಯೂ ಕಾಂಗ್ರೆಸ್ , ಬಿಜೆಪಿ ಹೆಣೆದ ಬಲೆಗೆ ಬೀಳುತ್ತಿರುವಂತೆ ಕಾಣಿಸುತ್ತಿದೆ. ಬಿಜೆಪಿಯ ಘೋಷಣೆಗಳಿಗೆ ಟಕ್ಕರ್ ಕೊಡುತ್ತಾ ಅದರ ಸುತ್ತಲೇ ಸುತ್ತುತ್ತಿರುವಂತೆ ಕಾಣಿಸುತ್ತಿದೆ.
ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಮುನ್ನವೇ, ಆಡಳಿತಾರೂಢ ಬಿಜೆಪಿಯು ಮುಸ್ಲಿಮರಿಗೆ ನೀಡಲಾಗಿದ್ದ 4% ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಿತು.

ಮುಸ್ಲಿಮರನ್ನು 10% ಆರ್ಥಿಕವಾಗಿ ದುರ್ಬಲ ವರ್ಗದ (EWS) ವರ್ಗದೊಳಗೆ ವರ್ಗಾಯಿಸುವುದಾಗಿ ಘೋಷಿಸಿತು. ತಕ್ಷಣ ಕಾಂಗ್ರೆಸ್ ಕೇಸರಿ ಪಕ್ಷದ ಬಲಗೆ ಸಿಲುಕಿತು. ಈ ಕೋಟಾವನ್ನು ಮರುಸ್ಥಾಪಿಸುವುದು ಮಾತ್ರವಲ್ಲದೆ ಅಧಿಕಾರಕ್ಕೆ ಬಂದರೆ ಆಡಳಿತಾರೂಢ ಬಿಜೆಪಿ ಘೋಷಿಸಿದ ವಿವಿಧ ಮೀಸಲಾತಿ ಕೋಟಾಗಳನ್ನು ರದ್ದುಗೊಳಿಸುವುದಾಗಿ ವಾಗ್ದಾನ ಮಾಡಿದರು.
*4% ಮುಸ್ಲಿಂ ಮೀಸಲಾತಿ ವಿವಾದ*
ಬಿಜೆಪಿಯ ಕ್ರಮವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ತಡೆಯಾಜ್ಞೆ ನೀಡಲಾಗಿದೆ. ಆದರೆ ಸಂದರ್ಶನವೊಂದರಲ್ಲಿ ಕೇಳಿದಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಸ್ಲಿಮರಿಗೆ 4% OBC ಮೀಸಲಾತಿ ಅಸಂವಿಧಾನಿಕ ಎಂದು ಹೇಳಿದ್ದಾರೆ. "ಬಿಜೆಪಿ ಎಂದಿಗೂ ಓಲೈಕೆಯನ್ನು ನಂಬುವುದಿಲ್ಲ. ಆದ್ದರಿಂದ, ಮೀಸಲಾತಿಯನ್ನು ಬದಲಾಯಿಸಲು ಅದು ನಿರ್ಧರಿಸಿದೆ" ಎಂದು ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡರು.
ಇನ್ನೊಂದೆಡೆ ಬಿಜೆಪಿ ನೀಡಿರುವ ಹಲವು ಮೀಸಲಾತಿ ಕಾನೂನು, ಸಂವಿಧಾನ ಹಾಗೂ ಸಮುದಾಯಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಶೇ.56ಕ್ಕೆ ಏರಿದ್ದು, ಬಿಜೆಪಿ ಸರಕಾರ ಮಿತಿ ವಿಸ್ತರಿಸಿ ಎರಡೂ ಸಮುದಾಯಗಳಿಗೆ ಮೀಸಲಾತಿ ನೀಡಲಿ. ಕಾಂಗ್ರೆಸ್ ಅಲ್ಪಸಂಖ್ಯಾತರೊಂದಿಗೆ ದೃಢವಾಗಿ ನಿಂತಿದೆ. ಮುಸ್ಲಿಂ ಮೀಸಲಾತಿ ಇರಬೇಕು ಎಂದು ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಅವರ ಮೀಸಲಾತಿ ಕ್ರಮವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ. ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಮೂಲಕ ಹಿಂದೂ ಮತಗಳನ್ನು ಒಟ್ಟುಗೊಳಿಸಲು ಬಿಜೆಪಿ ಆಶಿಸುತ್ತಿದ್ದರೆ, ಕಾಂಗ್ರೆಸ್ ಕೂಡ ಅದರ ಬಲೆಗೆ ಬಿದ್ದಂತೆ ತೋರುತ್ತಿದೆ. ಅಮಿತ್ ಶಾ ತಮ್ಮ ಸಾರ್ವಜನಿಕ ಸಭೆಗಳಲ್ಲಿ ಈ ಕ್ರಮವನ್ನು ಸಮರ್ಥಿಸಿಕೊಂಡ ಕಾರಣಗಳಲ್ಲಿ ಇದೂ ಒಂದು.
*ಒಕ್ಕಲಿಗ ಮತ್ತು ಲಿಂಗಾಯತ ಮತ ಬ್ಯಾಂಕ್*
ಕರ್ನಾಟಕದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಯಾವುದೇ ಪಕ್ಷದ ಗೆಲುವಿಗೆ ಪ್ರಮುಖರಾಗಿದ್ದಾರೆ. ಅನೇಕ ಅಂದಾಜಿನ ಪ್ರಕಾರ, ಲಿಂಗಾಯತ ಸಮುದಾಯವು ಜನಸಂಖ್ಯೆಯ ಶೇಕಡಾ 17 ರಷ್ಟಿದ್ದರೆ, ಒಕ್ಕಲಿಗರು ಸುಮಾರು 15 ಶೇಕಡಾ, ಮುಸ್ಲಿಮರು 13 ಶೇಕಡಾ, ಬ್ರಾಹ್ಮಣರು ಶೇಕಡಾ 3, ಇತರ ಹಿಂದುಳಿದ ವರ್ಗಗಳು (ಒಬಿಸಿ) 35 % ಮತ್ತು ಪರಿಶಿಷ್ಟ ಜಾತಿಗಳು ( ಎಸ್ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್ಟಿಗಳು) ಸುಮಾರು 18 % ಇದ್ದಾರೆ.
ಹೆಚ್ಚಿನ ಸಂದರ್ಭಗಳಲ್ಲಿ, ಲಿಂಗಾಯತರು ಮತ್ತು ಒಕ್ಕಲಿಗರು ಒಗ್ಗಟ್ಟಿನಿಂದ ಮತ ಚಲಾಯಿಸಿದ್ದಾರೆ ಇದು ಫಲಿತಾಂಶಗಳಲ್ಲಿಯೂ ಪರಿಣಾಮ ಬೀರಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 100 ಕ್ಷೇತ್ರಗಳ ಫಲಿತಾಂಶದ ಮೇಲೆ ಲಿಂಗಾಯತರು ಪ್ರಭಾವ ಬೀರಿದರೆ, 80 ಕ್ಷೇತ್ರಗಳಲ್ಲಿ ಒಕ್ಕಲಿಗರು ಗಮನಾರ್ಹ ಅಸ್ತಿತ್ವವನ್ನು ಹೊಂದಿದ್ದಾರೆ. ಈ ಪೈಕಿ 44 ಕ್ಷೇತ್ರಗಳಲ್ಲಿ ಅವರು ಪ್ರಬಲರಾಗಿದ್ದಾರೆ.
*ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಪ್ರಮುಖರು*
ಲಿಂಗಾಯತ ನಾಯಕರಲ್ಲಿ ಒಬ್ಬರಾದ ಬಿಎಸ್ ಯಡಿಯೂರಪ್ಪ ಅವರ ಬೆಂಬಲವನ್ನು ಬಿಜೆಪಿ ಹೊಂದಿದ್ದರೆ, ಇಬ್ಬರು ಪ್ರಮುಖ ನಾಯಕರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಟಿಕೆಟ್ ನಿರಾಕರಣೆಯ ನಂತರ ಕಾಂಗ್ರೆಸ್ಗೆ ಪಕ್ಷಾಂತರಗೊಂಡಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಪ್ರಬಲ ಒಕ್ಕಲಿಗ ನಾಯಕರನ್ನು ಕಣಕ್ಕಿಳಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ಅವರು ವಿ ಸೋಮಣ್ಣ ಅವರನ್ನು ಎದುರಿಸಿದರೆ, ಕನಕಪುರದಲ್ಲಿ ಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ಕಣಕ್ಕಿಳಿದಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications