‘ಮಿಸ್ಟರ್ ಒ.ಟಿ. ರವಿಯವರೇ ಈಗ ಹೇಳಿ ಯಾರು ತಾಲಿಬಾನ್ ಪರ?’
ಸಿ.ಟಿ. ರವಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪದೇ ಪದೇ ಮಾತಿನ ಕಾಳಗ ನಡೆಯುತ್ತಿದ್ದು, ಈ ಮೂಲಕ ಸಿ.ಟಿ. ರವಿ ಸೇರಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಹೀಗಿದ್ದಾಗ ಸಿ.ಟಿ. ರವಿ ಈ ಹಿಂದೆ ತಾವೇ ನೀಡಿದ್ದ ಹೇಳಿಕೆ ಇದೀಗ ಅವರಿಗೇ ದೊಡ್ಡ ತೊಡಕಾಗಿದ್ದು, ಸಿ.ಟಿ. ರವಿ ಹೇಳಿಕೆ ಮುಂದೆ ಇಟ್ಟುಕೊಂಡು ತಾಲಿಬಾನ್ ಅಸ್ತ್ರ ಪ್ರಯೋಗ ಮಾಡಿದೆ ಕೈಪಡೆ. ಇದೇ ಸಮಯದಲ್ಲಿ, 'ಮಿಸ್ಟರ್ ಒ.ಟಿ. ರವಿಯವರೇ ಈಗ ಹೇಳಿ ಯಾರು ತಾಲಿಬಾನ್ ಪರ?' ಅಂತಾ ಪ್ರಶ್ನೆ ಕೇಳ್ತಿದ್ದಾರೆ ಸೋಷಿಯಲ್ ಮೀಡಿಯಾದಲ್ಲಿ!
ಹೌದು, ತಾಲಿಬಾನ್ ಆಡಳಿತದ ವಿಚಾರವಾಗಿ ದೊಡ್ಡ ಚರ್ಚೆಗಳು ಪದೇ ಪದೇ ನಡೆಯುತ್ತಲೇ ಇದೆ. ಅದರಲ್ಲೂ ಕಾಂಗ್ರೆಸ್ ಆಡಳಿತವನ್ನು ಬಿಜೆಪಿ ನಾಯಕರು ಯಾವಾಗಲೂ ತಾಲಿಬಾನ್ಗೆ ಹೋಲಿಕೆ ಮಾಡಿ ಕೌಂಟರ್ ಕೊಡುತ್ತಿದ್ದರು. ಆದರೆ ಇದೀಗ ತಾಲಿಬಾನ್ ನಾಯಕರು ಭಾರತಕ್ಕೆ ಬಂದು, ಭಾರತೀಯ ವಿದೇಶಾಂಗ ಸಚಿವರ ಜೊತೆಗೆ ಓಡಾಡುತ್ತಾ ಭಾಷಣ ಮಾಡುತ್ತಿರುವ ವಿಡಿಯೋ ಇಟ್ಟುಕೊಂಡು ಭಾರಿ ದೊಡ್ಡ ಮಟ್ಟದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

'ಮಿಸ್ಟರ್ ಒ.ಟಿ. ರವಿಯವರೇ...'
ಅಂದಹಾಗೆ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ತಾಲಿಬಾನಿಗಳು ಅಂತಾ ಪದೇ ಪದೇ ಹೇಳುತ್ತಾ ಇದ್ದರು ಸಿ.ಟಿ. ರವಿ ಅವರು. ಆದರೆ ಇದೀಗ ಸ್ವತಃ ತಾಲಿಬಾನ್ ನಾಯಕರಿಗೆ ಭಾರತದಲ್ಲಿ ಭವ್ಯ ಸ್ವಾಗತವೇ ಸಿಕ್ಕಿದ್ದು, ಸಾಲು ಸಾಲು ಕಾರ್ಯಕ್ರಮದಲ್ಲಿ ಕೂಡ ಭಾವಹಿಸಿದ್ದಾರೆ. ಇಷ್ಟೆಲ್ಲದರ ನಡುವೆ 'ಮಿಸ್ಟರ್ ಒ.ಟಿ. ರವಿಯವರೇ ಈಗ ಹೇಳಿ ಯಾರು ತಾಲಿಬಾನ್ ಪರ?' ಅಂತಾ ಪ್ರಶ್ನೆ ಕೇಳ್ತಿದ್ದಾರೆ ನೆಟ್ಟಿಗರು. ರವಿ ಅವರ ಹಳೆಯ ವಿಡಿಯೋ ಜೊತೆಗೆ ಇದನ್ನು ಕಂಪೇರ್ ಮಾಡುತ್ತಿದ್ದಾರೆ. ಈ ಮೂಲಕ ಸಿಟಿ ರವಿ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸವಾಲು ಎದುರಾಗಿದೆ.
ಒಟ್ನಲ್ಲಿ ಮತ್ತೆ ಸೋಷಿಯಲ್ ಮೀಡಿಯಾ ವಾರ್ ಜೋರಾಗಿದ್ದು, ಅದರಲ್ಲೂ ಕರ್ನಾಟಕದ ರಾಜಕೀಯದಲ್ಲಿ ಇದೀಗ ತಾಲಿಬಾನ್ ವಿಚಾರ ಕೂಡ ಪ್ರಸ್ತಾಪ ಆಗುತ್ತಿದೆ. ಹಾಗೇ ತಾಲಿಬಾನ್ ನಾಯಕರಿಗೆ ಅದ್ಧೂರಿಯಾಗಿ ಸ್ವಾಗತ ಸಿಕ್ಕ ಬಗ್ಗೆ ಅಸ್ತ್ರ ಮಾಡಿಕೊಂಡು ಕಾಂಗ್ರೆಸ್ ನಾಯಕರು ಇದೀಗ ಬಿಜೆಪಿ ನಾಯಕರಿಗೆ ಪ್ರಶ್ನೆ ಕೇಳುತ್ತಿದ್ದಾರೆ. ಮತ್ತೊಂದು ಕಡೆ ಈ ಹಿಂದೆ ಬಿಜೆಪಿ ನಾಯಕರು ತಾಲಿಬಾನ್ ವಿರುದ್ಧ ನೀಡಿದ್ದ ಹೇಳಿಕೆಯ ವಿಡಿಯೋ ಕೂಡ ವೈರಲ್ ಮಾಡಿ ಪ್ರಶ್ನೆಗಳನ್ನ ಕೇಳುತ್ತಿದ್ದಾರೆ ಕರ್ನಾಟಕದ ಕಾಂಗ್ರೆಸ್ ನಾಯಕರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications