BC Patil: ಬಿ.ಸಿ. ಪಾಟೀಲ್ ಅಳಿಯ ಯಾರು? ಆತ್ಮ**ಗೆ ಶರಣಾಗಿದ್ದು ಯಾಕೆ?
ಕನ್ನಡ ಸಿನಿಮಾ ರಂಗದಲ್ಲಿ ಹೆಸರು ಸಂಪಾದಿಸಿ, ನಂತರ ಶಾಸಕರಾಗಿ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಕೂಡ ಪಡೆದಿದ್ದ ಬಿ.ಸಿ. ಪಾಟೀಲ್ ಅವರ ಕುಟುಂಬಕ್ಕೆ ಇಂದು ಭೀಕರ ಸುದ್ದಿ ಎದುರಾಗಿದೆ. ಅಂದಹಾಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಅಂದ್ರೆ ಮಗಳ ಗಂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾಗಾದ್ರೆ ಹೀಗೆ ಆಗಲು ಕಾರಣ ಏನು? ಬನ್ನಿ ತಿಳಿಯೋಣ, ಪೂರ್ತಿ ಮಾಹಿತಿಗಾಗಿ ಮುಂದೆ ಓದಿ.
12 ವರ್ಷಗಳ ಹಿಂದೆ ಬಿ.ಸಿ.ಪಾಟೀಲ್ ಮಗಳ ಜೊತೆ ಮದುವೆ ಆಗಿದ್ದ ದಾವಣಗೆರೆ ತಾಲೂಕಿನ ಕತ್ತಲಗೇರಿ ಗ್ರಾಮದ ನಿವಾಸಿ ಪ್ರತಾಪ್ ಕುಮಾರ್ ಕೆ.ಜಿ. ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿ.ಸಿ. ಪಾಟೀಲ್ ಅವರ ಹಿರಿಯ ಪುತ್ರಿ ಸೌಮ್ಯಾ ಅವರನ್ನು ಮದುವೆ ಆಗಿದ್ದ ಪ್ರತಾಪ್ ಕುಮಾರ್ ಕೆ.ಜಿ. ಇಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಬಿ.ಸಿ. ಪಾಟೀಲ್ ಮನೆ ಅಳಿಯ ಆಗಿದ್ದ ಪ್ರತಾಪ್ ಕುಮಾರ್ ಕೆ.ಜಿ. ಅವರು, ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಎಲ್ಲಾ ವ್ಯವಹಾರ ನೋಡಿಕೊಳ್ತಾ ಇದ್ದರಂತೆ.

ಆತ್ಮಹತ್ಯೆ ಮಾಡಿಕೊಂಡಿದ್ದು ಏಕೆ?
ಮದುವೆ ಆದ ನಂತರ ಹಿರೇಕೆರೂರಿಗೆ ಬಂದು ಮೃತ ಪ್ರತಾಪ್ ಕುಮಾರ್ ಕೆ.ಜಿ. ಅವರು ಬಿಸಿ ಪಾಟೀಲ್ ಅವರ ಕುಟುಂಬದ ಜೊತೆಗೆ ವಾಸ ಇದ್ದರಂತೆ. ಅಲ್ಲದೆ ಬಿಸಿ ಪಾಟೀಲ್ ಅವರ, ಎಲ್ಲಾ ರಾಜಕೀಯ ಕೆಲಸಗಳನ್ನ ನಿರ್ವಹಣೆ ಮಾಡ್ತಾ ಇದ್ದರು ಎಂಬ ಮಾಹಿತಿ ಸಿಗುತ್ತಿದೆ. ಈ ನಡುವೆ ಇಂದು ಹೆದ್ದಾರಿ ಸಮೀಪ ಆತ್ಮಹತ್ಯೆಗೆ ಶರಣಾಗಿರುವ ಆರೋಪವು ಕೇಳಿಬಂದಿದ್ದು, ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭ ಮಾಡಿದ್ದಾರೆ. ಮತ್ತೊಂದು ಕಡೆ ಈ ಘಟನೆಯ ಬೆನ್ನಲ್ಲೇ ಬಿಸಿ ಪಾಟೀಲ್ ಕುಟುಂಬಕ್ಕೆ ತೀವ್ರ ಆಘಾತ ಎದುರಾಗಿದೆ.
ಬಿಸಿ ಪಾಟೀಲ್ & ವಿಜಯೇಂದ್ರ ಭೇಟಿ
ಮತ್ತೊಂದು ಕಡೆ ಅಳಿಯನ ಸಾವಿನ ಸುದ್ದಿ ತಿಳಿದು, ಶಿವಮೊಗ್ಗಕ್ಕೆ ತೆರಳಿದ ಬಿ.ಸಿ. ಪಾಟೀಲ್ ಅವರಿಗೆ ಈಗ ಕುಟುಂಬದ ಸದಸ್ಯರು ಜೊತೆಯಾಗಿದ್ದಾರೆ. ಹಿರೇಕೆರೂರಿನ ಬಿ.ಸಿ. ಪಾಟೀಲ್ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ಸ್ಥಳೀಯ ನಾಯಕರು ಕೂಡ ಸಾಂತ್ವನ ಹೇಳುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೇರಿದಂತೆ, ರೇಣುಕಾಚಾರ್ಯ & ಸ್ಥಳೀಯ ಬಿಜೆಪಿ ನಾಯಕರು ಹಾಗೂ ಮುಖಂಡರು ಇದೀಗ ಬಿಸಿ ಪಾಟೀಲ್ ಅವರಿಗೆ ಸಾಂತ್ವನ ಹೇಳಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications