ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಲ್ಲಿ ಸೆಕೆ: ರಾಜ್ಯಾದ್ಯಂತ ವಾರಾಂತ್ಯದಲ್ಲಿ ಮಳೆ ಸಾಧ್ಯತೆ

|
Google Oneindia Kannada News

Recommended Video

ಈ ವಾರಾಂತ್ಯದಲ್ಲಿ ಕರ್ನಾಟಕದಲ್ಲಿ ಬಾರಿ ಮಳೆಯ ಸಾಧ್ಯತೆ | Oneindia Kannada

ಬೆಂಗಳೂರು, ಅಕ್ಟೋಬರ್ 1: ಬೆಂಗಳೂರಲ್ಲಿ ಪ್ರತಿ ದಿನ ಸಂಜೆಯ ನಂತರ ಮಳೆಯಾಗುತ್ತಿದ್ದರೂ ವಿಪರೀತ ಸೆಕೆ ಆರಂಭವಾಗಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಅ.6ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ವಾರದ ಅಂತ್ಯದಲ್ಲಿ ಕರ್ನಾಟಕಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರವಾಹ ಬಂದಿದ್ದು ನಿಜ, ಆದರೂ ಈ ಬಾರಿ ಮಳೆ ಕೊರತೆ! ಪ್ರವಾಹ ಬಂದಿದ್ದು ನಿಜ, ಆದರೂ ಈ ಬಾರಿ ಮಳೆ ಕೊರತೆ!

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ವಾಡಿಕೆ ಹಿಂಗಾರು ಮಳೆ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ಅ.7-8ರಂದು ವಾಯುಭಾರ ಕುಸಿತ ಉಂಟಾಗಲಿರುವ ಕಾರಣ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾಸನ, ಬೀದರ್, ಬಾಳೆಹೊನ್ನೂರಿನಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ.

ಹನೂರು ವ್ಯಾಪ್ತಿಯಲ್ಲಿ ಭಾರೀ ಗಾಳಿ, ಮಳೆ: ಕೆರೆಯಂತಾದ ಪ್ರೌಢಶಾಲಾ ಆವರಣ ಹನೂರು ವ್ಯಾಪ್ತಿಯಲ್ಲಿ ಭಾರೀ ಗಾಳಿ, ಮಳೆ: ಕೆರೆಯಂತಾದ ಪ್ರೌಢಶಾಲಾ ಆವರಣ

This weekend Karnataka state may get heavy rain

ಮಂಗಳೂರಲ್ಲಿ ಮತ್ತೆ ಮಳೆ ಆರಂಭ:ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಮಂಗಳೂರಲ್ಲಿ ಮತ್ತೆ ಮಳೆ ಆರಂಭ:ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ

ಒಂದು ವಾರದಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳ ಮಧ್ಯಭಾಗದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ಗೆ ಏರಿತ್ತು. ಕೆಲ ದಿನಗಳು ಹಗಲಿನಲ್ಲಿ ಏರುತ್ತಿದ್ದ ಸೆಕೆ ಸಂಜೆ ಸಮಯಕ್ಕೆ ಮಳೆ ಬಂದಾಗ ಕಡಿಮೆಯಾಗುತ್ತಿತ್ತು, ಇನ್ನು ಕೆಲ ದಿನಗಳಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಟಬಹುದು ಎಂದು ಅಂದಾಜಿಸಲಾಗಿದೆ.

English summary
Indian Meteorological Department has forecast heavy rain in southern interior of the state and coastal parts within five days as depression occurred in Arabian sea.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X