ರಮೇಶ್ ಜಾರಕಿಹೊಳಿ ಅವರನ್ನ ಅವಮಾನಿಸಿದವರನ್ನು ಕೂಡಲೇ ಬಂಧಿಸಿ: ಎನ್.ರವಿಕುಮಾರ್ ಆಗ್ರಹ
ಬೆಂಗಳೂರು, ನವೆಂಬರ್ 02: ಬಿಜೆಪಿ ಮುಖಂಡ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಅವಮಾನ ಮಾಡುವ ಮತ್ತು ಅಗೌರವ ತೋರುವ ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದರು.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಸಂಬಂಧ ಇಂದು ನಗರದ ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಅವರು ಗೌರವಸ್ಥ ಕುಟುಂಬದಿಂದ ಬಂದಿದ್ದು, ಹಿಂದೆ ಸಚಿವ, ಶಾಸಕರಾಗಿ ಕೆಲಸ ಮಾಡಿದವರು. ಈ ಪೋಸ್ಟರ್ ಅಂಟಿಸುವ ಕಾರ್ಯದ ಹಿಂದೆ ಯಾರೋ ದೊಡ್ಡ ನಾಯಕರಿದ್ದಾರೆ ಎಂದು ಆರೋಪಿಸಿದರು.

ನಾಲ್ಕು ದಿನಗಳು ಕಳೆದರೂ ಪೋಸ್ಟರ್ ಅಂಟಿಸಿದವರನ್ನು ಬಂಧಿಸಿಲ್ಲ. ಸಿಸಿ ಕ್ಯಾಮೆರಾ, ತಂತ್ರಜ್ಞಾನ ಬಳಸಿ ಪೋಸ್ಟರ್ ಅಂಟಿಸಿದವರನ್ನು ಬಂಧಿಸಬೇಕು. ಇದರ ಹಿಂದೆ ಇರುವವರನ್ನು ಪತ್ತೆ ಮಾಡಲು ಆಗ್ರಹಿಸಿ ದೂರು ಕೊಡಲಾಗಿದೆ ಎಂದು ತಿಳಿಸಿದರು. ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ ಎಂದರು.ಆ ನಾಯಕ ಯಾರೆಂದು ಎಲ್ಲರಿಗೂ ಗೊತ್ತಿದೆ. ಅದು ತನಿಖೆಯಿಂದ ಹೊರಕ್ಕೆ ಬರಲಿ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರ ಈ ವಿಚಾರದಲ್ಲಿ ಸೂಕ್ಷ್ಮತೆ ಕಳೆದುಕೊಂಡಿದೆಯೇ ಎಂದು ಪ್ರಶ್ನಿಸಿದರು.
ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ಮಾತನಾಡಿ, ಪೋಸ್ಟರ್ ಅಂಟಿಸಿದವರನ್ನು ಕೂಡಲೇ ಬಂಧಿಸಿದರೆ ಆ ಮೂಲಕ ಇದರ ಹಿಂದಿರುವ ನಾಯಕನ ವಿವರ ಲಭಿಸಲಿದೆ ಎಂದು ತಿಳಿಸಿದರು. ವಕೀಲರಾದ ದೇವರಾಜ್, ರಾಜೇಶ ಎ, ಹೇಮಂತ ಬಿ, ಮಂಜುನಾಥ ಸಿ, ವಿಶ್ವಾಸ್ ಅವರು ಮನವಿ ಸಲ್ಲಿಸುವ ನಿಯೋಗದಲ್ಲಿ ಇದ್ದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications