Get Updates
Get notified of breaking news, exclusive insights, and must-see stories!

ರಮೇಶ್ ಜಾರಕಿಹೊಳಿ ಅವರನ್ನ ಅವಮಾನಿಸಿದವರನ್ನು ಕೂಡಲೇ ಬಂಧಿಸಿ: ಎನ್.ರವಿಕುಮಾರ್ ಆಗ್ರಹ

ಬೆಂಗಳೂರು, ನವೆಂಬರ್‌ 02: ಬಿಜೆಪಿ ಮುಖಂಡ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಅವಮಾನ ಮಾಡುವ ಮತ್ತು ಅಗೌರವ ತೋರುವ ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದರು.

ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಸಂಬಂಧ ಇಂದು ನಗರದ ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಅವರು ಗೌರವಸ್ಥ ಕುಟುಂಬದಿಂದ ಬಂದಿದ್ದು, ಹಿಂದೆ ಸಚಿವ, ಶಾಸಕರಾಗಿ ಕೆಲಸ ಮಾಡಿದವರು. ಈ ಪೋಸ್ಟರ್ ಅಂಟಿಸುವ ಕಾರ್ಯದ ಹಿಂದೆ ಯಾರೋ ದೊಡ್ಡ ನಾಯಕರಿದ್ದಾರೆ ಎಂದು ಆರೋಪಿಸಿದರು.

Those Who Insulted Ramesh Jarakiholi Should Be Arrested Immediately Says N Ravikumar

ನಾಲ್ಕು ದಿನಗಳು ಕಳೆದರೂ ಪೋಸ್ಟರ್ ಅಂಟಿಸಿದವರನ್ನು ಬಂಧಿಸಿಲ್ಲ. ಸಿಸಿ ಕ್ಯಾಮೆರಾ, ತಂತ್ರಜ್ಞಾನ ಬಳಸಿ ಪೋಸ್ಟರ್ ಅಂಟಿಸಿದವರನ್ನು ಬಂಧಿಸಬೇಕು. ಇದರ ಹಿಂದೆ ಇರುವವರನ್ನು ಪತ್ತೆ ಮಾಡಲು ಆಗ್ರಹಿಸಿ ದೂರು ಕೊಡಲಾಗಿದೆ ಎಂದು ತಿಳಿಸಿದರು. ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ ಎಂದರು.ಆ ನಾಯಕ ಯಾರೆಂದು ಎಲ್ಲರಿಗೂ ಗೊತ್ತಿದೆ. ಅದು ತನಿಖೆಯಿಂದ ಹೊರಕ್ಕೆ ಬರಲಿ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರ ಈ ವಿಚಾರದಲ್ಲಿ ಸೂಕ್ಷ್ಮತೆ ಕಳೆದುಕೊಂಡಿದೆಯೇ ಎಂದು ಪ್ರಶ್ನಿಸಿದರು.

ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ಮಾತನಾಡಿ, ಪೋಸ್ಟರ್ ಅಂಟಿಸಿದವರನ್ನು ಕೂಡಲೇ ಬಂಧಿಸಿದರೆ ಆ ಮೂಲಕ ಇದರ ಹಿಂದಿರುವ ನಾಯಕನ ವಿವರ ಲಭಿಸಲಿದೆ ಎಂದು ತಿಳಿಸಿದರು. ವಕೀಲರಾದ ದೇವರಾಜ್, ರಾಜೇಶ ಎ, ಹೇಮಂತ ಬಿ, ಮಂಜುನಾಥ ಸಿ, ವಿಶ್ವಾಸ್ ಅವರು ಮನವಿ ಸಲ್ಲಿಸುವ ನಿಯೋಗದಲ್ಲಿ ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+