ಮಿ. ಕಟೀಲ್, ನಿಮ್ಮ ಊರಿನ 8 ಶಾಸಕರಲ್ಲಿ ಒಬ್ಬರಿಗೂ ಸಚಿವ ಸ್ಥಾನ ಕೊಡಿಸಲಾಗಲಿಲ್ಲವೇ?
ಬಿಜೆಪಿಗೆ ವಲಸೆ ಬಂದು ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಯಾವ ಜಿಲ್ಲೆಗಳಿಗೆ ಸಿಂಹಪಾಲು ಹೋಗಿದೆ ಎಂದರೆ, ಮೊದಲೆರಡು ಸ್ಥಾನ ಬೆಂಗಳೂರು (7) ಮತ್ತು ಬೆಳಗಾವಿಗೆ (4).
ಹಾಗಾಂತ, ಬೇರೆ ಜಿಲ್ಲೆಯ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಲ್ಲ ಎಂದಲ್ಲ. ಆದರೆ, ತೀವ್ರ ಲಾಬಿ ನಡೆಸಿ, ಪಕ್ಷಕ್ಕೆ ಮುಜುಗರತಂದೊಡ್ಡುವ ಕೆಲಸವನ್ನು ಮಾಡಿದವರಲ್ಲ(ಕೆಲವೊಂದು ಅಪವಾದ ಹೊರತು ಪಡಿಸಿ). ಅದರಲ್ಲೂ, ಪ್ರಮುಖವಾಗಿ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವವರು. ಸಂಘ ಪರಿವಾರದ ಜೊತೆ ಉತ್ತಮ ಒಡನಾಟ ಹೊಂದಿರುವ ಕಟೀಲ್, ದೆಹಲಿ ಮಟ್ಟದಲ್ಲಿ ಪ್ರಭಾವೀ ಮುಖಂಡರು ಬೇರೆ.
ಇವರ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಅಸೆಂಬ್ಲಿ ಕ್ಷೇತ್ರಗಳು ಎಂಟು. ಅದರಲ್ಲಿ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಗೆದ್ದದ್ದು ಏಳು ಕ್ಷೇತ್ರವನ್ನು. ಕಾಂಗ್ರೆಸ್ಸಿನ ಯು.ಟಿ.ಖಾದರ್ ಬಿಟ್ಟರೆ, ಮಿಕ್ಕೆಲ್ಲಾ ಕಡೆ ಕಾಂಗ್ರೆಸ್ ಸೋಲುಂಡಿತ್ತು.

ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅಸೆಂಬ್ಲಿ ಕ್ಷೇತ್ರಗಳು ಐದು
ಇನ್ನು ಪಕ್ಕದ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅಸೆಂಬ್ಲಿ ಕ್ಷೇತ್ರಗಳು ಐದು. ಬಿಜೆಪಿ ಇಲ್ಲಿ ಕಳೆದ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧನೆಗೈದಿತ್ತು. ಇದರಲ್ಲಿ ಕಾರ್ಕಳದಿಂದ ಸುನಿಲ್ ಕುಮಾರ್, ಕುಂದಾಪುರದಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಹಲವು ಬಾರಿ ಚುನಾವಣೆಯನ್ನು ಗೆದ್ದವರು. ಆದರೆ, ಪರಿಷತ್ ಸದಸ್ಯರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಬಿಟ್ಟರೆ, ಜಿಲ್ಲೆಯ ಯಾವ ಶಾಸಕರಿಗೂ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ.

ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿ
ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿನ ಸುಳ್ಯ ಅಸೆಂಬ್ಲಿ ಕ್ಷೇತ್ರದಿಂದ ಬಿಜೆಪಿಯ ಎಸ್. ಅಂಗಾರ ಸತತವಾಗಿ ಚುನಾವಣೆಯಲ್ಲಿ ಗೆದ್ದು ಬರುತ್ತಿದ್ದಾರೆ. ಮೀಸಲು ಕ್ಷೇತ್ರವಾದ ಇಲ್ಲಿ, ದಶಕಗಳಿಂದ ಮತದಾರ ಬಿಜೆಪಿ ಮೇಲೆ ತನ್ನ ನಿಷ್ಠೆಯನ್ನು ತೋರುತ್ತಿದ್ದಾನೆ. ಅರ್ಹತೆ ಆಧಾರದಲ್ಲಿ ಅಂಗಾರ ಅವರಿಗೆ ಸಚಿವ ಸ್ಥಾನ ದಕ್ಕಬೇಕಾಗಿದ್ದರೂ, ಅದೃಷ್ಟ ಅವರಿಗೆ ಕೂಡಿಬಂದಿಲ್ಲ.

ಸಚಿವ ಸ್ಥಾನಕ್ಕೆ ಲಾಬಿ ನಡೆಸುವವನಲ್ಲ, ಅಂಗಾರ
"ನಾನು ಸಚಿವ ಸ್ಥಾನಕ್ಕೆ ಲಾಬಿ ನಡೆಸುವವನಲ್ಲ. ನನ್ನ ಕೆಲಸವನ್ನು ಗುರುತಿಸಿ ಆ ಜವಾಬ್ದಾರಿಯನ್ನು ನೀಡಿದರೆ, ಅದನ್ನು ನಿಭಾಯಿಸುತ್ತೇನೆ. ಸಚಿವ ಸ್ಥಾನ ಸಿಗಲಿಲ್ಲವೆಂದು, ಪಕ್ಷ ವಿರೋಧಿ ಚಟುವಟಿಕೆ ನಡೆಸುವವನು ನಾನಲ್ಲ" ಇದು ಶಾಸಕ ಅಂಗಾರ ನೀಡಿದ್ದ ಪಕ್ಷದ ಮೇಲಿನ ನಿಯತ್ತಿನ ಹೇಳಿಕೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆಗೆ ಉತ್ತಮ ಬಾಂಧವ್ಯ
ನಳಿನ್ ಕಟೀಲ್ ಕೂಡಾ ಸತತವಾಗಿ ಸಂಸತ್ತಿಗೆ ಆಯ್ಕೆಯಾಗುತ್ತಿರುವವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆಗೆ ಉತ್ತಮ ಬಾಂಧವ್ಯವನ್ನು ಹೊಂದಿರುವವರು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರ (ಸಂಘಟನೆ) ಜೊತೆಗೂ, ಒಡನಾಟವನ್ನು ಹೊಂದಿರುವವರು. ಆದರೂ, ದಕ್ಷಿಣಕನ್ನಡ ಜಿಲ್ಲೆಯ ಯಾರಿಗೂ ಸಚಿವ ಸ್ಥಾನ ಒಲಿಯಲಿಲ್ಲ.

ಜಿಲ್ಲೆಯ ಯಾವ ಶಾಸಕರೂ ಅದಕ್ಕೆ ಮುಂದಾಗುವುದು ಸಂಶಯ
ಜಿಲ್ಲೆಯ ಏಳು ಬಿಜೆಪಿ ಶಾಸಕರ ಪೈಕಿ, ಹೆಚ್ಚಿನವರು ಮೊದಲ ಬಾರಿಗೆ ಆಯ್ಕೆಯಾದವರು. ಆದರೂ, ಅನುಭವಿಯಾಗಿರುವ ಅಂಗಾರ ಅವರಿಗೆ ಸಚಿವ ಸ್ಥಾನಕ್ಕಾಗಿ ಕಟೀಲ್ ಪ್ರಯತ್ನ ನಡೆಸಿದ್ದಾರೋ ಇಲ್ಲವೋ ಗೊತ್ತಿಲ್ಲ. ಒಟ್ಟಿನಲ್ಲಿ, ಸಚಿವ ಸ್ಥಾನಕ್ಕಾಗಿ ಬಹಿರಂಗವಾಗಿ ಆಕ್ರೋಶ ಹೊರಹಾಕಿದರೆನೇ ಸ್ಥಾನ ಸಿಗುವುದೆಂದಾರೆ, ಜಿಲ್ಲೆಯ ಯಾವ ಶಾಸಕರೂ ಅದಕ್ಕೆ ಮುಂದಾಗುವುದು ಡೌಟು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications