Lok Sabha Election 2024 Result: 3 ವಿಧಾನಸಭೆ, 1 ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ
ಬೆಂಗಳೂರು, ಜೂನ್ 05: ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹ ರಾಜ್ಯದ 28 ಕ್ಷೇತ್ರಗಳಲ್ಲಿ ಪಕ್ಷ ನಿರೀಕ್ಷೆ ಮಾಡಿದಷ್ಟು ಸೀಟುಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿದೆ.
ಈ ಬಾರಿಯ ಲೋಕಸಭೆ ಚುನಾವಣೆಗೆ ಕರ್ನಾಟಕ ವಿಧಾನ ಸಭೆಯ ಶಾಸಕರು, ವಿಧಾನ ಪರಿಷತ್ನ ಸದಸ್ಯರು ಸಹ ಸ್ಪರ್ಧೆ ಮಾಡಿದ್ದರು. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಶಾಸಕರನ್ನು ಕಣಕ್ಕಿಳಿಸಿದ್ದವು. ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ (ಹಾವೇರಿ-ಗದಗ), ಜೆಡಿಎಸ್ನ ಎಚ್. ಡಿ. ಕುಮಾರಸ್ವಾಮಿ (ಮಂಡ್ಯ), ಇ. ತುಕಾರಾಮ್ (ಬಳ್ಳಾರಿ), ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ (ವಿಧಾನ ಪರಿಷತ್) ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಆದ್ದರಿಂದ ಮೂರು ವಿಧಾನಸಭಾ ಸದಸ್ಯರು, ಒಬ್ಬರು ವಿಧಾನ ಪರಿಷತ್ ಸದಸ್ಯರು ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ನ ಒಬ್ಬರು ಶಾಸಕರು, ಬಿಜೆಪಿಯ ಒಬ್ಬರು ವಿಧಾನ ಪರಿಷತ್ ಸದಸ್ಯರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ವಿಧಾನಸಭೆ ಸದಸ್ಯರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರೆ ಲೋಕಸಭೆ, ವಿಧಾನಸಭೆ ಯಾವುದಾದರೂ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆದ್ದರಿಂದ ಈಗ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮೂವರು ಶಾಸಕರು, ಒಬ್ಬರು ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡಬೇಕು. ಅವರ ಸ್ಥಾನಕ್ಕೆ ಉಪ ಚುನಾವಣೆ ನಡೆಯಬೇಕಿದೆ.
ಯಾರು-ಯಾರು ಗೆಲುವು?: ಲೋಕಸಭೆ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಕ್ಷೇತ್ರದಲ್ಲಿ 705538 ಮತಗಳನ್ನು ಪಡೆದು ಕಾಂಗ್ರೆಸ್ನ ಆನಂದಸ್ವಾಮಿ ಗಡ್ಡದೇವರಮಠ (662025 ಮತ) ವಿರುದ್ಧ ಗೆಲುವು ಸಾಧಿಸಿದ್ದಾರೆ. ಈಗ ಅವರು ಲೋಕಸಭೆ ಸದಸ್ಯರಾಗಲಿದ್ದು, ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ.
ಚನ್ನಪಟ್ಟಣ ಕ್ಷೇತ್ರದ ಹಾಲಿ ಶಾಸಕ ಎಚ್. ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ ಅವರು 851881 ಮತಗಳನ್ನು ಪಡೆದು ಕಾಂಗ್ರೆಸ್ನ ಸ್ಟಾರ್ ಚಂದ್ರು ವಿರುದ್ಧ (567261 ಮತ) ಗೆಲುವು ಸಾಧಿಸಿದ್ದಾರೆ. ಈಗ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ.
ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಇ. ತುಕಾರಾಮ್ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಅವರು 730845 ಮತಗಳನ್ನು ಪಡೆದು, ಬಿಜೆಪಿಯ ಬಿ. ಶ್ರೀರಾಮುಲು ವಿರುದ್ಧ (631853 ಮತ) ಗೆಲುವು ಸಾಧಿಸಿದ್ದಾರೆ. ಈಗ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ, ಬಳಿಕ ಉಪ ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯರಾ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ ಅವರು 732234 ಮತಗಳನ್ನು ಪಡೆದು ಕಾಂಗ್ರೆಸ್ನ ಜಯಪ್ರಕಾಶ ಹೆಗಡೆ (473059 ಮತ) ವಿರುದ್ಧ ಗೆಲುವು ಸಾಧಿಸಿದ್ದಾರೆ. ಈಗ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದ್ದು, ಉಪ ಚುನಾವಣೆ ನಡೆಯಲಿದೆ.
ನಿಯಮದ ಪ್ರಕಾರ ಶಾಸಕರು, ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ 6 ತಿಂಗಳಿನಲ್ಲಿ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications