Get Updates
Get notified of breaking news, exclusive insights, and must-see stories!

ಕರ್ನಾಟಕದ ಮೂವರು ಮಾಜಿ ಸಿಎಂಗಳು ಸಂಸತ್‌ ಪ್ರವೇಶ; ಯಾರಿಗೆ ಸಿಗಲಿದೆ ಮಂತ್ರಿ ಭಾಗ್ಯ?

ಬೆಂಗಳೂರು, ಜೂನ್‌ 05: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್‌ 2024 ರ ಲೋಕಸಭಾ ಚುನಾವಣೆಯಲ್ಲಿ ದೋಸ್ತಿ ಮಾಡಿಕೊಂಡಿತ್ತು. ಆಡಳಿತರೂಢ ಕಾಂಗ್ರೆಸ್‌ ಸರ್ಕಾರ ರಚಿಸಿರುವ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಅವರಿಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಹಲವು ಸಮರ್ಥ ನಾಯಕರನ್ನ ಈ ಬಾರಿ ಲೋಕಸಭಾ ಚುನಾವಣಾ ಕಣಕ್ಕಿಳಿಸಿತ್ತು. ಅದರಂತೆ ಈ ಬಾರಿ ಘಟಾನುಘಟಿ ಮೈತ್ರಿ ನಾಯಕರು ಗೆಲುವು ಸಾಧಿಸಿದ್ದಾರೆ.

ಹೌದು, ಬಿಜೆಪಿ ಹೈಕಮಾಂಡ್‌ ಅಳೆದು ತೂಗಿ ಗೆಲ್ಲುವ ಕುದುರೆಯನ್ನ ಕಣಕ್ಕಿಳಿಸಿದ್ದು, ಈ ಬಾರಿ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್‌ ನೀಡುವ ಮೂಲಕ ಗೆಲ್ಲುವ ತಂತ್ರಗಾರಿಕೆಯನ್ನ ಹಾಕಿಕೊಂಡಿತ್ತು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಅವರನ್ನ ಕಣಕ್ಕಿಳಿಸಿತ್ತು. ಅದರಂತೆ ಈ ಮೂವರು ಮಾಜಿ ಸಿಎಂಗಳು ಭರ್ಜರಿ ಗೆಲುವು ಸಾಧಿಸಿ, ಸಂಸತ್‌ ಪ್ರವೇಶಿಸುತ್ತಿದ್ದಾರೆ.

Three former CMs of Karnataka jumped from state politics to the centre

ಈ ಬಾರಿ ಬಿಜೆಪಿಗೆ ಬೆಳಗಾವಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರಗಳು ಪ್ರತಿಷ್ಠೆಯಾದ್ರೆ ಇತ್ತ ಮಂಡ್ಯ ಲೋಕಸಭಾ ಕ್ಷೇತ್ರದ ದಳಪತಿಗಳಿಗೆ ಅಸ್ತಿತ್ವದ ಪ್ರಶ್ನೆಯಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು ಕಂಡ ದಳಪತಿಗಳು ಈ ಬಾರಿ ಗೆಲ್ಲಲೇ ಬೇಕು ಎಂದು ಪಣ ತೊಟ್ಟು ಬಿಜೆಪಿ ಹೈಕಮಾಂಡ್‌ ಮುಂದೆ ಟಿಕೆಟ್‌ ಗೆ ಬೇಡಿಕೆ ಇಟ್ಟಿತ್ತು. ಮೊದಲ ಹಂತದಲ್ಲಿ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದ ದಳಪತಿಗಳಿಗೆ ಮಂಡ್ಯ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಹಲವು ತಂತ್ರಗಾರಿಕೆಯನ್ನ ನಡೆಸಿ ಕೊನೆಗೆ ಸಕ್ಕರೆ ನಾಡು ಮಂಡ್ಯ ಜನತೆಯ ಮನವನ್ನ ಈ ಬಾರಿ ದಳಪತಿಗಳು ಗಳಿಸಿದ್ದಾರೆ.

ಮೊದಲಿನಿಂದಲೂ ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯ ಕಣವಾಗಿತ್ತು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸದ್ಯ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ, ಮಂಡ್ಯದಲ್ಲಿ ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಮಂಗಳ ಅಂಗಡಿ ಅವರು ಈ ಬಾರಿ ಟಿಕೆಟ್‌ಗಾಗಿ ಬಿಜೆಪಿ ಹೈಕಮಾಂಡ್‌ ಬಳಿ ಲಾಬಿ ನಡೆಸಿದ್ರು. ಅಲ್ಲದೇ ಹಲವು ಸಮೀಕ್ಷೆಯನ್ನ ನಡೆಸಿರುವ ಬಿಜೆಪಿ ಈ ಬಾರಿ ಮಂಗಳ ಅಂಗಡಿ ಗೆಲುವು ಅನುಮಾನ ಎನ್ನಲಾಗಿತ್ತು. ಹೀಗಾಗಿ ಮಂಗಳ ಅಂಗಡಿಗೆ ಟಿಕೆಟ್‌ ನೀಡಿದ್ರೆ ಬೆಳಗಾವಿ ಕಾಂಗ್ರೆಸ್‌ ವಶವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಕಣಕ್ಕಿಳಿಸಿದ್ದು, ಹಲವು ಸವಾಲುಗಳ ಮಧ್ಯ ಜಗದೀಶ್‌ ಶೆಟ್ಟರ್‌ ಅವರು ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ ಸ್ಪರ್ಧಿಸಿ 68,792 ಮತಗಳ ಅಂತರದಲ್ಲಿ ಗೆದ್ದಿದ್ದು, ಸಂಸತ್‌ ಪ್ರದೇಶಿಸುತ್ತಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿಗ್ಗಾವಿ ಶಾಸಕ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 41,998 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೊಮ್ಮಾಯಿ 7,02,189 ಮತಗಳನ್ನು ಪಡೆದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ (6,60,191) ಅವರನ್ನು ಮಣಿಸಿದ್ದಾರೆ.

ಯಾರಿಗೆ ಮಂತ್ರಿ ಭಾಗ್ಯ?

ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಹೆಚ್‌ ಡಿ ಕುಮಾರಸ್ವಾಮಿ, ಜಗದೀಶ್‌ ಶೆಟ್ಟರ್‌ ಹಾಗೂ ಬಸವರಾಜ ಬೊಮ್ಮಾಯಿ ಅವರು ಸಂಸತ್‌ ಪ್ರವೇಶಿಸುತ್ತಿದ್ದಾರೆ. ಈ ಹಿಂದೆ 28 ಲೋಕಸಭಾ ಕ್ಷೇತ್ರಗಳ ಹಂಚಿಕೆಯ ಸಂದರ್ಭದಲ್ಲೇ ಕುಮಾರಸ್ವಾಮಿ ಜೊತೆಗೆ ಬಿಜೆಪಿ ಹೈಕಮಾಂಡ್‌ ನಾಯಕರು ಮುಂದೆ ಎನ್‌ ಡಿ ಎ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ನಿಮಗೆ ಮಂತ್ರಿ ಸ್ಥಾನವನ್ನ ನೀಡುವ ಭರವಸೆಯನ್ನ ಬಿಜೆಪಿ ವರಿಷ್ಠರು ನೀಡಿದ್ದರು ಎನ್ನಲಾಗಿತ್ತು. ಅದರಂತೆ ಈ ಮೂವರು ಮಾಜಿ ಮುಖ್ಯಮಂತ್ರಿಗಳಲ್ಲಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಮಂತ್ರಿ ಭಾಗ್ಯದ ಪಟ್ಟ ಸಿಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+