ಬೆಂಗಳೂರಿನ ಆದಿತ್ಯ ಕಾಮೆಡ್-ಕೆ ಟಾಪರ್!
ಬೆಂಗಳೂರು, ಮೇ 28: ಕಾಮೆಡ್-ಕೆ ನಡೆಸಿದ್ದ 2018ನೇ ಸಾಲಿನ ಯುಜಿಸಿಇಟಿ ಫಲಿತಾಂಶವನ್ನು ಭಾನುವಾರ ಬಿಡುಗಡೆ ಮಾಡಿದೆ. 180 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ 168 ಅಂಕ ಪಡೆಯುವ ಮೂಲಕ ಬೆಂಗಳೂರಿನ ದುರ್ಬಾ ಆದಿತ್ಯ ಮೊದಲ ಸ್ಥಾನ ಪಡೆದಿದ್ದಾರೆ.
ಹೆಚ್ಚಿನ ಅಂಕ ಗಳಿಸಿದ ಟಾಪ್ 10 ರಲ್ಲಿ ಟಾಪ್ 1,5 ಮತ್ತು 6 ನೇ ಸ್ಥಾನವನ್ನು ರಾಜ್ಯದ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. 165 ಅಂಕ ಪಡೆದಿರುವ ನಿಖಿಲ್ ಎಸ್ ಪೈ ಮತ್ತು ಪ್ರತೀಕ್ ಸಂಜಯ್ ಭಿರುದ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನ ಪಡೆದಿದ್ದಾರೆ.
ಮೊದಲ 100 ಅಂಕಗಳಿಗೆ ರ್ಯಾಂಕ್ ಗಳ ಪೈಕಿ 42, ಮೊದಲ ಸಾವಿರ ರ್ಯಾಂಕ್ನಲ್ಲಿ 284 ವಿದ್ಯಾರ್ಥಿಗಳು ಕರ್ನಾಟಕದವರಾಗಿದ್ದಾರೆ. ಉಳಿದ 716 ರ್ಯಾಂಕ್ ಗಳು ವಿವಿಧ ರಾಜ್ಯದ ವಿದ್ಯಾಥಿಗಳ ಪಾಲಾಗಿದೆ.

ಮೇ 13 ರಂದು ದೇಶಾದ್ಯಂತ 137 ನಗರಗಳ 291 ಪರೀಕ್ಷಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗಿತ್ತು. ಒಟ್ಟಾರೆ 76,414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ರಾಜ್ಯದ 21,899 ಹಾಗೂ ಹೊರ ರಾಜ್ಯದ 40,417 ವಿದ್ಯಾರ್ಥಿಗಳು ಸೇರಿ 62,316 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಮೇ 17ರಂದು ಪ್ರಕಟಿಸಿದ್ದ ತಾತ್ಕಾಲಿಕ ಉತ್ತರಗಳಿಗೆ 77 ವಿದ್ಯಾರ್ಥಿಗಳು ಆಕ್ಷೇಪಣೆಯನ್ನು ಸಲ್ಲಿಸಿದ್ದರು. ಆಕ್ಷೇಪಣೆಗಳಿಗೆ ತಜ್ಞರ ಸಲಹಾ ಸಮಿತಿ ಸ್ಪಷ್ಟನೆ ನೀಡಿ, ಮೇ 25ರಂದು ಅಂತಿಮ ಉತ್ತರಗಳನ್ನು ಪ್ರಕಟಿಸಿದೆ. ಭಾನುವಾರ ರ್ಯಾಂಕ್ ಪಟ್ಟಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ರ್ಯಾಂಕ್ ಕಾರ್ಡ್ಗಾಗಿ www.comedk.orgಗೆ ಭೇಟಿ ನೀಡುವಂತೆ ತಿಳಿಸಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications