ಶಾಲಿನಿ ರಜನೀಶ್ ಸೇರಿ ಮೂವರು ಐಎಎಸ್ ಅಧಿಕಾರಿಗಳಿಗೆ ಬಡ್ತಿ
ಬೆಂಗಳೂರು, ಜನವರಿ 09 : ಡಾ.ಶಾಲಿನಿ ರಜನೀಶ್ ಸೇರಿದಂತೆ ಮೂವರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಸರ್ಕಾರ ಬಡ್ತಿ ನೀಡಿದೆ. ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ.
ಕರ್ನಾಟಕ ಸರ್ಕಾರ ಬುಧವಾರ ಈ ಕುರಿತು ಆದೇಶ ಹೊರಡಿಸಿದೆ. ಮೂವರು ಅಧಿಕಾರಿಗಳಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ. ಪ್ರಸ್ತುತ ಕಾರ್ಯ ನಿರ್ವಹಣೆ ಮಾಡುತ್ತಿರುವ ಇಲಾಖೆಗಳಲ್ಲೇ ಮುಂದುವರೆಸಲಾಗಿದೆ.
6 ತಿಂಗಳಲ್ಲಿ 13 ಲಕ್ಷ ಟನ್ ಕಸ ಸ್ವಚ್ಛಗೊಳಿಸಿದ ಐಎಎಸ್ ಅಧಿಕಾರಿ
ನಿಯೋಜನೆಯ ಮೇಲೆ ಕೇಂದ್ರ ಸೇವೆಯಲ್ಲಿರುವ ಹಣಕಾಸು ಸಚಿವಾಲಯದ ಕಂದಾಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಕುಮಾರ್ ಝಾ ಅವರಿಗೆ ಅಪೆಕ್ಸ್ ಸ್ಕೇಲ್ಗೆ ಬಡ್ತಿ ನೀಡಲಾಗಿದೆ.
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಹೆಸರಿನಲ್ಲಿ ಚಿಕ್ಕಮಗಳೂರಿನಲ್ಲಿ ಗ್ರಾಮವೊಂದಿದೆ!
ಬಡ್ತಿ ಪಡೆದ ಅಧಿಕಾರಿಗಳು
*
ರಾಕೇಶ್
ಸಿಂಗ್
(ಪ್ರಧಾನ
ಕಾರ್ಯದರ್ಶಿ
ಜಲಸಂಪನ್ಮೂಲ
ಇಲಾಖೆ)
*
ಜಾವೇದ್
ಅಖ್ತರ್
(ಪ್ರಧಾನ
ಕಾರ್ಯದರ್ಶಿ
ಆರೋಗ್ಯ
ಮತ್ತು
ಕುಟುಂಬ
ಕಲ್ಯಾಣ
ಇಲಾಖೆ)
*
ಡಾ.
ಶಾಲಿನಿ
ರಜನೀಶ್
(ಪ್ರಧಾನ
ಕಾರ್ಯದರ್ಶಿ
ಯೋಜನೆ
ಹಾಗೂ
ಕಾರ್ಯಕ್ರಮ
ನಿರ್ವಹಣೆ
ಇಲಾಖೆ)
ಕರ್ನಾಟಕದ ಮೊತ್ತ ಮೊದಲ ಮಹಿಳಾ ಡಿಜಿ-ಐಜಿಪಿ ನೀಲಮಣಿ ರಾಜು ಪರಿಚಯ
ಡಿಜಿ&ಐಜಿಪಿ ಯಾರು? : ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು ಅವರು ಜನವರಿ 31ರಂದು ನಿವೃತ್ತರಾಗಲಿದ್ದಾರೆ. ಕರ್ನಾಟಕದ ನೂತನ ಡಿಜಿ&ಐಜಿಪಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಸೇವಾ ಹಿರಿತನದ ಆಧಾರದ ಮೇಲೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ. ಎಂ. ಪ್ರಸಾದ್, ಸಿಐಡಿ ಡಿಜಿಪಿ ಪ್ರವೀಣ್ ಸೂದ್, ನೇಮಕಾತಿ ವಿಭಾಗದ ಡಿಜಿಪಿ ಪಿ. ಕೆ.ಗರ್ಗ್ ಹೆಸರುಗಳು ಕೇಳಿ ಬರುತ್ತಿವೆ. ಮೂವರಲ್ಲಿ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆ ಯಾರಿಗೆ?.