Get Updates
Get notified of breaking news, exclusive insights, and must-see stories!

Lok Sabha Election: ಸತತ ಎರಡನೇ ಬಾರಿಗೆ ದೇವೇಗೌಡ ಕುಟುಂಬದಿಂದ ಮೂವರು ಲೋಕಸಭಾ ಚುನಾವಣಾ ಕಣಕ್ಕೆ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ್‌ರ ಕುಟುಂಬದಿಂದ ಸತತ ಎರಡನೇ ಬಾರಿ ಮೂರು ಜನ ಲೋಕಸಭಾ ಚುನಾವಣೆ ಸ್ಪರ್ಧಿಸುತ್ತಿದ್ದರೆ.

ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್‌ ಪ್ರಾಭಲ್ಯ ಮೊದಲಿನಿಂದಲೂ ಇದೆ. ಈ ಭಾಗದಲ್ಲಿ ಮತ್ತೊಮ್ಮೆ ಮೂವರು ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಇವರೆಲ್ಲಾ ದೇವೇಗೌಡ್ ಕುಟುಂಬಕ್ಕೆ ಸೇರಿದವರು ಎಂಬುದೇ ವಿಶೇಷ.. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಪಕ್ಷವೇ ಈ ಬಾರಿ ಜೆಡಿಎಸ್‌ಗೆ ಎದುರಾಳಿ. 2019ರಲ್ಲಿ ಎದುರಾಳಿಯಾಗಿದ್ದ ಬಿಜೆಪಿ ಇಂದು ಮೈತ್ರಿ ಪಕ್ಷವಾಗಿದೆ.

Three Members of Deve Gowda Family Contesting Second Consecutive Lok Sabha Polls in Karnataka

ಮೂವರು ಕಣಕ್ಕೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಿಂತು ಸೋತಿದ್ದ ನಿಖಿಲ್‌ ಕುಮಾರಸ್ವಾಮಿ ಬದಲಿಗೆ, ಈ ಬಾರಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಇನ್ನು ಹಾಸನದ ಹಾಲಿ ಸಂಸದರು ಆಗಿರುವ ಎಚ್‌ಡಿ ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ, ಎರಡನೇ ಬಾರಿಗೆ ಅಖಾಡಕ್ಕೆ ಇಳಿಯಲಿದ್ದಾರೆ. ಬೆಂಗಳೂರು ಗ್ರಾಮಂತರದಿಂದ ದೇವೇಗೌಡರ ಅಳಿಯ ಡಾ.ಸಿ.ಎನ್‌. ಮಂಜುನಾಥ್‌ ಬಿಜೆಪಿ ಅಭ್ಯರ್ಥಿಯಾಗಿ ಕಣದಲಿದ್ದಾರೆ.

ಇದೇ ಮೊದಲ ಬಾರಿಗೆ ಎಚ್‌ಡಿ ದೇವೇಗೌಡರ ಅಳಿಯ ಡಾ.ಸಿಎನ್ ಮಂಜುನಾಥ್‌ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಇವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್‌ಗೆ ಸವಾಲು ಎಸೆಯಲಿದ್ದಾರೆ. ಇವರಿಬ್ಬರ ನಡುವಿನ ಫೈಟ್ ಭಾರೀ ಕುತೂಹಲ ಮುಡಿಸಿದೆ.

ಹಾಸನದಲ್ಲಿ ಗೆಲುವು

ಹಾಸನದಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾಂಗ್ರೆಸ್‌ 31 ವರ್ಷದ ಶ್ರೇಯಸ್‌ ಎಂ ಪಾಟಿಲ್‌ರನ್ನು ಕಣಕ್ಕೆ ಇಳಿಸಿದೆ. ಇವರು ಮಾಜಿ ಸಂಸದ ಜಿ ಪುಟ್ಟಸ್ವಾಮಿ ಗೌಡ ಮೊಮ್ಮಗ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶ್ರೇಯಸ್‌ ಹೊಳೆನರಸಿಪುರದಿಂದ ಕಣಕ್ಕೆ ಇಳಿದಿದ್ದರು. ಆದರೆ ಜೆಡಿಎಸ್‌ನ ಎಚ್‌ಡಿ ರೇವಣ್ಣ ವಿರುದ್ಧ 3152 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈಗ ಇವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಗಿದ್ದಾರೆ.

ಮಂಡ್ಯ ವಶಕ್ಕೆ ಪಡೆಯಲು ಪ್ಲ್ಯಾನ್?

ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ನ ಭದ್ರ ಕೋಟೆ ಎಂದೇ ಹೇಳಲಾಗುತ್ತಿತ್ತು. ಆದರೆ ಕಳೆದ ಕೆಲವು ಚುನಾವಣೆಗಳಲ್ಲಿ ಬಂದ ಫಲಿತಾಂಶಗಳು ಇದಕ್ಕೆ ವಿರುದ್ಧವಾಗಿವೆ. ಒಕ್ಕಲಿಗರು ಪ್ರಾಭಲ್ಯ ಹೊಂದಿರುವ ಮಂಡ್ಯದಲ್ಲಿ 2019ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಳರಲ್ಲಿ ಕೇವಲ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿದೆ. ಮತ್ತೆ ಈ ಕ್ಷೇತ್ರದಲ್ಲಿ ತನ್ನ ಪಕ್ಷದ ಬಾವುಟ ಹಾರಿಸಲು ಜೆಡಿಎಸ್‌ ಪ್ಲ್ಯಾನ್‌ ಮಾಡಿಕೊಂಡಿದೆ.

Three Members of Deve Gowda Family Contesting Second Consecutive Lok Sabha Polls in Karnataka

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌, ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಈ ಕ್ಷೇತ್ರದಲ್ಲಿ ಈ ಬಾರಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಈ ಕ್ಷೇತ್ರವನ್ನು ಗೆದ್ದು ಮಂಡ್ಯದಲ್ಲಿ ಬಿಗಿ ಹಿಡಿತ ಸಾಧಿಸುವ ಆಸೆ ಜೆಡಿಎಸ್‌ನ್ನದಾಗಿದೆ.

ಕೋಲಾರದಲ್ಲಿ ಭಾರೀ ಫೈಟ್‌

ಕೋಲಾರ ಸಹ ಜೆಡಿಎಸ್‌ ತೆಕ್ಕೆಗೆ ಬಿದ್ದಿದ್ದು, ಈ ಕ್ಷೇತ್ರದಲ್ಲಿ ಎಂ.ಮಲ್ಲೇಶ್‌ ಬಾಬು ಅವರು ಕಣಕ್ಕೆ ಇಳಿಯಲಿದ್ದಾರೆ. ಇವರು 2023 ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ನಿರಾಸೆ ಅನುಭವಿಸಿದ್ದರು. ಎಂ.ಮಲ್ಲೇಶ್‌ 2023ರ ಚುನಾವಣೆಯಲ್ಲಿ ಒಟ್ಟು 72581 ಮತಗಳನ್ನು ಪಡೆದು ಸೋಲು ಕಂಡಿದ್ದರು. ಶೇಕಡಾವಾರು ಬಿದ್ದ ಮತಗಳನ್ನು ನೋಡಿದಾಗ ಇವರಿಗೆ ಹಾಗೂ ಜಯ ಸಾಧಿಸಿದ ಅಭ್ಯರ್ಥಿಗೆ ಶೇಕಾಡ ಮೂರರಷ್ಟು ಕಡಿಮೆ ಕಂಡು ಬಂದಿತ್ತು. ಈ ಬಾರಿ ಎಂ.ಮಲ್ಲೇಶ್‌ ಬಾಬು ಅವರು ಕಾಂಗ್ರೆಸ್‌ನ ಕೆ.ವಿ ಗೌತಮ್‌ ಅವರ ಸವಾಲು ಎದುರಿಸಲಿದ್ದಾರೆ.

Three Members of Deve Gowda Family Contesting Second Consecutive Lok Sabha Polls in Karnataka

ಕಳೆದ ಬಾರಿಯೂ ದೇವೇಗೌಡ ಕುಟುಂಬದ ಮೂವರು ಲೋಕಸಭಾ ಚುನವಾಣೆಯ ಅಖಾಡದಲ್ಲಿದ್ದರು. ತುಮುಕೂರಿನಿಂದ ಮಾಜಿ ಪ್ರಧಾನಿ ದೇವೇಗೌಡ, ಬಿಜೆಪಿ ಅಭ್ಯರ್ಥಿಯ ವಿರುದ್ಧ ಸೋಲು ಕಂಡಿದ್ದರು. ಇನ್ನು ಸುಮಲತಾ ಅಂಬರೀಶ್‌ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಘಾತ ಅನುಭವಿಸಿದ್ದರು. ಕಳೆದ ಬಾರಿ ಜೆಡಿಎಸ್‌ ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣ ಗೆಲುವು ಸಾಧಿಸಿದ್ದರು. ಈ ಬಾರಿ ಈ ಸಂಖ್ಯೆ ಎಷ್ಟಕ್ಕೆ ಏರುತ್ತದೆ ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+