Karnataka Election: ಮೂರರಿಂದ ನಾಲ್ಕು ಲಕ್ಷ ಮತದಾರರು ಇರುವ ರಾಜ್ಯದ ನಾಲ್ಕು ಕ್ಷೇತ್ರಗಳು
ಬೆಂಗಳೂರು, ಮೇ 09: ಕರ್ನಾಟಕದಲ್ಲಿ ಚುನಾವಣೆ ಕಾವು ಹೆಚ್ಚಾಗಿದ್ದು, ಬುಧವಾರ ಮೇ 10ರಂದು ನಡೆಯಲಿರುವ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದ ಬೆಂಗಳೂರು ವ್ಯಾಪ್ತಿಯ ಈ ನಾಲ್ಕು ಕ್ಷೇತ್ರಗಳಲ್ಲಿ ಮೂರರಿಂದ ನಾಲ್ಕು ಲಕ್ಷ ಮತದಾರರು ಇದ್ದಾರೆ. ಹಾಗಾದರೆ ಆ ನಾಲ್ಕು ಕ್ಷೇತ್ರಗಳು ಯಾವವು?. ಅಲ್ಲಿ ಎಷ್ಟು ಜನ ಮತದಾರರಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಬೆಂಗಳೂರು ನಗರ ವ್ಯಾಪ್ತಿಯೊಂದರಲ್ಲೇ ವ್ಯಾಪ್ತಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ವಿಜಯನಗರ ವಿಧಾನಸಭಾ ಕ್ಷೇತ್ರ, ಯಲಹಂಕ, ಸರ್ವಜ್ಞನಗರ ಮತ್ತು ಆನೇಕಲ್ ಕ್ಷೇತ್ರದಲ್ಲಿ ಮಹಿಳೆ, ಪುರುಷರು ಮತ್ತು ಇತರೆ ಸೇರಿ ಮೂರರಿಂದ ನಾಲ್ಕು ಲಕ್ಷ ಮತದಾರರು ಇದ್ದಾರೆ.

ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 3,74,036 ಮತದಾರರು ಇದ್ದಾರೆ. ಇದರಲ್ಲಿ ಪುರಷರು 1,92,854 ಮತದಾರರು, 1,81, 133 ಮಂದಿ ಮಹಿಳಾ ಮತದಾರರು ಹಾಗೂ 49 ಜನ ಇತರೆ ಮಾತದಾರರು ಇದ್ದಾರೆ ಎಂದು ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.
ಸರ್ವಜ್ಞನಗರ ಮತದಾರರ ಸಂಖ್ಯೆ
ಇನ್ನೂ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಪುರುಷರು 1,69,700 ಮತ್ತು ಮಹಿಳಾ ಮತದಾರರು 1,64,734 ಹಾಗೂ 39 ಮಂದಿ ಇತರೆ ಮತದಾರರು ಸೇರಿದಂತೆ ಕ್ಷೇತ್ರದಲ್ಲಿ ಒಟ್ಟು 3,34,473 ಮತದಾರರು ಇದ್ದಾರೆ.
ಅದೇ ರೀತಿ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪುರಷ ಮತದಾರರು ಸಂಖ್ಯೆ 1,65,155, ಮಹಿಳಾ ಮತದಾರರ ಸಂಖ್ಯೆ 1,45,101 ಹಾಗೂ ಇತರೆ 136 ಮಂದಿ ಮತದಾರರು ಸೇರಿದಂತೆ ಒಟ್ಟು ಈ ಕ್ಷೇತ್ರದಲ್ಲಿ 3,05,392 ಮಂದಿ ಈ ಭಾರಿ ಮತದಾನ ಮಾಡುವವರಿದ್ದಾರೆ.

ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 3,48,106 ಮಂದಿ ನಾಳೆ ಮತದಾನ ಮಾಡಲಿದ್ದಾರೆ. ಈ ಪೈಕಿ ಪುರುಷರ ಸಂಖ್ಯೆ 1,84,799 ಇದ್ದರೆ ಮಹಿಳಾ ಮತದಾರರು 1,63,228 ಜನ ಇದ್ದಾರೆ. ಉಳದಂತೆ 79 ಮಂದಿ ಇತರೆ ಮತದಾರರು ನಾಳೆ ಮೇ 10 ಬುಧವಾರ ಮತದಾನ ಮಾಡಲಿದ್ದಾರೆ.
ಬುಧವಾರ ಮೇ 10ರಂದು ಕರ್ನಾಟಕ ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಶನಿವಾರ ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications