"ಕುಕ್ಕೆ ಸುಬ್ರಹ್ಮಣ್ಯ ಪೂಜೆ ದರ ಹೆಚ್ಚಳ: ದಸರಾ ವೀಕ್ಷಣೆಗೆ ಟಿಕೆಟ್ & ಪಾಸ್ ವ್ಯವಸ್ಥೆ! ಆಕ್ರೋಶ'
ಬೆಂಗಳೂರು, ಸೆಪ್ಟಂಬರ್ 20: ಸಾಹಿತಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನ ಕುರಿತು ಸಲ್ಲಿಕೆಯಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದ ರಾಜ್ಯ ಸರ್ಕಾರದ ನಿರ್ಧಾರವನ್ನು ಕೋರ್ಟ್ ಎತ್ತಿ ಹಿಡಿದಿದೆ. ಇನ್ನೂ ದಸರಾ ವೀಕ್ಷಣೆಗೆ ಪಾಸ್ ಸೌಲಭ್ಯ ಹಾಗೂ ಟಿಕೆಟ್ ಶುಲ್ಕ ನಿಗದಿ ಮಾಡಿರುವುದು ಸೇರಿ ಕೆಲವು ವಿಚಾರಗಳ ವಿರುದ್ಧ ವಿಪಕ್ಷ ನಾಯಕರು ದೂರಿದ್ದಾರೆ.
""ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದೆಂತಹ ವಿಕೃತ ಸಂತೋಷ ಸಿಗುತ್ತೋ ಗೊತ್ತಿಲ್ಲ'' ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರ ದಸರಾ ಹಬ್ಬದ ಉದ್ಘಾಟನೆಗೆ ಬಾನು ಮುಷ್ಕಾಕ್ ಅವರನ್ನು ಆಹ್ವಾನಿಸಿದೆ. ''ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ನಮ್ಮ ಸಂಸ್ಕೃತಿಯ ಪ್ರತೀಕವಾದ ಅರಿಷಿಣ, ಕುಂಕುಮದ ಮೇಲೆ ನಂಬಿಕೆ ಇಲ್ಲದ, ಅನ್ಯಧರ್ಮೀಯರಿಂದ ದಸರಾ ಉದ್ಘಾಟನೆ ಮಾಡಿಸುವ ಹಠ ಸಾಧಿಸಿದ್ದಾಯಿತು.''
"ರಾಜ್ಯದಲ್ಲಿ ದುಬಾರಿ ಪಾಸ್ ನೆಪದಲ್ಲಿ ಜನಸಾಮಾನ್ಯರಿಗೆ ದಸರಾ ವೀಕ್ಷಣೆ ಕಷ್ಟಸಾಧ್ಯ ಮಾಡಿದ್ದಾಯ್ತು. ಈಗ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ.' ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ. ಹಿಂದೂಗಳೆಂದರೆ ಯಾಕಿಷ್ಟು ತಾತ್ಸಾರ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.
ಮಾತ್ರವಲ್ಲದೇ ಕಾಂಗ್ರೆಸ್ ನಾಯಕಿ ರಾಹುಲ್ ಗಾಂಧಿ ಅವರ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ? ಎಂದು ಕಿಡಿ ಕಾರಿದ್ದಾರೆ. ಕರ್ನಾಟಕ ಸರ್ಕಾರ ಈ ಬಾರಿ ದಸರಾ ಉತ್ಸವದಲ್ಲಿ ಪ್ರಮುಖ ಕಾರ್ಯಕ್ರಮಗ ವೀಕ್ಷಣೆಗೆ ಪಾಸ್ ಹಾಗೂ ಟಿಕೆಟ್ ವ್ಯವಸ್ಥೆ ಮಾಡಿದೆ. ಇದರಿಂದ ಸಾರ್ವಜನಿಕರ ಉಚಿತ ದಸರಾ ವೀಕ್ಷಣೆಗೆ ಬ್ರೇಕ್ ಬಿದ್ದಿದೆ. ಸಾರ್ವಜನಿಕರಿಗೆ ಆರ್ಥಿಕ ಹೊರೆ ಸರ್ಕಾರ ಹೊರಿಸುತ್ತಿದೆ ಎಂದು ವಿಪಕ್ಷಗಳು ದೂರಿವೆ.

ಈ ವರ್ಷ ದಸರಾ ವೀಕ್ಷಣೆಗೆ ಟಿಕೆಟ್, ಪಾಸ್ ನಿಗದಿ
* ಅರಮನೆ ಆವರಣದಲ್ಲಿ ಜಂಬೂಸವಾರಿ ವೀಕ್ಷಣೆಗೆ: 3500 ರೂಪಾಯಿ
* ಗೋಲ್ಡ್ ಕಾರ್ಡ್: 6500 ರೂಪಾಯಿ
* ಪಂಜಿನ ಕವಾಯತು: 1500 ರೂಪಾಯಿ
* ಯುವ ದಸರಾ: 5000 & 2000 ರೂಪಾಯಿ
* ಡ್ರೋನ್ ಷೋ: 1000 ರೂಪಾಯಿ.
ಸೆಪ್ಟಂಬರ್ 23-27ರವರೆಗೆ ದಸರಾದಲ್ಲಿ ಪಾಲ್ಗೊಳ್ಳಲು: 2000 ರೂ. ಮತ್ತು 5000 ರೂ.ಟಿಕೆಟ್ ದರ ನಿಗಿದ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ 100 ರೂಪಾಯಿ ಹೆಚ್ಚಳ ಮಾಡಲಾಗಿದೆ. ಸುಮಾರು ಒಂದೂವರೆ ದಶಕದ ಬಳಿಕ ಏರಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರಗಳು ಹಾಗೂ ದಸರಾ ಆಚರಣೆಯಲ್ಲಿ ಸರ್ಕಾರ ಕೈಗೊಂಡ ನಿರ್ಧಾರಗಳ ವಿರುದ್ಧ ವಿಪಕ್ಷ ನಾಯಕರು ಕಿರಿ ಕಾರಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications