Tiger Claw: ನಟ ಜಗ್ಗೇಶ್ಗೆ ಬಿಗ್ ರಿಲೀಫ್ ನೀಡಿ ಹೈಕೋರ್ಟ್
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದಲ್ಲಿ ಹುಲಿ ಉಗುರು ಧರಿಸಿದವರ ವಿರುದ್ಧ ಅರಣ್ಯಾಧಿಕಾರಿಗಳು ಸಮರ ಸಾರಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಮತ್ತು ನಟ ಜಗ್ಗೇಶ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅವರಿಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಹುಲಿ ಉಗುರು ಧರಿಸಿದ್ದರ ಬಗ್ಗೆ ಜಗ್ಗೇಶ್ ಅವರ ಹೇಳಿಕೆ ವಿಡಿಯೋ ಆಧರಿಸಿ ಅರಣ್ಯಾಧಿಕಾರಿಗಳು ಅವರ ಮನೆ ಶೋಧಿಸಿದ್ದರು. ಉಲಿ ಉಗುರು ಪೆಂಡೆಂಟ್ ಅನ್ನು ವಶಕ್ಕೆ ಪಡೆದಿದ್ದು, ನೋಟಿಸ್ ಜಾರಿ ಮಾಡಿದ್ದರು. ಮನೆ ಶೋಧಿಸಿದ ಅರಣ್ಯಾಧಿಕಾರಿಗಳಿಗಳ ಕ್ರಮ ಪ್ರಶ್ನಿಸಿ ಜಗ್ಗೇಶ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಅರಣ್ಯಾಧಿಕಾರಿಗಳ ನೋಟಿಸ್ಗೆ ತಡೆ ನೀಡಿ ಸೋಮವಾರ ಆದೇಶಿಸಿದೆ.

ಇತ್ತೀಚೆಗೆ ಹುಲಿ ಉಗುರಿನ ಧರಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಜಗ್ಗೇಶ್ ಜಾರಿ ಮಾಡಿದ್ದರು. ಈ ನೋಟಿಸ್ ರದ್ದುಪಡಿಸಬೇಕು ಮತ್ತು ತಮ್ಮ ಮನೆ ಶೋಧ ನಡೆಸಿರುವುದನ್ನು ಕಾನೂನು ಬಾಹಿರ ಕ್ರಮ ಎಂದು ಘೋಷಿಸಬೇಕು ಕೋರಿ ನಟ ಜಗ್ಗೇಶ್ ಅವರು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಂಚಾರ ಅರಣ್ಯ ತಂಡ) ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಅರ್ಜಿಯಲ್ಲಿ ಅವರು ಪ್ರತಿವಾದಿ ಮಾಡಿದ್ದರು.
ಅ.25ರಂದು ನೋಟಿಸ್, ಅಂದೆ ಮನೆ ಶೋಧ
ಹುಲಿ ಉಗುರು ಧರಿಸಿದ್ದರ ಬಗ್ಗೆ ಬೆಂಗಳೂರಿನ ಅರಣ್ಯಾಧಿಕಾರಿಗಳು ತಮ್ಮ ಮುಂದೆ ಹಾಜರಾಗಿ ವಿವರಣೆ ನೀಡಿ ಎಂದು ಸೂಚಿಸಿ ಜಗ್ಗೇಶ್ ಅವರಿಗೆ ಕಳೆದ ಅಕ್ಟೋಬರ್ 25 ರಂದು ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ಅಲ್ಲದೇ ಅಂದೇ ನಟ ಜಗ್ಗೇಶ್ ಮಲ್ಲೇಶ್ವರಂ ನಿವಾಸಕ್ಕೆ ಭೇಟಿ ನೀಡಿ ಅಧಿಕಾರಿಗಳು ಶೋಧಿಸಿದ್ದರು. ಮನೆಯನ್ನೆಲ್ಲ ತಡಕಾಡಿ ಹುಲಿ ಉಗುರು ವಶಕ್ಕೆ ಪಡೆದಿದ್ದರು.
ಅರಣ್ಯಾಧಿಕಾರಿಗಳ ಈ ಕ್ರಮ ಪ್ರಶ್ನಿಸಿ ಜಗ್ಗೇಶ್ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ಜಗ್ಗೇಶ್ ಅವರ ಮನವಿ ಪುರಸ್ಕರಿಸಿದೆ. ಅರಣ್ಯಾಧಿಕಾರಿಗಳಿಗೆ ಹಿನ್ನಡೆ ಆಗಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications