ಬಂಡಿಪುರ: ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ!
ಬೆಂಗಳೂರು, ಜು. 29: ಬರೀ ಕೋವಿಡ್ ಸಂಕಷ್ಟದ ಸುದ್ದಿಗಳನ್ನೇ ಕೇಳಿದ್ದ ಪ್ರಾಣಿ ಪ್ರೀಯರಿಗೆ ಸಂತಸದ ಸುದ್ದಿ ಬಂದಿದೆ. ರಾಷ್ಟ್ರೀಯ ಉದ್ಯಾನವನ ಬಂಡಿಪುರದಲ್ಲಿ ಹುಲಿ ಸಂಖ್ಯೆ ಹೆಚ್ಚಳಗೊಂದಿಡುರುವುದು ವನ್ಯಜೀವಿ ಪ್ರೇಮಿಗಳಲ್ಲಿ ಹರ್ಷ ತಂದಿದೆ.
Recommended Video
ಇಂದು ಅಂತರ ರಾಷ್ಟ್ರೀಯ ಹುಲಿ ದಿನಾಚರಣೆ. ಇದೇ ಹಿನ್ನೆಲೆಯಲ್ಲಿ ಬಂಡಿಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹುಲಿ ಯೋಜನೆ ನಿರ್ದೇಶಕ ಬಾಲಚಂದ್ರು ಅವರು ಕೊಟ್ಟಿರುವ ಮಾಹಿತಿಯ ಪ್ರಕಾರ, ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಬರೋಬ್ಬರಿ 156 ಹುಲಿಗಳನ್ನು ಗುರುತಿಸಲಾಗಿದೆ.

ಬಂಡಿಪುರ ರಾಷ್ಟ್ರೀಯ ಉದ್ಯಾನವನ 1974ರ ಪ್ರಾಜೆಕ್ಟ್ ಟೈಗರ್ ಅಡಿಯಲ್ಲಿ ಹುಲಿ ಮೀಸಲು ಪ್ರದೇಶವೆಂದು ಘೋಷಣೆಯಾಗಿತ್ತು, ಈಗ ಹುಲಿ ಸಂರಕ್ಷಣಾ ಪ್ರದೇಶವಾಗಿ ಮಾರ್ಪಡಿಸಲಾಗಿದೆ. ಒಟ್ಟು ಸುಮಾರು 874 ಚದರ ಕಿಲೋ ಮೀಟರ್ ವ್ಯಾಪ್ತಿ ಹೊಂದಿರುವ ಬಂಡಿಪುರ ಅರಣ್ಯ ಪ್ರದೇಶ, ದಕ್ಷಿಣ ಭಾರತದ ಅತಿ ದೊಡ್ಡ ಹುಲಿ ಸಂರಕ್ಷಿತ ಪ್ರದೇಶವಾಗಿದೆ.

ಹುಲಿಗಳ ಸಂತತಿ ಹೆಚ್ಚಳಕ್ಕೆ ಸಾಕಷ್ಟು ಶ್ರಮ ವಹಿಸಲಾಗಿದೆ. ಟೈಗರ್ ಪ್ರಾಜೆಕ್ಟ್ ಆದ ನಂತರ ಆ್ಯಂಟಿ ಪೊಚಿಂಗ್ ಕ್ಯಾಂಪ್ಗಳಲ್ಲಿ ಹೆಚ್ಚಳವಾಗಿದೆ. ಅರಣ್ಯ ಪ್ರದೇಶದಲ್ಲಿ ಕಟ್ಟೆಚ್ಚರ ಇಟ್ಟಿರುವುದು ಹುಲಿ ಸಂತತಿ ಹೆಚ್ಚಳಕ್ಕೆ ಕಾರಣವಾಗಿದೆ. ಈವರೆಗೆ 130 ಹುಲಿಗಳ ಸಂಖ್ಯೆ ದಾಖಲಾಗಿತ್ತು. ಇಂದು ಅಂತರರಾಷ್ಟ್ರೀಯ ಹುಲಿ ದಿನಾಚರಣೆ, ನೂತನ ದತ್ತಾಂಶದಂತೆ 156 ಹುಲಿಗಳ ಸಂಖ್ಯೆ ಅಧಿಕೃತ ಘೋಷಣೆಯಾಗಲಿದೆ. ಚಾಮರಾಜನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬಂಡಿಪುರ ರಾಷ್ಟ್ರೀಯ ಉದ್ಯಾನವನವಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications