ಕೆಮ್ಮಣ್ಣುಗುಂಡಿಯಲ್ಲಿ ಹುಲಿ ಪ್ರತ್ಯಕ್ಷ; ಕಣ್ತುಂಬಿಕೊಂಡ ಪ್ರವಾಸಿಗರು, ವಿಡಿಯೋ ವೈರಲ್
ಚಿಕ್ಕಮಗಳೂರು: ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿಯಲ್ಲಿ ಪ್ರವಾಸಿಗರಿಗೆ ಅಪರೂಪದ ಹಾಗೂ ರೋಮಾಂಚನಕಾರಿ ಅನುಭವ ಲಭಿಸಿದೆ. ಇಲ್ಲಿನ ಜಂಗಲ್ ರೆಸಾರ್ಟ್ನಿಂದ ಹೆಬ್ಬೆ ಫಾಲ್ಸ್ ಕಡೆಗೆ ತೆರಳುತ್ತಿದ್ದ ಸಫಾರಿ ವಾಹನದ ಮುಂದೆ ಅರಣ್ಯ ರಸ್ತೆಯಲ್ಲೇ ಹುಲಿ ಪ್ರತ್ಯಕ್ಷವಾಗಿ ಪ್ರವಾಸಿಗರನ್ನು ಅಚ್ಚರಿಗೊಳಿಸಿದೆ.
ರಸ್ತೆಯ ಮಧ್ಯೆ ನಿಧಾನವಾಗಿ ನಡೆದು ಹೋಗುತ್ತಿದ್ದ ಹುಲಿಯ ಗಾಂಭೀರ್ಯತೆ ನಡೆಯು ಪ್ರವಾಸಿಗರನ್ನು ಕೆಲ ಕ್ಷಣ ಮಂತ್ರಮುಗ್ಧರನ್ನಾಗಿಸಿದೆ. ಅರಣ್ಯದೊಳಗೆ ಹುಲಿಯನ್ನು ನೇರವಾಗಿ ನೋಡುವ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪ್ರವಾಸಿಗರು ಆ ದೃಶ್ಯವನ್ನು ಕಣ್ಣುಂಬಿಕೊಂಡಿದ್ದಾರೆ. ಈ ದೃಶ್ಯಗಳು ವೈರಲ್, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಭದ್ರಾ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಈ ಹುಲಿಯ ದೃಶ್ಯಗಳನ್ನು ಪ್ರವಾಸಿಗರು ತಮ್ಮ ಮೊಬೈಲ್ ಫೋನ್ಗಳಲ್ಲಿ ಸೆರೆಹಿಡಿದಿದ್ದು, ಆ ವೀಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಕೆಮ್ಮಣ್ಣುಗುಂಡಿಯಲ್ಲಿ ಹುಲಿ ದರ್ಶನ ಎಂದು ಹಂಚಿಕೊಳ್ಳಲಾಗಿರುವ ದೃಶ್ಯಗಳು ಸಾವಿರಾರು ವೀಕ್ಷಣೆ ಮತ್ತು ಹಂಚಿಕೆ ಪಡೆಯುತ್ತಿವೆ. ಅರಣ್ಯ ಪ್ರಿಯರು ಹಾಗೂ ಪ್ರವಾಸಿಗರು ಈ ದೃಶ್ಯಗಳನ್ನು ಕೌತುಕದಿಂದ ವೀಕ್ಷಿಸಿದ್ದು, ಕೆಮ್ಮಣ್ಣುಗುಂಡಿಯ ಅರಣ್ಯ ಪರಿಸರ ಇನ್ನಷ್ಟು ಶ್ರೀಮಂತವಾಗಿದೆ ಎಂಬುದಕ್ಕೆ ಇದು ಸಾಕ್ಷಿ ಎನ್ನುತ್ತಿದ್ದಾರೆ.
ಹಿಂದೆಯೂ ಕಾಣಿಸಿಕೊಂಡಿದ್ದ ಹುಲಿಗಳು
ಕೆಲ ದಿನಗಳ ಹಿಂದಷ್ಟೇ ಇಲ್ಲಿನ ತಣಿಗೆಬೈಲು ಹಾಗೂ ಚಂದ್ರದ್ರೋಣ ಪರ್ವತ ಸಾಲುಗಳಲ್ಲಿಯೂ ಹುಲಿಗಳ ಸಂಚಾರ ಕಂಡುಬಂದಿತ್ತು. ಇದೀಗ ಮತ್ತೆ ಕೆಮ್ಮಣ್ಣುಗುಂಡಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿರುವುದು ಈ ಅರಣ್ಯ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಹಾಗೂ ಚಲನವಲನ ಹೆಚ್ಚಾಗುತ್ತಿರುವುದನ್ನು ಸೂಚಿಸುತ್ತಿದೆ.
ಪ್ರವಾಸಿಗರಿಗೆ ಎಚ್ಚರಿಕೆ
ಹುಲಿಗಳ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆ ಹೆಬ್ಬೆ ಫಾಲ್ಸ್ ಹಾಗೂ ಸುತ್ತಮುತ್ತಲಿನ ಅರಣ್ಯ ಮಾರ್ಗಗಳಲ್ಲಿ ಸಂಚರಿಸುವ ಪ್ರವಾಸಿಗರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚಿಸಿದೆ. ಅನುಮತಿ ಇಲ್ಲದೆ ಅರಣ್ಯ ಒಳಭಾಗಕ್ಕೆ ಪ್ರವೇಶಿಸಬಾರದು. ವಾಹನದಿಂದ ಇಳಿದು ಫೋಟೋ ಅಥವಾ ವೀಡಿಯೋ ತೆಗೆಯಬಾರದು. ಶಬ್ದ ಮಾಡುವುದು, ಪ್ರಾಣಿಗಳನ್ನು ಕೆರಳಿಸುವ ವರ್ತನೆ ತಪ್ಪಿಸಬೇಕು ಎಂದು ಸಲಹೆ ನೀಡಿದೆ. ಪ್ರವಾಸಿಗರ ಸುರಕ್ಷತೆ ಹಾಗೂ ವನ್ಯಜೀವಿಗಳ ಸಂರಕ್ಷಣೆಯೇ ನಮ್ಮ ಮೊದಲ ಆದ್ಯತೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಕೆಮ್ಮಣ್ಣುಗುಂಡಿಯ ಈ ಹುಲಿ ದರ್ಶನ ಒಂದು ರೋಮಾಂಚಕಾರಿ ಘಟನೆ ಮಾತ್ರವಲ್ಲದೆ, ಅರಣ್ಯ ಜೀವ ವೈವಿಧ್ಯ ಉಳಿದಿದೆ ಎಂಬ ಭರವಸೆಯ ಸಂಕೇತವೂ ಆಗಿದೆ. ಪ್ರಕೃತಿಯ ಮಡಿಲಲ್ಲಿ ಪ್ರವಾಸ ಅನುಭವಿಸುವಾಗ, ಮಾನವ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಅಗತ್ಯ ಎಂಬ ಸಂದೇಶವನ್ನು ಅರಣ್ಯಾಧಿಕಾರಿಗಳು ನೀಡಿದ್ದಾರೆ.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications