'ನವೆಂಬರ್ 10ರಂದು ಟಿಪ್ಪು ಜಯಂತಿ ಏಕೆ?'
ಬೆಂಗಳೂರು, ನವೆಂಬರ್ 12 : 'ಟಿಪ್ಪು ಜಯಂತಿಯನ್ನು ನವೆಂಬರ್ 20ರ ಬದಲು 10ರಂದು ಏಕೆ ಆಚರಣೆ ಮಾಡಲಾಯಿತು? ಎಂದು ಕರ್ನಾಟಕ ಸರ್ಕಾರ ವಿವರಣೆ ನೀಡಬೇಕು' ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
ಒನ್ ಇಂಡಿಯಾ ಜೊತೆ ಮಾತನಾಡಿದ ಪ್ರತಾಪ್ ಸಿಂಹ ಅವರು, 'ನವೆಂಬರ್ 10ರ ದಿನಾಂಕವನ್ನು ಏಕೆ ಆಯ್ಕೆ ಮಾಡಲಾಯಿತು? ಎಂದು ಸರ್ಕಾರ ಉತ್ತರ ನೀಡಬೇಕು. ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಿಸಲು ದಿನಾಂಕ ಆಯ್ಕೆ ಮಾಡಿರುವುದರಿಂದ ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ' ಎಂದರು. [ಪ್ರತಾಪ್ ಸಿಂಹಗೆ ಕೊಲೆ ಬೆದರಿಕೆ]

ದೂರು ದಾಖಲಿಸಲಾಗಿದೆ : ತಮಗೆ ಬಂದಿರುವ ಜೀವ ಬೆದರಿಕೆ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ ಅವರು, 'ಈ ಕುರಿತು ಲಿಖಿತವಾದ ದೂರು ನೀಡಿದ್ದೇನೆ. ಈ ಬಗ್ಗೆ ಸೂಕ್ತವಾದ ತನಿಖೆಯಾಗುತ್ತದೆ' ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ. [ಟಿಪ್ಪು ದಿನಾಚರಣೆ ವಿರೋಧಿಸಿ ಕೊಡಗು ಬಂದ್]
'ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಯೋಧ ಎಂದು ಭಾರತ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಅಗತ್ಯವಾದ ದಾಖಲೆಗಳನ್ನು ಸಂಗ್ರಹಣೆ ಮಾಡಲು ನಾನು ಪ್ರಯತ್ನ ನಡೆಸುತ್ತಿದ್ದೇನೆ. ಟಿಪ್ಪುವಿನ ಸ್ವತಂತ್ರ ಪರಿಕಲ್ಪನೆ ಬೇರೆಯಾಗಿತ್ತು. ಈ ಕುರಿತು ದಾಖಲೆ ಸಂಗ್ರಹಣೆ ಮಾಡುತ್ತಿದ್ದೇನೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಆಶ್ಚರ್ಯವಾಗುತ್ತದೆ : ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಯೋಧ ಎಂದು ಹೇಳಿದಾಗ ನನಗೆ ಆಶ್ಚರ್ಯವಾಗುತ್ತದೆ ಎಂದು ಹೇಳಿರುವ ಪ್ರತಾಪ್ ಸಿಂಹ ಅವರು, ನನ್ನ ಪುಸ್ತಕದಲ್ಲಿ ಟಿಪ್ಪುವಿನ ನಿಜವಾದ ಮುಖವನ್ನು ಅನಾವರಣಗೊಳಿಸಿದ್ದೇನೆ. ಟಿಪ್ಪುವಿನ ಸ್ವಾತಂತ್ರ್ಯದ ಪರಿಕಲ್ಪನೆಯೇ ಬೇರೆಯಾಗಿತ್ತು ಎಂದು ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications