ಟಿಪ್ಪು ಜಯಂತಿ:ಸರ್ಕಾರ ಸೇರು,ಪ್ರತಿಪಕ್ಷ ಬಿಜೆಪಿ ಸವ್ವಾಸೇರು!
ಬೆಂಗಳೂರು, ನವೆಂಬರ್ 10: ಪರ, ವಿರೋಧದ ನಡುವೆ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದೆ. ಒಂದೆಡೆ ಬಿಜೆಪಿ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರೆ ಇನ್ನೊಂದೆಡೆ ಕಾಂಗ್ರೆಸ್ ಟಿಪ್ಪು ಜಯಂತಿ ಮಾಡಿಯೇ ತೀರುತ್ತೇವೆ ಎಂದು ಹಠ ಹಿಡಿದಿವೆ. ಈ ಎರಡು ಪಕ್ಷಗಳ ನಡುವಿನ ತಿಕ್ಕಾಟದಲ್ಲಿ ಜೆಡಿಎಸ್ ಯಾವುದೇ ಬೇಡ ಎಂದು ತಟಸ್ಥ ನಡೆಯನ್ನು ತೋರುತ್ತಿದೆ.
ಟಿಪ್ಪು ಜಯಂತಿ ವಿರೋಧಿಸಿ ಬೆಂಗಳೂರು, ಚಿತ್ರದುರ್ಗ, ಕೊಡಗು, ರಾಮನಗರ, ನೆಲಮಂಗಲ, ತುಮಕೂರಿನಲ್ಲಿ ಪ್ರತಿಭಟನೆ ಆರಂಭವಾಗಿದೆ. ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕೊಡಗಿನಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಇದಕ್ಕೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ.
ಮುನ್ನೆಚ್ಚರಿಕೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಇನ್ನು ಸೂಕ್ಷ್ಮ ಪ್ರದೇಶಗಳಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿಯಾಗಿದೆ. ಚಿತ್ರದುರ್ಗದಲ್ಲಿ ಏಳು ಕಡೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ವಾಹನಗಳನ್ನು ತಪಾಸಣೆ ನಡೆಸಿ ಒಳಬಿಡಲಾಗುತ್ತಿದೆ.