Get Updates
Get notified of breaking news, exclusive insights, and must-see stories!

ಗಿರೀಶ್ ಕಾರ್ನಾಡ್ ವಿರುದ್ಧ ಬೆಂಗಳೂರು, ಮಂಡ್ಯದಲ್ಲಿ ದೂರು

ಬೆಂಗಳೂರು, ನವೆಂಬರ್ 12 : 'ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು' ಎಂದು ಹೇಳಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಮಂಡ್ಯ ಮತ್ತು ಬೆಂಗಳೂರಿನಲ್ಲಿ ದೂರು ದಾಖಲಾಗಿವೆ.

ಈ ದೂರುಗಳನ್ನು ಪೊಲೀಸರು ಸ್ವೀಕರಿಸಿದ್ದು ಅಧಿಕೃತವಾಗಿ ದಾಖಲಿಸಿಕೊಂಡಿಲ್ಲ. ಇಂತಹ ದೂರುಗಳನ್ನು ಹೇಗೆ ದಾಖಲಿಸಿಕೊಳ್ಳಬೇಕು? ಎಂದು ಪೊಲೀಸರು ಕಾನೂನು ಇಲಾಖೆಯ ಸಲಹೆಯನ್ನು ಕೇಳಿದ್ದಾರೆ. [ಗಿರೀಶ್ ಕಾರ್ನಾಡ್ ಅವರಿಗೆ ಜೀವ ಬೆದರಿಕೆ ಸಂದೇಶ]

tippu sultan

ಬೆಂಗಳೂರು : ಬೆಂಗಳೂರಿನಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ದೂರು ದಾಖಲಾಗಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಕಾರ್ನಾಡ್ ಅವರು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. [ಕ್ಷಮೆ ಯಾಚಿಸಿದ ಗಿರೀಶ್ ಕಾರ್ನಾಡ್]

ಮಂಡ್ಯ : ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಿರೀಶ್ ಕಾರ್ನಾಡ್ ಸೇರಿದಂತೆ ಇತರ ಮೂವರ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರು ಈ ದೂರು ನೀಡಿದ್ದಾರೆ. ಕಾರ್ನಾಡ್ ಅವರ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಕಾನೂನು ಅಭಿಪ್ರಾಯವೇಕೆ? : 'ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು' ಎಂಬುದು ಗಿರೀಶ್ ಕಾರ್ನಾಡ್ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದ್ದರಿಂದ, ಈ ವಿಚಾರದಲ್ಲಿ ಹೇಗೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಕಾನೂನು ಇಲಾಖೆ ಸಲಹೆ ಕೇಳಲಾಗಿದೆ.

ಕ್ಷಮೆ ಕೇಳಿದ್ದಾರೆ? : ತಮ್ಮ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾದ ಕಾರಣ ಗಿರೀಶ್ ಕಾರ್ನಾಡ್ ಕ್ಷಮೆ ಕೇಳಿದ್ದಾರೆ. 'ತಾವು ದುರುದ್ದೇಶದಿಂದ ಈ ಹೇಳಿಕೆ ನೀಡಿರಲಿಲ್ಲ. ನಾನು ನೀಡಿರುವ ಹೇಳಿಕೆಯಿಂದಾಗಿ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ' ಎಂದು ಕಾರ್ನಾಡ್ ಬುಧವಾರ ಕ್ಷಮೆ ಯಾಚಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+