ಹೊಸಕೋಟೆ ಬಸ್ ಅಪಘಾತ: ಮೃತರ ಸಂಖ್ಯೆ 5ಕ್ಕೆ
ಹೊಸಕೋಟೆ, ಜ.20- ತಿರುಪತಿ-ಬೆಂಗಳೂರು ಬಸ್ ಹೊಸಕೋಟೆ ಬಳಿ ಅಪಘಾತಕ್ಕೀಡಾದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಗಾಯಾಳುಗಳನ್ನು ಸಂತೈಸಿದರು. ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಮೃತರನ್ನು ಬೆಂಗಳೂರಿನ ಈಜೀಪುರದ ಮನಸ್ ಕುಮಾರ್ (6), ನೆಲ್ಲೂರು ಮೂಲದ ಅನುಷಾ (25), ಪ್ರಸಾದ್ ಚಿನ್ನಂ, ವಿಜಯಕುಮಾರ್ (35) ಎಂದು ಗುರುತಿಸಲಾಗಿದೆ.
ಅಫಘಾತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ. ತೀವ್ರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೆಳಗಿನ ಸುದ್ದಿ: ಬೆಳಗಿನ ಜಾವ ಮತ್ತೊಂದು ಭೀಕರ ಬಸ್ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ತಿರುಪತಿಯಿಂದ ಹೊರಟು ಬೆಂಗಳೂರಿಗೆ ಬರುತ್ತಿದ್ದ ಬಸ್ ಹೊಸಕೋಟೆ ಬಳಿ MVJ College ಬಳಿ ಅಪಘಾತಕ್ಕೀಡಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅತಿ ವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಹೊಸಕೋಟೆಯಿಂದ ಕೋಲಾರಕ್ಕೆ ತೆರಳುವ ಮಾರ್ಗದಲ್ಲಿ ದಂಡುಪಾಳ್ಯ ಕ್ರಾಸ್ ಸಮೀಪ ಈ ಅಪಘಾತ ಸಂಭವಿಸಿದೆ. ರಾಜೇಶ್ ಟ್ರಾವೆಲ್ಸ್ ಗೆ ಸೇರಿದ ವೋಲ್ವೋ ಬಸ್ಸು ವೋಲ್ವೋ ಫ್ಯಾಕ್ಟರಿ ಬಳಿ ರೋಡ್ ಡಿವೈಡರ್ ಗೆ ಡಿಕ್ಕಿಯಾಗಿ ಕಂದಕಕ್ಕೆ ಉರುಳಿ ಅಪಘಾತಕ್ಕೆ ತುತ್ತಾಗಿದೆ. ರಾತ್ರಿ 10.30ಕ್ಕೆ ಹೊರಟ ಬಸ್ ಬೆಳಗಿನ ಜಾವ 4.30ರಲ್ಲಿ ಅಪಘಾತಕ್ಕೀಡಾಗಿದೆ.
ಬಸ್ಸಿನಲ್ಲಿ 50 ಮಂದಿ ಪ್ರಯಾಣಿಸುತ್ತಿದ್ದರು. ಅನೇಕರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಅಂದಾಜಿದೆ. ತಕ್ಷಣಕ್ಕೆ ಬಸ್ ಡೋರ್ ತೆಗೆಯಲು ಸಾಧ್ಯವಾಗದೆ ಪ್ರಯಾಣಿಕರನ್ನು ಹೊರತೆಗೆಯಲು ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬಸ್ಸಿನ ಡೋರ್ ಇದ್ದ ಭಾಗ ನೆಲಭಾಗಕ್ಕೆ ಅವಚಿಕೊಂಡಿದೆ. ಇದು ಎಸಿ ವೋಲ್ವೋ ಬಸ್ ಆಗಿದ್ದರಿಂದ ಒಂದೇ ಡೋರ್ ಇದ್ದು, ಚಾಲಕನ ಬಳಿಯಿದ್ದ ಚಿಕ್ಕ ಡೋರಿನಿಂದ ಪ್ರಯಾಣಿಕರು ಹೊರಬಂದಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications